Get Updates
Get notified of breaking news, exclusive insights, and must-see stories!

Telangana polls 2023: ತೆರೆಯಲೇ ಇಲ್ಲ ಕಾಂಗ್ರೆಸ್‌ ಬಾಗಿಲು- ರೊಚ್ಚಿಗೆದ್ದ ವೈಎಸ್ ಶರ್ಮಿಳಾರಿಂದ ಏಕಾಂಗಿ ಹೋರಾಟದ ನಿರ್ಧಾರ

ಹೈದರಾಬಾದ್‌, ಅಕ್ಟೋಬರ್‌ 12: ವೈಎಸ್‌ಆರ್ ತೆಲಂಗಾಣ ಪಕ್ಷದ (ವೈಎಸ್‌ಆರ್‌ಟಿಪಿ) ನಾಯಕಿ ವೈಎಸ್‌ ಶರ್ಮಿಳಾ ಅವರಿಗೆ ಕಾಂಗ್ರೆಸ್‌ 'ಕೈ' ಕೊಟ್ಟಿದೆ. ತೆಲಂಗಾಣ ವಿಧಾನಸಭೆಗೆ ಕೆಲ ತಿಂಗಳು ಬಾಕಿ ಇರುವಾಗ ಶರ್ಮಿಳಾ ಅವರು ಕಾಂಗ್ರೆಸ್‌ ಸೇರಲು ಯತ್ನಿಸಿದ್ದರು. ತಮ್ಮ ಪಕ್ಷವನ್ನು ಕಾಂಗ್ರೆಸ್‌ನೊಳಗೆ ವಿಲೀನಗೊಳಿಸುವದಾಗಿ ತಿಳಿಸಿದ್ದಾರೆ. ಆದರೆ, ಅವರ ಕನಸು ನನಸಾಗಲೇ ಇಲ್ಲ.

ಈಗ ಎಲ್ಲ ಊಹಾಪೋಹಗಳಿಗೆ ವೈಎಸ್‌ ಶರ್ಮಿಳಾ ತೆರೆ ಎಳೆದಿದ್ದಾರೆ. ನವೆಂಬರ್ 30 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಗುರುವಾರ ಘೋಷಿಸಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿಯಾಗಿರುವ ಶರ್ಮಿಳಾ ಅವರು, ತಮ್ಮ ತಾಯಿ ವೈಎಸ್ ವಿಜಯಮ್ಮ ಮತ್ತು ಪತಿ ಅನಿಲ್ ಕುಮಾರ್ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಹೇಳಿದ್ದಾರೆ.

telangana-election-2023

ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಿದ್ದೇನೆ. ಆದರೆ, ಕಾಂಗ್ರೆಸ್ ಹೈಕಮಾಂಡ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಶರ್ಮಿಳಾ ತಿಳಿಸಿದ್ದಾರೆ.

ಪಲೇರ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಶರ್ಮಿಳಾ ಹೇಳಿದ್ದಾರೆ. 'ನಾನು ಪಲೇರ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ. ನಮ್ಮ ಪಕ್ಷವು ಎಲ್ಲಾ 119 ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲಿದೆ. ನನ್ನ ತಾಯಿ ವಿಜಯಮ್ಮ ಮತ್ತು ಪತಿ ಅನಿಲ್ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಬಹುದು' ಎಂದು ಅವರು ಹೇಳಿದ್ದಾರೆ.

ನನಗೆ ಎರಡು ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಲು ಒತ್ತಾಯಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

telangana-election-2023

ಕೆಸಿಆರ್ ವಿರೋಧಿ ಮತಗಳು ವಿಭಜನೆಯಾಗುವುದು ಬೇಡ ಎಂಬುದ ನಮ್ಮ ಆಶಯವಾಗಿದೆ. ಈ ಕುರಿತು ಕಾಂಗ್ರೆಸ್‌ನೊಂದಿಗೆ ಮಾತನಾಡಿದ್ದೇವೆ. ನಾವು ನಾಲ್ಕು ತಿಂಗಳಿನಿಂದ ಕಾಯುತ್ತಿದ್ದೇವೆ. ಆದರೆ, ಕಾಂಗ್ರೆಸ್‌ನಿಂದ ಯಾವುದೇ ಸೂಚನೆ ನಮಗೆ ಬಂದಿಲ್ಲವೆಂದು ಅವರು ಹೇಳಿದ್ದಾರೆ.

ಶರ್ಮಿಳಾ ಅವರು ಜುಲೈ 8, 2021 ರಂದು ತಮ್ಮ ತಂದೆ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ವೈ ಎಸ್ ರಾಜಶೇಖರ್ ರೆಡ್ಡಿ (ವೈಎಸ್ಆರ್) ಅವರ ಜನ್ಮದಿನದಂದು ಹೊಸ ಪಕ್ಷವನ್ನು ಸ್ಥಾಪಿಸಿದರು.

ಇಡೀ ರಾಜ್ಯಾದ್ಯಂತ ಬೆಂಬಲವನ್ನು ಹೊಂದಿರುವುದಾಗಿ ಪಕ್ಷವು ಪ್ರತಿಪಾದಿಸುತ್ತಿದೆ. ಆದರೆ, ಕಳೆದ ಚುನಾವಣೆಯ ಸಮಯದಲ್ಲಿ ಪಕ್ಷವು ಒಂದೇ ಒಂದು ಸ್ಥಾನವನ್ನೂ ಗೆದ್ದಿಲ್ಲ. ಪಕ್ಷವು ಯಾವುದೇ ಶಾಸಕರನ್ನು ಹೊಂದಿಲ್ಲ.

telangana-election-2023

ತೆಲಂಗಾಣ ವಿಧಾನಸಭೆ ಚುನಾವಣೆ

119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ತೆಲಂಗಾಣವು 3 ಕೋಟಿಗೂ ಅಧಿಕ ಮತದಾರರನ್ನು ಹೊಂದಿದೆ. ಇತ್ತೀಚೆಗೆ 17 ಲಕ್ಷ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ ಆಯೋಗ ಅಭಿಪ್ರಾಯಪಟ್ಟಿದೆ.

ಆಡಳಿತರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್), ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆಯನ್ನು ಏರ್ಪಡುವ ನಿರೀಕ್ಷೆ ಇದೆ. 2018 ರ ಚುನಾವಣೆಯಲ್ಲಿ, ಬಿಆರ್‌ಎಸ್‌ 88 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ 19 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಎಐಎಂಐಎಂ 7 ಕ್ಷೇತ್ರಗಳಲ್ಲಿ ಜಯಸಾಧಿಸಿದೆ. ತೆಲುಗು ದೇಶಂ ಪಕ್ಷ 2 ಸ್ಥಾನ, ಬಿಜೆಪಿ 1 ಸ್ಥಾನದಲ್ಲಿ ಗೆದ್ದಿದೆ.

ಟಿಆರ್‌ಎಸ್ ಶೇ 46.87ರಷ್ಟು ಮತಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್ ಶೇ 28.43ರಷ್ಟು ಮತಗಳನ್ನು ಗಳಿಸಿದರೆ, ಎಐಎಂಐಎಂ ಶೇ 2.71 ರಷ್ಟು ಮತಗಳನ್ನು ಗಳಿಸಿದೆ. ಟಿಡಿಪಿ ಶೇ 3.51 ಮತಗಳನ್ನು ಪಡೆದರೆ, ಬಿಜೆಪಿ ಶೇ 6.98ರಷ್ಟು ಮತಗಳನ್ನು ಪಡೆದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+