C-PAC Telangana Exit Poll 2023: ಕಾಂಗ್ರೆಸ್ಗೆ ಗೆಲವು, ಬಿಆರ್ಎಸ್ಗೆ ಸೋಲು, ಬಿಜೆಪಿಗೆ ಮುಖಭಂಗ?
ನವದೆಹಲಿ, ನವೆಂಬರ್ 30: ತೆಲಂಗಾಣದಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಇದರ ಬೆನ್ನಲ್ಲೆ ಹಲವು ಸುದ್ದಿ ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ ಬಿಡುಗಡೆ ಮಾಡಿವೆ. ಅದೇ ರೀತಿ 'ಸಿ-ಪ್ಯಾಕ್' ಸಂಸ್ಥೆ ಸಮೀಕ್ಷೆಯು ತೆಲಂಗಾಣದಲ್ಲಿ ಈ ಹಿಂದಿನ ಆಡಳಿತ ಪಕ್ಷಕ್ಕೆ ಬಿಆರ್ಎಸ್ಗೆ ಸೋಲಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಚುನಾವಣೋತ್ತರ C-PAC ಸಮೀಕ್ಷೆ ಉಲ್ಲೇಖಿಸಿರುವಂತೆ, ಬಿಆರ್ಎಸ್ಗೆ 41 ಸೀಟು, ಕಾಂಗ್ರೆಸ್ಗೆ 65 ಸ್ಥಾನ ಲಭಿಸಲಿವೆ ಎಂದು ತಿಳಿಸಿರುವುದು ಕಾಂಗ್ರೆಸ್ ನಾಯಕರ ಸಂತಸಕ್ಕೆ ಕಾರಣವಾಗಿದೆ. ಇನ್ನೂ ರಾಷ್ಟ್ರೀಯ ಪಕ್ಷ ಬಿಜೆಪಿಗೆ ಮುಖಭಂಗವಾಗುವ ಸಾಧ್ಯತೆ ಇದೆ. ಏಕೆಂದರೆ ಇಲ್ಲಿ ಕೇಸರಿ ಪಡೆಗೆ ಕೇವಲ 4 ಸ್ಥಾನ ಸಿಗಬಹುದು ಎಂದು ತಿಳಿಸಲಾಗಿದೆ. ಎಂಐಎಂಐಎಂಗೆ 5 ಸೀಟು ಮತ್ತು ಇತರೆ ಪಕ್ಷಗಳು 4 ಸೀಟು ಗೆಲ್ಲಬಹುದು ಎಂದು ಸಮೀಕ್ಷೆ ಅಂದಾಜಿಸಿದೆ.

ಒಟ್ಟಾರೆ ಸಮೀಕ್ಷೆ ಪ್ರಕಾರ ತೆಲಂಗಾಣದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳು ಬಿಆರ್ಎಸ್ ಸೇರಿದಂತೆ ಬಿಜೆಪಿ, ಇತರೆ ಪಕ್ಷಗಳನ್ನು ಧೂಳಿಪಟ ಮಾಡಿದೆ. ಹೀಗಿದ್ದರೂ ಬಿಆರ್ಎಸ್ ಕೆಲವು ಸ್ಥಾನಗಳ ಮೇಲೆ ಕಣ್ಣಿಟ್ಟಿದೆ.
ಚನಾವಣೋತ್ತರ ಸಮೀಕ್ಷೆಗಳು ಅಂತಿಮವಲ್ಲ. ಇದು ಅಂತಿಮ ಫಲಿತಾಂಶಯನ್ನು ಊಹಿಸಲು ಸಾಧ್ಯವಾಗುವಂತೆ ಒಂದಷ್ಟು ಸಮೀಕ್ಷೆಗಳು, ಅಂಶಗಳನ್ನು ನೀಡುತ್ತವೆ. ಇದರಲ್ಲಿ ಕಾಂಗ್ರೆಸ್ಗೆ ಮುನ್ನಡೆ ಆಗಿದ್ದು, ಬಿಆರ್ಎಸ್ಗೆ ಭಾರಿ ಹಿನ್ನಡೆ ಆಗುವ ಸಂಭವವಿದೆ.
ಒಟ್ಟು 119 ಕ್ಷೇತ್ರಗಳಲ್ಲಿ ಬಿಆರ್ಎಸ್ ಸ್ಫರ್ಧಿಸಿತ್ತು. ಕಾಂಗ್ರೆಸ್ 118ರಲ್ಲಿ ಸ್ಫರ್ಧಿಸಿತ್ತು. ಕಾಮರೆಡ್ಡಿ ಸೇರಿದಂತೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಆರ್ಎಸ್ ಮುಖ್ಯಸ್ಥ ಕೆಸಿಆರ್ ವಿರುದ್ಧ ಕಾಂಗ್ರೆಸ್ನಿಂದ ರೇವಂತ್ ರೆಡ್ಡಿ ಸ್ಪರ್ಧಿಸಿದ್ದರು. ಇದೀಗ ತೆಲಂಗಾಣದಲ್ಲಿ ಕೈ ನಾಯಕರು ಮಂದಹಾಸ ಮೂಡಿದ್ದು, ಅಂತಿಮ ಫಲಿತಾಂಶ ಡಿಸೆಂಬರ್ 3ರಂದು ಹೊರ ಬೀಳಲಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications