Peoples Plus exit poll of Telangana 2023: ಕಾಂಗ್ರೆಸ್ಗೆ ಗೆಲುವು, ಫಲಿತಾಂಶ ತಿರಸ್ಕರಿಸಿದ ಬಿಜೆಪಿ, ಬಿಆರ್ಎಸ್?
ನವದೆಹಲಿ, ನವೆಂಬರ್ 30: ತೆಲಂಗಾಣ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆ ಬಹಿರಂಗವಾಗಿದೆ. ಅಂದಾಜಿನ ಪ್ರಕಾರ ತೆಲಂಗಾಣದಲ್ಲಿ ಈ ಬಾರಿ ಕಾಂಗ್ರೆಸ್ಗೆ ಒಟ್ಟು ಸ್ಥಾನಗಳ ಪೈಕಿ ಅರ್ಧಕ್ಕಿಂತ ಹೆಚ್ಚು ಅಂದರೆ 62-72ಸ್ಥಾನ ಪಡೆದು ಗೆಲ್ಲಲಿದೆ ಎಂದು ಪೀಪಲ್ಸ್ ಪ್ಲಸ್ (Peoples Plus) ಸಂಸ್ಥೆಯ ಸಮೀಕ್ಷೆಗಳು ತಿಳಿಸಿವೆ.
ಪೀಪಲ್ಸ್ ಪ್ಲಸ್ (Peoples Plus) ಚುನಾವಣೋತ್ತರ ಫಲಿತಾಂಶದಲ್ಲಿ ಭಾರತ್ ರಾಷ್ಟ್ರೀಯ ಸಮಿತಿಗೆ (ಬಿಆರ್ಎಸ್) 35ರಿಂದ 46 ಸೀಟು ಗೆಲ್ಲಬಹುದು. ಈ ಮೂಲಕ ಅರ್ಧಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆದುಕೊಂಡು ಸೋಲುಣ್ಣುವ ಸಾಧ್ಯತೆಗಳು ಇವೆ ಎಂದಿದೆ.

ಉಳಿದಂತೆ ತೆಲಂಗಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಕರೆತಂದು ಅಬ್ಬರದ ಪ್ರಚಾರ ಮಾಡಿದ್ದ, ಮತ್ತು ಕಾಂಗ್ರೆಸ್ ಮುಕ್ತ ಭಾರತ ಮಾಡುವುದಾಗಿ ತಿಳಿಸಿದ್ದ ಬಿಜೆಪಿಗೆ ಕೇವಲ 3ರಿಂದ 8 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಲಿದೆ. ಎಂಐಎಂಐಎಂಗೆ 6-7 ಸ್ಥಾನ, ಇತರೆ 1-2 ಸ್ಥಾನ ಗೆಲ್ಲಿಲಿವೆ ಎಂದು ಮಾಹಿತಿ ನೀಡಿದೆ.
ತೆಲಂಗಾಣ ಸೇರಿದಂತೆ ವಿವಿಧ ಇತರ ರಾಜ್ಯಗಳ ವಿಧಾನಸಭಾ ಚುನಾವಣೋತ್ತರ ಫಲಿತಾಂಶವನ್ನು ಬಿಜೆಪಿ ತಿರಸ್ಕರಿಸಿದೆ. ಈ ಸಮೀಕ್ಷೆ ಅಂಶಗಳು ಸತ್ಯವಲ್ಲ. ನಾವೇ ಕೆಲವೆಡೆ ಅಧಿಕಾರಕ್ಕೆ ಬರುತ್ತೇವೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
ಅಸಲಿಗೆ ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಭಾರತ್ ರಾಷ್ಟ್ರೀಯ ಸಮಿತಿ (ಬಿಆರ್ಎಸ್) ಪಕ್ಷಗಳ ಮಧ್ಯೆ ಭಾರಿ ಪೈಫೋಟಿ ಉಂಟಾಗಿತ್ತು. ಪರಸ್ಪರ ಯೋಜನೆಗಳ ಘೋಷಣೆ ಮಟ್ಟಿಗೆ ಸ್ಪರ್ಧೆಗೆ ಇಳಿದಿದ್ದವು. ಇದೀಗ ಕಾಂಗ್ರೆಸ್ಗೆ ನಿರೀಕ್ಷೆಯಂತೆ ಸ್ಥಾನ ಲಭಿಸಿವೆ ಎಂದು ಈ ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿವೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications