Telangana Election Results: ತೆಲಂಗಾಣದಲ್ಲಿ ಮ್ಯಾಜಿಕ್ ನಂಬರ್ ತಲುಪಿದ ಕಾಂಗ್ರೆಸ್!
Telangana Election Results 2023: ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿನ ನಗ ಬೀರುವ ಎಲ್ಲಾ ಸಾಧ್ಯತೆ ಹೆಚ್ಚಾಗಿದೆ. 119 ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದ್ದು, ಕಾಂಗ್ರೆಸ್ 63ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಗೆ ಭಾರಿ ಹಿನ್ನಡೆಯಾಗಿದ್ದು, ಇದುವರೆಗೂ 29 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಪಡೆದುಕೊಂಡಿದೆ.
ಚುನಾವಣೋತ್ತರ ಸಮೀಕ್ಷೆಗಳು ಕೂಡ ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಸಿಗುತ್ತದೆ ಎಂದು ಭವಿಷ್ಯ ನುಡಿದಿದ್ದವು. ಎಲ್ಲಾ ಸಮೀಕ್ಷೆಗಳು ಬೋಗಸ್, ರಾಜ್ಯದಲ್ಲಿ ನಾವೇ ಆಡಳಿತಕ್ಕೆ ಬರುತ್ತೇವೆ ಎಂದು ಬಿಆರ್ಎಸ್ ಮುಖಂಡರು ಹೇಳಿದ್ದರು. ಆದರೆ, ಮತ ಎಣಿಕೆ ಆರಂಭದಲ್ಲೇ ಸಮೀಕ್ಷೆಗಳು ನಿಜ ಎಂದು ಸಾಬೀತು ಮಾಡಿವೆ.

ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಹ್ಯಾಟ್ರಿಕ್ ಗೆಲುವಿನ ಕನಸಿಗೆ ಕಾಂಗ್ರೆಸ್ ಅಡ್ಡಿಯಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಪಕ್ಕದ ಚುನಾವಣೆ ಮೇಲೂ ಪ್ರಭಾವ ಬೀರಿದೆ. ಬಿಜೆಪಿ ತೆಲಂಗಾಣದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ಮೋದಿ, ಅಮಿತ್ ಶಾ ಭರ್ಜರಿ ಪ್ರಚಾರ ಮಾಡಿದರೂ, ಇಲ್ಲಿ ಬಿಜೆಪಿ 5 ಸ್ಥಾನಗಳನ್ನು ಗೆಲ್ಲುವುದು ಕಷ್ಟ ಎನ್ನಲಾಗಿದೆ.
ಕರ್ನಾಟಕದ ಸಚಿವರ ಪ್ರಚಾರ
ತೆಲಂಗಾಣದಲ್ಲಿ ಕಾಂಗ್ರೆಸ್ನಲ್ಲಿ ದೊಡ್ಡ ಹೆಸರು ಇಲ್ಲದ ಪರಿಣಾಮ ಕರ್ನಾಟಕದ ಬಹುಪಾಲು ಸಚಿವರು ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕೂಡ ತೆಲಂಗಾಣದಲ್ಲಿ ಅಬ್ಬರದ ಪ್ರಚಾರ ಮಾಡಿದ್ದರು.
ಡಿ.ಕೆ ಶಿವಕುಮಾರ್ ಫಲಿತಾಂಶದ ದಿನ ಕೂಡ ಹೈದರಾಬಾದ್ನಲ್ಲಿದ್ದು ಫಲಿತಾಂಶವನ್ನು ಹತ್ತಿರದಿಂದ ಗಮನಿಸುತ್ತಿದ್ದಾರೆ. ಕರ್ನಾಟಕದಲ್ಲಿ ಗ್ಯಾರಂಟಿಗಳು ಕಾಂಗ್ರೆಸ್ಗೆ ಅಧಿಕಾರ ತಂದುಕೊಟ್ಟ ಬಳಿಕ, ತೆಲಂಗಾಣದಲ್ಲಿ ಕೂಡ ಅದೇ ಫಾರ್ಮುಲಾವನ್ನು ಕಾಂಗ್ರೆಸ್ ಬಳಸಿಕೊಂಡಿದೆ.
ಇನ್ನು ಫಲಿತಾಂಶಕ್ಕೆ ಮುನ್ನವೇ ಕಾಂಗ್ರೆಸ್ ಸಂಭ್ರಮಾಚರಣೆ ಆರಂಭಿಸಿದೆ. ನಾಲ್ಕು ರಾಜ್ಯಗಳ ಮತ ಎಣಿಕೆಯಲ್ಲಿ ತೆಲಂಗಾಣ ಮತ್ತು ಚತ್ತೀಸ್ಗಢದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗುತ್ತಿದೆ. ಆದರೆ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಪಡೆದುಕೊಂಡಿದ್ದು, ಕಾಂಗ್ರೆಸ್ ಪೈಪೋಟಿ ನೀಡುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications