Telangana: ಅತಂತ್ರ ಸ್ಥಿತಿ ನಿರ್ಮಾಣವಾದರೆ... BRS+BJP+AIMIM= ತೆಲಂಗಾಣ ಸರ್ಕಾರ?
ಹೈದರಾಬಾದ್, ಡಿಸೆಂಬರ್ 03: ತೀವ್ರ ಕುತೂಹಲ ಮೂಡಿಸಿರುವ ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. 119 ಸ್ಥಾನಗಳಿಗೆ ನಡೆದಿರುವ ಚುನಾವಣೆಯು ಕಾಂಗ್ರೆಸ್ ಹಾಗೂ ಬಿಆರ್ಎಸ್ ನಡುವಿನ ನೇರ ಹಣಾಹಣಿಗೆ ಸಾಕ್ಷಿಯಾಗಿದೆ. ಈಗಿರುವ ಟ್ರೆಂಡ್ ಪ್ರಕಾರ, ಕಾಂಗ್ರೆಸ್ ಮುನ್ನೆಡೆ ಸಾಧಿಸಿದೆ. ಆದರೆ, ಕಾಂಗ್ರೆಸ್ ಪಕ್ಷವು ಪೂರ್ಣ ಬಹುಮತ ಪಡೆಯದಿದ್ದರೆ, ಮುಂದೇನಾಗಬಹುದು ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.
ಮ್ಯಾಜಿಕ್ ಸಂಖ್ಯೆಗಿಂತ ಸ್ವಲ್ಪ ಮುಂದಿರುವ ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಆಡಳಿತಾರೂಢ ಭಾರತೀಯ ರಾಷ್ಟ್ರ ಸಮಿತಿ (ಬಿಆರ್ಎಸ್) ಎರಡನೆಯ ದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿದೆ. 119 ಸ್ಥಾನಗಳ ತೆಲಂಗಾಣ ವಿಧಾನಸಭೆಯಲ್ಲಿ ಬಹುಮತವನ್ನು ಹೊಂದಲು 60ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಸಾಧಿಸಬೇಕು.

ಮುನ್ನೆಡೆ ಸಾಧಿಸಿರುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈಗಾಗಲೇ ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಅವರ ನಿವಾಸದ ಹೊರಗೆ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ ಆರಂಭಿಸಿದ್ದಾರೆ. ಎರಡನೇ ಸ್ಥಾನದಲ್ಲಿರುವ ಬಿಆರ್ಎಸ್ ಪಕ್ಷಕ್ಕೆ ಮುಖಭಂಗವಾಗಿರುವುದಂತೂ ಸತ್ಯ.
ಹೈದರಾಬಾದ್ನಲ್ಲಿ ಬೀಡುಬಿಟ್ಟಿರುವ ಡಿಕೆಶಿ
ಕೆಆರ್ಎಸ್ ನೇತೃತ್ವದ ಬಿಆರ್ಎಸ್ ಪಕ್ಷವು ಕಾಂಗ್ರೆಸ್ ಅಭ್ಯರ್ಥಿಗಳನ್ನು ಖರೀದಿ ಮಾಡಲು ಹೊರಟಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರವೇ ಹೈದರಾಬಾದ್ಗೆ ಡಿಕೆಶಿ ತೆರಳಿದ್ದಾರೆ. ಗೆಲುವು ಸಾಧಿಸುವ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಸ್ಥಳಾಂತರಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಎಕ್ಸಿಟ್ ಪೋಲ್ಗಳು ಕಾಂಗ್ರೆಸ್ಗೆ ಪರವಾಗಿದ್ದರೂ, ತೆಲಂಗಾಣ ಗೆಲುವಿನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ದೃಢವಾದ ನಂಬಿಕೆ ಇಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆಗಳು ಹೆಚ್ಚಿವೆ ಎಂಬ ಮಾತುಗಳು ಕೇಳಿಬಂದಿವೆ.

ಸಮೀಕ್ಷೆಗಳು ಹೇಳಿದ್ದೇನು?
ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್ಗೆ 60 ರಿಂದ 70 ಸ್ಥಾನಗಳು ದೊರೆಯಲಿವೆ ಎಂದು ಹೇಳಿವೆ. ಈ ಹಿನ್ನೆಲೆಯಲ್ಲಿ ಕುದುರೆ ವ್ಯಾಪಾರ ನಡೆಯುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಅತಂತ್ರ ಸ್ಥಿತಿ ನಿರ್ಮಾಣವಾದರೆ ಏನಾಗಬಹುದು?
ಒಂದು ವೇಳೆ, ತೆಲಂಗಾಣದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಮುಂದೆ ಏನಾಗಬಹುದು ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್ ಬಹುಮತ ಸಿಗದೇ ಹೋದರೆ, ಬಿಆರ್ಎಸ್ ಪಕ್ಷಕ್ಕೆ ಬಿಜೆಪಿ, ಎಐಎಂಐಎಂ ಪಕ್ಷಗಳು ಬೆಂಬಲ ನೀಡಬಹುದು ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಇದು ಕಾಂಗ್ರೆಸ್ ನುಂಗಲಾಗದ ತುತ್ತಾಗಿಯೂ ಪರಿಣಮಿಸಬಹುದು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications