'ಗರ್ಭಪಾತಕ್ಕೆ ಅಪ್ಪ ಒತ್ತಾಯಿಸಿದ್ದು ಯಾಕೆ ಅಂತ ಈಗ ತಿಳಿಯುತ್ತಿದೆ!'
ಮಿರ್ಯಾಲಗುಡ(ತೆಲಂಗಾಣ), ಸೆಪ್ಟೆಂಬರ್ 17: 'ಗರ್ಭಪಾತ ಮಾಡಿಸಿಕೊಳ್ಳುವಂತೆ ಅಪ್ಪ ನನ್ನನ್ನು ಪದೇ ಪದೇ ಪೀಡಿಸುತ್ತಿದ್ದುದು ಏಕೆ ಎಂಬುದು ನನಗೆ ಈಗ ತಿಳಿಯುತ್ತಿದೆ!' ಎಂದು ಮಿರ್ಯಾಲಗುಡದಲ್ಲಿ ಕೊಲೆಯಾದ ಪ್ರಣಯ್ ಪತ್ನಿ ಅಮೃತಾ ತಮ್ಮ ಅನುಮಾನ ಹೊರಹಾಕಿದ್ದಾರೆ.
'ಪ್ರಣಯ್ ಕೊಲೆಯಾಗುವ ಎರಡು ದಿನ ಮೊದಲು ಗರ್ಭಪಾತ ಮಾಡಿಸಿಕೊಳ್ಳುವಂತೆ ನನ್ನ ತಂದೆ ನನ್ನನ್ನು ಪೀಡಿಸಿದ್ದರು. ನಾನು ಪ್ರಣಯ್ ನನ್ನು ಮದುವೆಯಾದ ಮೇಲೆ ಅಪ್ಪ ನನ್ನೊಂದಿಗೆ ಮಾತನಾಡಿದ್ದೇ ಕಡಿಮೆ. ಅವರು ನನಗೆ ಅಪರೂಪಕ್ಕೆ ಫೋನ್ ಮಾಡಿದರೂ ಪ್ರಣಯ್ ನನ್ನು ಬಿಟ್ಟು ಮನೆಗೆ ವಾಪಸ್ ಬರುವಂತೆ ಕೇಳುತ್ತಿದ್ದರು. ಆದರೆ ಪ್ರಣಯ್ ಹತ್ಯೆಗೂ ಎರಡು ದಿದನ ಮೊದಲು ಕರೆ ಮಾಡಿದ್ದ ಅವರು ನನ್ನ ಬಳಿ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದರು. ಆದರೆ ನಾನು ಅದಕ್ಕೆ ಒಪ್ಪಲಿಲ್ಲ. ಅವರು ಗರ್ಭಪಾತ ಮಾಡಿಸಿಕೊಳ್ಳುವಂತೆ ನನ್ನನ್ನು ಒತ್ತಾಯಿಸಿದ್ದು ಏಕೆ ಎಂಬುದು ಈಗ ತಿಳಿಯುತ್ತಿದೆ. ಪ್ರಣಯ್ ನನ್ನು ಕೊಂದ ನಂತರ ತಮ್ಮ ಹಾದಿಗೆ ನನ್ನ ಮಗು ಮುಳುವಾಗುವುದು ಅವರಿಗೆ ಬೇಕಿರಲಿಲ್ಲ. ಪ್ರಣಯ್ ಸಾವಿನ ನಂತರ ನಾನು ಮತ್ತೆ ಅವರ ಬಳಿ ಹಿಂದಿರುಗುವುದಕ್ಕಿದ್ದ ಅಡ್ಡಿ ಎಂದರೆ ನನ್ನ ಹೊಟ್ಟೆಯಲ್ಲಿದ್ದ ಭ್ರೂಣ. ಆದ್ದರಿಂದ ಆ ಭ್ರೂಣವನ್ನೇ ತೆಗೆಸಲು ಅವರು ಪ್ರಯತ್ನಿಸಿದ್ದರು' ಎಂದು ಅಮೃತಾ ದೂರಿದ್ದಾರೆ.

ಇಪ್ಪತ್ತೊಂದು ವರ್ಷ ವಯಸ್ಸಿನ ಅಮೃತಾ ಮತ್ತು 24 ವರ್ಷ ವಯಸ್ಸಿನ ಪ್ರಣಯ್ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರ ಜಾತಿ ಮತ್ತು ಮತ ಬೇರೆ ಎಂಬ ಕಾರಣಕ್ಕೆ ಇಬ್ಬರ ಕುಟುಂಬಸ್ಥರಿಗೂ ಈ ಮದುವೆ ಇಷ್ಟವಿರಲಿಲ್ಲ. ಆದರೆ ಮನೆಯವರ ವಿರೋಧದ ನಡುವೆಯೂ ಜನವರಿಯಲ್ಲಿ ಮದುವೆಯಾಗಿದ್ದ ಈ ದಂಪತಿಯನ್ನು ಪ್ರಣಯ್ ಮನೆಯವರು ಸ್ವೀಕರಿಸಿದ್ದರು.
ಮೂರು ತಿಂಗಳ ಗರ್ಭಿಣಿಯಾಗಿದ್ದ ಅಮೃತಾ, ಕಳೆದ ಶುಕ್ರವಾರ ಅಂದರೆ ಸೆ.14 ರಂದು ತೆಲಂಗಾಣದ ಮಿರ್ಯಾಲಗುಡದ ಜ್ಯೋತಿ ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಹೊರಗಿದ್ದ ಪ್ರಣಯ್ ನನ್ನು ಕೆಲ ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಪ್ರಣಯ್ ಸಾವಿಗೆ ತನ್ನ ತಂದೆ ಮಾರುತಿ ರಾವ್ ಅವರೇ ಕಾರಣ. ಅವರಲ್ಲದೆ ಇನ್ನ್ಯಾರೂ ಪ್ರಣಯ್ ನನ್ನು ಕೊಲ್ಲುವುದಕ್ಕೆ ಸಾಧ್ಯವೇ ಇಲ್ಲ ಎಂದು ಅಮೃತಾ ದೂರಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications