ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ತೆಲಂಗಾಣದಲ್ಲಿ ಭೀಕರ ಅಪಘಾತ: ಬಸ್ಸಿನಲ್ಲಿದ್ದ 45 ಮಂದಿ ದುರ್ಮರಣ
ಕೊಂಡಗಟ್ಟು(ತೆಲಂಗಾಣ), ಸೆಪ್ಟೆಂಬರ್ 11: ತೆಲಂಗಾಣದ ಕೊಂಡಗಟ್ಟು ಎಂಬಲ್ಲಿ ಬಸ್ಸೊಂದು ಕಮರಿಗೆ ಉರುಳಿದ ಪರಿಣಾಮ 45 ಮಂದಿ ಮೃತರಾಗಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ದಾವಣಗೆರೆಯಲ್ಲಿ ಭೀಕರ ಅಪಘಾತ ಬೆಂಗಳೂರಿನ ನಾಲ್ವರ ಸಾವು
70 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತಿದ್ದ ಇಲ್ಲಿನ ಆರ್ ಟಿಸಿ ಬಸ್ ಜಗ್ತಿಯಾಲ್ ರಸ್ತೆಯ ಪಕ್ಕದ ಕಂದಕಕ್ಕೆ ಉರುಳಿದ ಪರಿಣಾಮ ಈ ಘಟನೆ ನಡೆದಿದೆ.
ಸೇಲಂನಲ್ಲಿ ಭೀಕರ ಅಪಘಾತ: 7 ಜನರ ದುರ್ಮರಣ
ಬಸ್ಸಿನಲ್ಲಿದ್ದ ಬಹುತೇಕ ಪ್ರಯಾಣಿಕರು ಮಹಿಳೆಯರೇ ಆಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್, ಘಟನೆ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Comments
English summary
Telangana: 45 killed and 20 injured after an RTC bus carrying passengers fell into a gorge near Kondagattu Jagtial. More details awaited