Telangana Poll: ರಾಹುಲ್ ಗಾಂಧಿ ಸಮ್ಮುಖದಲ್ಲಿ ಶುಕ್ರವಾರ ಕಾಂಗ್ರೆಸ್ ಸೇರಲಿರುವ ಬಿಜೆಪಿ ನಾಯಕಿ
ಹೈದರಾಬಾದ್, ನವೆಂಬರ್ 16: ತೆಲಂಗಾಣದಲ್ಲಿ ಬಿಜೆಪಿಯಲ್ಲಿ ಯಾವುದೇ ಗೌರವ ಸಿಕ್ಕಿಲ್ಲ ಎಂಬ ಕಾರಣಕ್ಕೆ ನಟಿ ಮತ್ತು ರಾಜಕಾರಣಿ ವಿಜಯಶಾಂತಿ ಅವರು ಬುಧವಾರ ತೆಲಂಗಾಣ ಬಿಜೆಪಿಗೆ ರಾಜೀನಾಮೆ ನೀಡಿದ್ದರೆ. ಇವರು ಶುಕ್ರವಾರ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರಲಿದ್ದಾರೆ ಎಂದು ವರದಿ ಆಗಿದೆ.
ಸದ್ಯ ನಡೆಯುತ್ತಿರುವ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ವಿಜಯಶಾಂತಿ ಅವರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಕೆಲವು ಆಂತರಿಕ ಕಾರಣಗಳಿಂದ ಮಾಜಿ ಸಂಸದೆ ವಿಜಯಶಾಂತಿ ಅವರು ತಮ್ಮ ರಾಜೀನಾಮೆ ಬಿಜೆಪಿ ತೆಲಂಗಾಣ ಅಧ್ಯಕ್ಷ ಜಿ ಕಿಶನ್ ರೆಡ್ಡಿ ನೀಡಿದ್ದಾರೆ.

ವಿಜಯಶಾಂತಿಯವರು ಕಳೆದ 25 ವರ್ಷಗಳಿಂದ ಎರಡು ರಾಷ್ಟ್ರೀಯ ಪಕ್ಷಗಳು ಮತ್ತು ಟಿಆರ್ಎಸ್ (ಈಗ ಬಿಆರ್ಎಸ್) ಪಕ್ಷಗಳ ಜತೆ ಗುರುತುಸಿಕೊಂಡಿದ್ದಾರೆ. ಹಿರಿಯ ರಾಜಕಾರಣಿಯಾಗಿದ್ದು, ದ್ವಂದ್ವ ನಿಲುವು ಹೊಂದಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ಇವರು 1997 ರಲ್ಲಿ ಆಗಿನ ಆಂಧ್ರಪ್ರದೇಶ ಬಿಜೆಪಿಗೆ ಸೇರಿದರು ಮತ್ತು ತೆಲಂಗಾಣ ಚಳವಳಿಯ ಭಾಗವಾಗಲು ಬಿಜೆಪಿ ತೊರೆದು 2009 ರಲ್ಲಿ ಟಿಆರ್ಎಸ್ ಸೇರಿದರು. ನಂತರ 2014 ರಲ್ಲಿ ಟಿಆರ್ ಎಸ್ ಇಂದಿನ ಬಿಆರ್ಎಸ್ಗೆ ರಾಜೀನಾಮೆ ನೀಡಿ ಕಾಂಗ್ರೆಸ್ಗೆ ಸೇರಿದರು. ಅಲ್ಲಿ ಸಹ ಪೂರ್ಣಪ್ರಮಾಣದಲ್ಲಿ ನಿಲ್ಲದ ಅವರು 2020 ರಲ್ಲಿ ಮತ್ತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇದೀಗ ಮತ್ತೆ ಬಿಜೆಪಿ ತೊರೆಯುವ ನಿರ್ಧಾರ ಮಾಡಿದ್ದಾರೆ.
ಶುಕ್ರವಾರ ರಾಹುಲ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆ?
ಕಳೆದ ಆರು ತಿಂಗಳಿನಿಂದ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿವು ಉದ್ದೇಶ ಹೊಂದಿರುವ ಅವರು ಬಿಜೆಪಿ ನಿರ್ಧಾರಗಳಿಂದ ಅತೃಪ್ತರಾಗಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ವಿಜಯಶಾಂತಿ ಅವರಿಗೆ ಯಾವುದೇ ಮನ್ನಣೆ ಸಿಗದಂತೆ ಪಕ್ಷದ ಹಿರಿಯರು ನೋಡಿಕೊಂಡಿದ್ದಾರೆ ಎನ್ನಲಾಗಿದೆ. ಇದೆಲ್ಲ ಕಾರಣದಿಂದ ಅವರು ಈಗ ಕಾಂಗ್ರೆಸ್ಗೆ ಮರಳಲು ನಿರ್ಧರಿಸಿದ್ದಾರೆ. ಶುಕ್ರವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಅವರು ಪಕ್ಷ ಸೇರಲಿದ್ದಾರೆ.
ಮೆದಕ್ ಕ್ಷೇತ್ರದಿಂದ ಲೋಕಸಭಾ ಟಿಕೆಟ್ ಆಕಾಂಕ್ಷಿ
ಬಿಜೆಪಿ ತೊರೆಯುತ್ತಿರುವ ವಿಜಯಶಾಂತಿ ಅವರ ಕಣ್ಣು ಮೇದಕ್ ಕ್ಷೇತ್ರದ ಮೇಲೆ ಬಿದ್ದಿದೆ. ಕಾಂಗ್ರೆಸ್ನಿಂದ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಒಲವು ಹೊಂದಿದ್ದಾರೆ ಎನ್ನಲಾಗಿದೆ. 2014ರ ವಿಧಾನಸಭಾ ಚುನಾವಣೆಯಲ್ಲಿ ಮೇದಕ್ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ನಲ್ಲಿ ಸ್ಪರ್ಧಿಸಿ ಅವರು ಸೋಲುಂಡಿದ್ದರು.
ಕಾಂಗ್ರೆಸ್ ಸೇರ್ಪಡೆ ಆದ ಮೇಲೆ ಅವರಿಗೆ 2024ರ ಲೋಕಸಭೆ ಚುನಾವಣೆಗೆ ಟಿಕೆಟ್ ಸಿಗಲಿದೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ವಿಧಾನಸಭೆ ಚುನಾವಣೆ ಫಲಿತಾಂಶದ ಮೇಲೆ ಟಿಕೆಟ್ ಹಂಚಿಕೆ ಆಗುವ ಸಾಧ್ಯತೆ ಇದೆ.
-
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು












Click it and Unblock the Notifications