Telangana Poll 2023: ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಿಂದ ಈ 'ಮಹಾನಟಿ'ಗೆ ಗೇಟ್ಪಾಸ್: ಕಾಂಗ್ರೆಸ್ ಸೇರ್ತಾರಾ ಲೇಡಿ ಸೂಪರ್ಸ್ಟಾರ್
ನವದೆಹಲಿ, ನವೆಂಬರ್ 09: ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗಿದೆ. ಒಂದೊಂದೇ ಪಕ್ಷಗಳು ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿವೆ. ಈ ಪೈಕಿ ಬಿಜೆಪಿ ಅಂತಿಮಗೊಂಡ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಇತ್ತೀಚೆಗೆ ಬಿಡುಗಡೆ ಮಾಡಿತು. ಆದರೆ ಪಟ್ಟಿಯಲ್ಲಿ ಪಕ್ಷದ ಹಿರಿಯ ನಾಯಕಿ, ಮಾಜಿ ಸಂಸದೆಯ ಹೆಸರನ್ನು ಕೈ ಬಿಡಲಾಗಿದೆ. ಇದು ಮುಂದಿನ ರಾಜಕೀಯ ಬೆಳವಣಿಗೆಗಳತ್ತ ಕೌತುಕ ಮೂಡಿಸಿದೆ.
ಇದೇ ನವೆಂಬರ್ 30 ರಂದು ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಭಾರತೀಯ ಜನತಾ ಪಕ್ಷವು 12 ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಮೂಲಕ ಬಿಜೆಪಿಯ ಒಟ್ಟು 100 ಅಭ್ಯರ್ಥಿಗಳು ಕಣದಲ್ಲಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ.

ಸದ್ಯ ಬಿಜೆಪಿಯಿಂದ ಉಳಿದ 19 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವುದು ಬಾಕಿ ಇದೆ. ಇದಕ್ಕೆ ನಟ-ರಾಜಕಾರಣಿ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವು ದೊಂದಿಗೆ ಚರ್ಚಿಸಿ ನಂತರ 8-9 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ.
ಬಿಜೆಪಿಯು ಇದುವರೆಗೂ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಮಾಜಿ ಸಂಸದೆ ಹಿರಿಯ ನಾಯಕಿ ವಿಜಯಶಾಂತಿ (Vijayashanthi) ಅವರಿಗೆ ಟಿಕೆಟ್ ನೀಡಲಾಗಿಲ್ಲ. ಹೀಗಾಗಿ ಅವರ ಹೆಸರು ಯಾವ ಪಟ್ಟಿಯಲ್ಲಿ ಇಲ್ಲ. ಇದರಿಂದ ಅವರ ಮುಂದಿನ ನಡೆ ಏನು? ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರೆಯೆ? ಎಂಬ ಊಹಾಪೂಹಗಳು ಎದ್ದಿವೆ. ಇತ್ತ ಪಕ್ಷದ ನಡೆ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕಾರಣ ಕೆಲವು ಸ್ಥಾನಗಳ ಆಯ್ಕೆ ಬಾಕಿ ಇದೆ.
ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಹೆಸರಿಲ್ಲ
ಬಿಜೆಪಿಯ ಹಿರಿಯ ನಾಯಕಿ ಹಾಗೂ ಮಾಜಿ ಸಂಸದೆ ವಿಜಯಶಾಂತಿ ಹೆಸರು. ಅವರು ಕಾಮರೆಡ್ಡಿಯಿಂದ ಕಣಕ್ಕಿಳಿಯುತ್ತಾರೆ ಎಂದು ನಿರೀಕ್ಷಿಸಲಾಗಿತ್ತು, ಆದರೆ ಕೆಲವು ಕಾರಣಗಳಿಂದಾಗಿ ಅವರ ಹೆಸರು ಪಟ್ಟಿಯಲ್ಲಿ ಸೇರಲಿಲ್ಲ. ಅಲ್ಲದೇ ಸೋಮವಾರ ಘೋಷಣೆಯಾದ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಯೂ ಸಹ ವಿಜಯಶಾಂತಿ ಅವರು ಹೆಸರು ಕಾಣೆಯಾಗಿದೆ. ಇದೆಲ್ಲ ಬೆಳವಣಿಗೆ ಮತ್ತು ಬಿಜೆಪಿ ನಿರ್ಧಾರಗಳಿಂದ ಜನಪ್ರಿಯ ನಟಿ ವಿಜಯಶಾಂತಿಯವರ ವಿಚಾರ ಮುನ್ನೆಲೆಗೆ ಬಂದಿದೆ.

ಸದ್ಯ ತೆಲಂಗಾಣದಲ್ಲಿ ಪ್ರಮುಖ ವಿಚಾರಗಳ ಪೈಕಿ ಹೆಚ್ಚು ಕಾಲ ಬಿಜೆಪಿಯಲ್ಲಿರುವ ವಿಜಯಶಾಂತಿ ಅವರು ಅದೇ ಪಕ್ಷದಲ್ಲಿ ಮುಂದುವರಿಯುತ್ತಾರೆಯೇ? ಅಥವಾ ಕಾಂಗ್ರೆಸ್ ತೆಕ್ಕೆಗೆ ಮತ್ತೆ ಮರಳುತ್ತಾರಾ? ಎಂಬುದರ ಬಗ್ಗೆ ಕುತೂಹಲ ಸೃಷ್ಟಿಯಾಗಿದೆ. ಆದರೆ ಈ ಕುರಿತು ವಿಜಯಶಾಂತಿ ಅವರು ಎಲ್ಲಿಯೂ ಪ್ರತಿಕ್ರಿಯಿಸಿಲ್ಲ.
ಪಕ್ಷದ ವಿರುದ್ಧ ಹೇಳಿಕೆ ನೀಡದ ವಿಜಯಶಾಂತಿ
ಬದಲಾಗಿ ಒಂದೆರಡು ಸಲ ಪಕ್ಷದ ನಾಯಕತ್ವ ಕುರಿತು ಪರೋಕ್ಷ ವಾಗ್ದಾಳಿ ನಡೆಸಿದ್ದರು. ಇದರ ಹೊರತಾಗಿ ಅವರು ಬಿಜೆಪಿಯಿಂದ ತಮಗೆ ಅನ್ಯಾಯವಾಗಿದೆ, ಅತೃಪ್ತಿ ಇದೆ ಎಂದು ಹೇಳಿಕೆ ನೀಡಿಲ್ಲ. ಅಲ್ಲದೇ ಅವರ X ಖಾತೆಯಲ್ಲಿ ಈಗಲೂ ಕೇಸರಿ ಬಣ್ಣವಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವಿದೆ.
ಬಿಜೆಪಿ ನಾಲ್ಕನೇ ಪಟ್ಟಿಯಲ್ಲಿ ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷೆ ತುಲಾ ಉಮಾ (ವೇಮುಲವಾಡ) ಮತ್ತು ಬೊಮ್ಮ ಶ್ರೀರಾಮ ಚಕ್ರವರ್ತಿ (ಹುಸ್ನಾಬಾದ್), ವಿ ಸುಭಾಷ್ ರೆಡ್ಡಿ (ಯಲ್ಲರೆಡ್ಡಿ) ಮತ್ತು ಚಲಮಲಾ ಕೃಷ್ಣಾ ರೆಡ್ಡಿ ಅವರು ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ನಿಂದ ಬಿಜೆಪಿಗೆ ಬಂದವರಿಗೂ ಟಿಕೆಟ್ ನೀಡಲಾಗಿದೆ.
-
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications