ತೆಲಂಗಾಣ: ಮುನುಗೋಡೆ ಉಪಚುನಾವಣೆ ಪ್ರಚಾರ ಅಂತ್ಯ, ನ.3ಕ್ಕೆ ಮತದಾನ
ಹೈದರಾಬಾದ್, ನವೆಂಬರ್ 1: ಮುನುಗೋಡೆ ಉಪಚುನಾವಣೆಗೆ 298 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ನವೆಂಬರ್ 3 ರಂದು ನಡೆಯಲಿರುವ ಚುನಾವಣೆಯಲ್ಲಿ 2,41,855 ಮತದಾರರು ಮತ ಚಲಾಯಿಸಲಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿಕಾಸ್ ರಾಜ್ ತಿಳಿಸಿದ್ದಾರೆ.
ಮುನುಗೋಡೆ ಉಪಚುನಾವಣೆಯ ಪ್ರಚಾರ ಮಂಗಳವಾರ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದ್ದು, ನವೆಂಬರ್ 3ರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಸುಮಾರು 105 ನಿರ್ಣಾಯಕ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಎಲ್ಲಾ ಠಾಣೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮತ್ತು ವೈದ್ಯಕೀಯ ತಂಡಗಳು ಲಭ್ಯವಿವೆ ಎಂದು ಅಧಿಕಾರಿ ತಿಳಿಸಿದರು.
ಎಲ್ಲಾ ಮತಗಟ್ಟೆಗಳಲ್ಲಿ ಸಾಕಷ್ಟು ಬೆಳಕು ಮತ್ತು ಶೌಚಾಲಯಗಳನ್ನು ಇರುವಂತೆ ನೋಡಿಕೊಳ್ಳಬೇಕು. ಮುನುಗೋಡಿನಲ್ಲಿ ಪ್ರಥಮ ಬಾರಿಗೆ ಹೊಸ ವಿನ್ಯಾಸದ ವೋಟರ್ ಐಡಿ ನೀಡಿದ್ದೇವೆ. ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಿದ್ದೇವೆ. ಫ್ಲೈಯಿಂಗ್ ಸ್ಕ್ವಾಡ್ ಮತ್ತು ಸ್ಟ್ಯಾಟಿಕ್ ಸರ್ವೆಲೆನ್ಸ್ ತಂಡಗಳು ಸೇರಿದಂತೆ ಒಟ್ಟು 51 ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ಮತಗಟ್ಟೆ ಕೇಂದ್ರಗಳಲ್ಲಿ ಸಿಬ್ಬಂದಿಗೆ ಜಿಲ್ಲಾಡಳಿತ ಸಕಲ ವ್ಯವಸ್ಥೆ ಮಾಡಲಾಗಿದೆ. 199 ಮೈಕ್ರೋ ಅಬ್ಸರ್ವರ್ಗಳನ್ನು ನಿಯೋಜಿಸಲಾಗಿದೆ. ಮುನಗೋಡಿನಲ್ಲಿ 3,366 ರಾಜ್ಯ ಪೊಲೀಸರು ಹಾಗೂ 15 ಕಂಪನಿ ಕೇಂದ್ರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ. 185 ಪ್ರಕರಣಗಳು ದಾಖಲಾಗಿದ್ದು, ಇದುವರೆಗೆ ರೂ.6.80 ಕೋಟಿ ಹಾಗೂ 4,500 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿಕಾಸ್ ರಾಜ್ ತಿಳಿಸಿದ್ದಾರೆ.
ಮುನುಗೋಡೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ನಿಂದ ಸ್ಪರ್ಧಿಸಿ ಗೆದ್ದಿದ್ದ ಕೆ.ರಾಜಗೋಪಾಲ್ ರೆಡ್ಡಿ ಅವರ ರಾಜೀನಾಮೆಯಿಂದ ಈಗ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ. 1,800 ಕೋಟಿ ರೂಪಾಯಿ ಮೊತ್ತದ ಗುತ್ತಿಗೆ ಕಾಮಗಾರಿ ಪಡೆದು ಬಿಜೆಪಿ ಸೇರಿದ್ದಾರೆ ಎಂಬ ಆರೋಪಗಳು ಅವರ ಮೇಲೆ ಇವೆ. ಈಗ ಅವರು ಬಿಜೆಪಿಯಿಂದ ಟಿಕೆಟ್ ಪಡೆದು ಸ್ಪರ್ಧಿಸುತ್ತಿದ್ದಾರೆ.
2018ರ ಚುನಾವಣೆಯಲ್ಲಿ ರಾಜಗೋಪಾಲ್ ರೆಡ್ಡಿ ವಿರುದ್ಧ ಸೋತಿದ್ದ ಕೆ.ಪ್ರಭಾಕರ್ ರೆಡ್ಡಿ ಅವರನ್ನು ಆಡಳಿತಾರೂಢ ಟಿಆರ್ಎಸ್ ಕಣಕ್ಕಿಳಿಸಿದೆ. ಪ್ರಭಾಕರ ರೆಡ್ಡಿ ಅವರು 2014 ರಲ್ಲಿ ಇದೇ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಕಾಂಗ್ರೆಸ್ ಪಕ್ಷವು ಮಹಿಳಾ ನಾಯಕಿ ಪಾಲ್ವಾಯಿ ಶ್ರವಂತಿ ಅವರನ್ನು ಕಣಕ್ಕಿಳಿಸಿದೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ












Click it and Unblock the Notifications