Actor Balakrishna: ಲಿಂಗಾಯತರ ಬಗ್ಗೆ ಕಾಳಜಿ ವಹಿಸುವ ಅಗತ್ಯವಿಲ್ಲ! ಸಹಾಯ ಕೇಳಿದ ಗ್ರಾಮಸ್ಥರಿಗೆ ಶಾಸಕನ ದರ್ಪದ ಉತ್ತರ
ತೆಲುಗು ಚಿತ್ರರಂಗದ ಹಿರಿಯ ನಟ, ಶಾಸಕ ನಂದಮೂರಿ ಬಾಲಕೃಷ್ಣ ಮತ್ತೊಮ್ಮೆ ತಮ್ಮ ಹೇಳಿಕೆ ಮೂಲಕ ವಿವಾದ ಮಾಡಿಕೊಂಡಿದ್ದಾರೆ. ತೆರೆಯ ಮೇಲೆ ದೊಡ್ಡ ಹೀರೋ ಆಗಿರುವ ಶಾಸಕ ಇದೀಗ ಸಹಾಯ ಕೇಳಿ ಬಂದ ಗ್ರಾಮಸ್ಥರನ್ನೇ ಬೈದು ಕಳಿಸಿದ್ದಲ್ಲದೆ, ಅವರ ಜಾತಿಯ ಬಗ್ಗೆ ಮಾತನಾಡಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಚಲನಚಿತ್ರ ನಟ ಮತ್ತು ಹಿಂದೂಪುರಂನ ಟಿಡಿಪಿ ಶಾಸಕ ನಂದಮೂರಿ ಬಾಲಕೃಷ್ಣ ಗುರುವಾರ ತಮ್ಮ ಹುಟ್ಟೂರಾದ ನಿಮ್ಮಕೂರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕೊಮರವೊಲೊ ಗ್ರಾಮಸ್ಥರು ಬಾಲಕೃಷ್ಣ ಅವರ ಜೊತೆ ಫೋಟೊಗಳನ್ನು ತೆಗೆಸಿಕೊಂಡಿದ್ದಕ್ಕೆ ಕೋಪಗೊಂಡಿದ್ದಾರೆ. ಫೋಟೊ ತೆಗೆಸಿಕೊಳ್ಳುವ ಸಂದರ್ಭದಲ್ಲಿ ಗ್ರಾಮಸ್ಥರು ತಮ್ಮ ಊರಿನ ಅಭಿವೃದ್ಧಿ ಕಡೆ ಗಮನ ಕೊಡುವಂತೆ ಕೇಳಿದ್ದಕ್ಕೆ ಸಿಟ್ಟಾಗಿದ್ದು, ಫೋಟೊಗಳನ್ನು ತೆಗೆದುಕೊಂಡಿದ್ದೀರಲ್ಲಾ ಅಷ್ಟೇ ಸಾಕು ಇಲ್ಲಿಂದ ಹೋಗಿ ಎಂದಿದ್ದಾರೆ.

ಅಷ್ಟೇ ಅಲ್ಲದೆ "ಕೊಮರವೋಲ್ ಗ್ರಾಮ ಎಲ್ಲಿದೆ?" ಎಂದು ವ್ಯಂಗ್ಯವಾಗಿ ಕೇಳಿದ್ದು, ಅವರು ಲಿಂಗಾಯತರು ಅವರ ಬಗ್ಗೆ ಕಾಳಜಿ ವಹಿಸುವ ಅಗತ್ಯ ನನಗಿಲ್ಲ ಎಂದು ಹೇಳಿದ್ದಾರೆ. ಜಾತಿಯನ್ನು ಉಲ್ಲೇಖಿಸಿ ಕೆಲಸ ಮಾಡಲ್ಲ ಎಂದಿರುವ ಬಾಲಕೃಷ್ಣ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ಆಗುತ್ತಿದ್ದು, ತೆರೆಯ ಮೇಲಷ್ಟೆ ಇವರು ಹೀರೋಗಳು ಎಂದು ಜನ ಟೀಕೆ ಮಾಡುತ್ತಿದ್ದಾರೆ.
ವಿವಾದಗಳೇನೂ ಹೊಸದಲ್ಲ
ನಟ, ಶಾಸಕ ನಂದಮೂರಿ ಬಾಲಕೃಷ್ಣ ಅವರಿಗೆ ವಿವಾದಗಳೇನೂ ಹೊಸದಲ್ಲ, ಈ ಮೊದಲು ತಮ್ಮ ವರ್ತನೆಯಿಂದ ಹಲವು ಬಾರಿ ವಿವಾದ ಮಾಡಿಕೊಂಡಿದ್ದಾರೆ. ತಮ್ಮ ಅಭಿಮಾನಿಗಳಿಗೇ ಹೊಡೆಯುವ ಮೂಲಕ ವಿವಾದ ಮಾಡಿಕೊಂಡಿದ್ದರು. ಈಗ ತನ್ನ ಮತಕ್ಷೇತ್ರದಲ್ಲಿರುವ ಹಳ್ಳಿಯ ಜನ ಕೆಲಸ ಮಾಡುವಂತೆ ಮನವಿ ಮಾಡಿದರೆ ನಡೆದುಕೊಂಡಿರುವ ರೀತಿಗೆ ಟೀಕೆ ವ್ಯಕ್ತವಾಗುತ್ತಿದೆ.
ನಿಮ್ಮಕೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನಂದಮೂರಿ ಬಾಲಕೃಷ್ಣ ತಮ್ಮ ಅಪ್ಪ-ಅಮ್ಮನ ಪ್ರತಿಮೆಗಳಿಗೆ ಹಾರ ಹಾಕುವ ಮೂಲಕ ಗೌರವ ಸಲ್ಲಿಸಿದ್ದರು. ಕೇಂದ್ರ ಸರ್ಕಾರ ಅವರಿಗೆ ಇತ್ತೀಚೆಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಿದ ಬಳಿಕ ಮೊದಲ ಬಾರಿಗೆ ನಿಮ್ಮಕೂರಿಗೆ ಭೇಟಿ ನೀಡಿದ್ದರು. ಬಾಲಕೃಷ್ಣರಿಗೆ ಗ್ರಾಮಸ್ಥರು ಆತ್ಮೀಯವಾಗಿ ಸ್ವಾಗತ ಕೋರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ್ದ ಅವರು, ತನ್ನ ತಂದೆ ಎನ್ಟಿಆರ್ ಅವರಿಗೆ ಶೀಘ್ರದಲ್ಲೇ 'ಭಾರತ ರತ್ನ' ಪ್ರಶಸ್ತಿ ದೊರೆಯಲಿ ಎನ್ನುವ ಆಶಯ ವ್ಯಕ್ತಪಡಿಸಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications