Krishna Passed Away : ತೆಲುಗು ನಟ ಮಹೇಶ್ ಬಾಬು ತಂದೆ ನಟ ಕೃಷ್ಣ ನಿಧನ
ಹೈದರಾಬಾದ್, ನವೆಂಬರ್ 15: ಅನಾರೋಗ್ಯದಿಂದ ಬಳಲುತ್ತಿದ್ದ ಮಹೇಶ್ ಬಾಬು ಅವರ ತಂದೆ ಹಾಗೂ ತೆಲುಗು ಚಿತ್ರರಂಗದ 'ಸೂಪರ್ ಸ್ಟಾರ್' ನಟ ಕೃಷ್ಣ ನಿಧನರಾಗಿದ್ದಾರೆ. ಮಂಗಳವಾರ ಮುಂಜಾನೆ 4 ಗಂಟೆಗೆ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅವರಿಗೆ 80 ವರ್ಷ ವಯಸ್ಸಾಗಿತ್ತು. ಸೋಮವಾರ ಅವರನ್ನು ಮುಂಜಾನೆ 1.15ಕ್ಕೆ ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ಕರೆತರಲಾಯಿತು. ತಕ್ಷಣವೇ ಅವರಿಗೆ ಸಿಪಿಆರ್ (ಕಾರ್ಡಿಯೋಪಲ್ಮನರಿ ರೆಸಸಿಟೇಶನ್) ನಡೆಸಲಾಯಿತು. ಅಲ್ಲದೆ ಐಸಿಯುಗೂ ದಾಖಲು ಮಾಡಲಾಯಿತು. ವೆಂಟಿಲೇಟರ್ನಲ್ಲಿ ಅವರಿಗೆ ಕೃತಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆ ವೇಳೆಗಾಗಲೇ ಅವರ ಆರೋಗ್ಯ ಸ್ಥಿತಿ ಹದಗೆಡುತ್ತ ಬಂದಿತು. ಆದರೆ ಅವರನ್ನು ಉಳಿಸಿಕೊಳ್ಳಲಾಗಲಿಲ್ಲ ಎಂದು ವೈದ್ಯರು ತಿಳಿಸಿದರು.
ಕೃಷ್ಣ ಅವರ ಮೂಲ ಹೆಸರು ಘಟ್ಟಮನೇನಿ ಶಿವ ರಾಮ ಕೃಷ್ಣ ಮೂರ್ತಿ ಎಂಬುದಾಗಿತ್ತು. ಇವರು ಸುಮಾರು 350 ಚಿತ್ರಗಳಲ್ಲಿ ನಟಿಸಿದ್ದಾರೆ. ಆ ಕಾಲದ ಅಗ್ರಗಣ್ಯ ನಟರಲ್ಲಿ ಇವರು ಒಬ್ಬರು. ಕೃಷ್ಣ ಅವರು ನಟ ಮಾತ್ರವಲ್ಲದೆ ಒಬ್ಬ ಯಶಸ್ವಿ ನಿರ್ದೇಶಕ ಹಾಗೂ ನಿರ್ಮಾಪಕ ಕೂಡ ಆಗಿದ್ದರು. ಅವರ ಚಿತ್ರರಂಗದ ಸೇವೆಯನ್ನು ಗುರುತಿಸಿ ಅವರಿಗೆ 2009ರಲ್ಲಿ ಪದ್ಮಭೂಷಣ ಪ್ರಶಸ್ತಿ ಕೂಡ ನೀಡಿ ಗೌರವಿಸಲಾಗಿತ್ತು.

ನಟ ಕೃಷ್ಣ ತೆಲುಗು ಸ್ಟಾರ್ ನಟ ಮಹೇಶ್ ಬಾಬು ಅವರ ತಂದೆ ಹಾಗೂ ಟಿಡಿಪಿ ನಾಯಕ ಜಯ್ ಗಲ್ಲಾ ಅವರ ಮಾವ ಕೂಡ ಆಗಿದ್ದಾರೆ. 1980ರ ದಶಕದಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರಿ ಸಂಸದರು ಆಗಿದ್ದರು. ಆದರೆ ಕೃಷ್ಣ ಅವರು ತಮಿಳುನಾಡಿನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯಾದ ಬಳಿಕ ರಾಜಕೀಯವನ್ನು ತೊರೆದಿದ್ದರು.

ಕೃಷ್ಣ ಅವರ ಪತ್ನಿ ಮತ್ತು ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಕೂಡ ಇದೇ ವರ್ಷದ ಸೆಪ್ಟೆಂಬರ್ನಲ್ಲಿ ನಿಧರರಾಗಿದ್ದರು. ಅವರ ಹಿರಿಯ ಮಗ ಮಹೇಶ್ ಬಾಬು ಅವರ ಅಣ್ಣ ರಮೇಶ್ ಬಾಬು ಜನವರಿಯಲ್ಲಿ ಮರಣ ಹೊಂದಿದ್ದರು. ಅವರ ಎರಡನೇ ಪತ್ನಿಯಾಗಿದ್ದ ನಟಿ ವಿಜಯ ನಿರ್ಮಲಾ ಅವರು 2019ರಲ್ಲಿ ನಿಧನರಾಗಿದ್ದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications