Breaking; ಸಿಹಿ ಸುದ್ದಿ; ದೇಶದ ವಿವಿಧ ರಾಜ್ಯದಲ್ಲಿ ಉಷ್ಣಾಂಶ ಕುಸಿತ
ನವದೆಹಲಿ, ಮೇ 01; ಬಿಸಿಗಾಳಿಯ ವಾತಾವರಣದಿಂದ ಕಂಗೆಟ್ಟಿದ್ದ ಜನರಿಗೆ ಸಿಹಿಸುದ್ದಿ. ದೇಶದ ಹಲವು ರಾಜ್ಯಗಳಲ್ಲಿ ಭಾನುವಾರ ಉಷ್ಣಾಂಶ ಕುಸಿತವಾಗಿದೆ. ಭಾರತೀಯ ಹವಾಮಾನ ಇಲಾಖೆ ಈ ಕುರಿತು ಮಾಹಿತಿ ನೀಡಿದೆ.
ಭಾನುವಾರ ಭಾರತೀಯ ಹವಾಮಾನ ಇಲಾಖೆ ಹಿರಿಯ ವಿಜ್ಞಾನಿ ಆರ್. ಕೆ. ಜಿನಮಣಿ ಈ ಕುರಿತು ಮಾತನಾಡಿದರು, "ದೇಶದ ಹಲವು ಪ್ರದೇಶಗಳಲ್ಲಿ ಉಷ್ಣಾಂಶ ಕುಸಿತವಾಗಿದೆ. ಪೂರ್ವ ಭಾರತದ ಪ್ರದೇಶಗಳಲ್ಲಿ ಇಂದು ಬಿಸಿಗಾಳಿಯ ವಾತಾವರಣ ಇಲ್ಲ" ಎಂದರು.
"ಉತ್ತರ ಪ್ರದೇಶದ ಉತ್ತರ ಭಾಗ, ದೆಹಲಿ, ಉತ್ತರ ಪಂಜಾಬ್ ಮತ್ತು ಉತ್ತರ ಹರ್ಯಾಣದಲ್ಲಿ ಬಿಸಿಗಾಳಿಯ ಪ್ರಭಾವಿಲ್ಲ. ಮೇ 1 ರಿಂದ 5ರ ತನಕ ತಾಪಮಾನ ಸಾಮಾನ್ಯವಾಗಿರುತ್ತದೆ" ಎಂದು ಆರ್. ಕೆ. ಜಿನಮಣಿ ಹೇಳಿದರು.

"ಪಂಜಾಬ್, ರಾಜಸ್ಥಾನ, ದೆಹಲಿ, ಹರ್ಯಾಣ, ಉತ್ತರ ಪ್ರದೇಶದಲ್ಲಿ ಮಳೆಯ ಮುನ್ಸೂಚನೆ ಇದೆ. ಈ ಪ್ರದೇಶಗಳಲ್ಲಿ ಗುಡುಗು ಮತ್ತು ದೂಳಿನ ಗಾಳಿಯ ಮುನ್ಸೂಚನೆ ನೀಡಲಾಗಿದೆ" ಎಂದು ತಿಳಿಸಿದರು.
ವಾಯುಭಾರ ಕುಸಿತ; ಅಂಡಮಾನ್ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಮೇ 4ರಂದು ಚಂಡಮಾರುತ ರೂಪಗೊಳ್ಳುವ ಸಾಧ್ಯತೆ ಇದೆ. ಇದರಿಂದಾಗಿ ಮೇ 6ರ ಬಳಿಕ ಹವಾಮಾನದಲ್ಲಿ ಬದಲಾವಣೆಯಾಗಬಹುದು. ಮೇ 6 ರಿಂದ 24 ಗಂಟೆಗಳ ಅವಧಿಯಲ್ಲಿ ವಾಯುಭಾರ ಕುಸಿತದ ಪ್ರಭಾವ ತಿಳಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.












Click it and Unblock the Notifications