Breaking; ಭಕ್ತಾದಿಗಳ ಗಮನಕ್ಕೆ, 2 ದಿನ ತಿರುಪತಿ ದೇವಾಲಯ ಬಂದ್
ಅಮರಾವತಿ, ಅಕ್ಟೋಬರ್ 12; ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಯೋಜನೆ ಮಾಡುತ್ತಿರುವ ಭಕ್ತರಿಗೆ ಮಾಹಿತಿಯೊಂದಿದೆ. ಎರಡು ದಿನಗಳ ಕಾಲ ತಿರುಪತಿಯಲ್ಲಿ ದರ್ಶನ ಭಾಗ್ಯ ಬಂದ್ ಮಾಡಲಾಗಿದೆ. ಆದ್ದರಿಂದ ಪ್ರವಾಸ ಹೊರಡುವ ಮುನ್ನ ದಿನಾಂಕ ತಿಳಿದುಕೊಳ್ಳಿ.
ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಒಂದು ದಿನ ತಿರುಪತಿ ದೇವಾಲಯಲ್ಲಿ ದರ್ಶನ ಸ್ಥಗಿತಗೊಳಿಸಲಾಗಿದೆ. ದೇವಾಲಯಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಟಿಟಿಡಿ ಮೊದಲೇ ದಿನಾಂಕ ಘೋಷಣೆ ಮಾಡಿದೆ.
ಅಕ್ಟೋಬರ್ 25 ಮತ್ತು ನವೆಂಬರ್ 8ರಂದು ತಿರುಪತಿ ತಿರುಮಲ ದೇವಾಲಯ ಬಾಗಿಲು ಮುಚ್ಚಿರಲಿದೆ. ಸುಮಾರು 12ಗಂಟೆಗಳಿಗೂ ಅಧಿಕ ಕಾಲ ದೇವಾಲಯದ ಬಾಗಿಲು ಮುಚ್ಚಲಾಗಿರುತ್ತದೆ ಎಂದು ಆಡಳಿತ ಮಂಡಳಿ ಹೇಳಿದೆ.

ದೇವಾಲಯ ಮುಚ್ಚಿರುವುದು ಮಾತ್ರವಲ್ಲ, ದೇವಾಲಯದ ಪ್ರಸಾದ ನಿಲಯದಲ್ಲಿ ಎರಡು ದಿನಗಳ ಕಾಲವೂ ಪ್ರಸಾದವನ್ನು ಸಹ ನೀಡಲಾಗುವುದಿಲ್ಲ ಎಂದು ಟಿಟಿಡಿ ಹೇಳಿದೆ. ಆದ್ದರಿಂದ ತಿರುಪತಿ ಪ್ರವಾಸ ಕೈಗೊಳ್ಳುವ ಮುನ್ನ ದಿನಾಂಕವನ್ನು ತಿಳಿದುಕೊಳ್ಳಿ.
ಅಕ್ಟೋಬರ್ 25 ಮತ್ತು ನವೆಂಬರ್ 8ರಂದು ಸಾಮಾನ್ಯ, ವಿಐಪಿ, ಶ್ರೀವಾಣಿ, ವಿಶೇಷ ದರ್ಶನವನ್ನು ರದ್ದುಗೊಳಿಸಲಾಗಿದೆ. ಶುದ್ಧಿ, ಪುಣ್ಯಾಹ ಬಳಿಕ ಮತ್ತೆ ದರ್ಶನ, ಇತರ ಸೇವೆ ಆರಂಭಿಸಲಾಗುತ್ತದೆ ಎಂದು ಟಿಟಿಡಿ ಪ್ರಕಟಣೆಯಲ್ಲಿ ತಿಳಿಸಿದೆ.
ದೇವಾಲಯ ಬಂದ್ ಏಕೆ?; ಅಕ್ಟೋಬರ್ 25ರಂದು ಸೂರ್ಯ ಗ್ರಹಣವಿದೆ. ಅಂದು ಸಂಜೆ 5.11 ರಿಂದ 6.27ರ ತನಕ ಗ್ರಹಣಕಾಲವಾಗಿದೆ. ನವೆಂಬರ್ 8ರಂದು ಸೂರ್ಯ ಗ್ರಹಣವಿದೆ. ಅಂದು ಮಧ್ಯಾಹ್ನ 2.39ರಿಂದ 6.19ರ ತನಕ ಗ್ರಹಣಕಾಲವಾಗಿದೆ.
ಗ್ರಹಣ ಕಾಲದಲ್ಲಿ ದೇಶದಲ್ಲಿ ಎಲ್ಲಾ ದೇವಾಲಯಗಳನ್ನು ಮುಚ್ಚಲಾಗುತ್ತದೆ. ಬಳಿಕ ಶುದ್ದೀಕರಣ ನಡೆಸಿ ಪುನಃ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications