'ಪುರೋಹಿತರ ಶಾಪದಿಂದ 2 ಬಾರಿ ಉತ್ತರಾಖಂಡ ಸಿಎಂ ಬದಲಾವಣೆ' ಎಂದ ದೇವಾಲಯ ಸಮಿತಿ
ಡೆಹ್ರಾಡೂನ್, ಜು. 07: ದೇವಸ್ತಾನಂ ಮಂಡಳಿಯನ್ನು ವಿಸರ್ಜಿಸಲು ವಿಫಲವಾದ ಕಾರಣ ಪುರೋಹಿತರ "ಶಾಪ" ದಿಂದಾಗಿ ಬಿಜೆಪಿ ಉತ್ತರಾಖಂಡದಲ್ಲಿ ತನ್ನ ಮುಖ್ಯಮಂತ್ರಿಯನ್ನು ಎರಡು ಬಾರಿ ಬದಲಾಯಿಸ ಬೇಕಾಯಿತು ಎಂದು ಗಂಗೋತ್ರಿ ಮಂದಿರ ಸಮಿತಿ ಮಂಗಳವಾರ ತಿಳಿಸಿದೆ.
''ಮಂಡಳಿಯನ್ನು ವಿಸರ್ಜಿಸದಿದ್ದರೆ ಮುಂದಿನ ವರ್ಷ ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ,'' ಎಂದು ದೇವಾಲಯದ ಜಂಟಿ ಕಾರ್ಯದರ್ಶಿ ರಾಜೇಶ್ ಸೆಮ್ವಾಲ್ ಹೇಳಿದ್ದಾರೆ.
ತ್ರಿವೇಂದ್ರ ಸಿಂಗ್ ರಾವತ್ ಮುಖ್ಯಮಂತ್ರಿ ಅವಧಿಯಲ್ಲಿ ರಚಿಸಲಾದ ದೇವಸ್ತಾನಂ ಮಂಡಳಿಗೆ ಉತ್ತರಾಖಂಡದ 51 ದೇವಾಲಯಗಳ ವ್ಯವಹಾರಗಳನ್ನು ನಡೆಸಲು ಆದೇಶಿಸಲಾಗಿದೆ.

ಆದರೆ ಈ ದೇವಸ್ತಾನಂ ಮಂಡಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳ ಪುರೋಹಿತರು, ತಮ್ಮ ಹಕ್ಕುಗಳ ಮೇಲೆ ಅತಿಕ್ರಮಣ ಮಾಡಲಾಗುತ್ತಿದೆ. ಈ ಹಿನ್ನೆಲೆ ಈ ಮಂಡಳಿಯನ್ನು ವಿಸರ್ಜಿಸಬೇಕು ಎಂದು ಒತ್ತಾಯಿಸಿ ಹಲವಾರು ವಾರಗಳ ಕಾಲ ಉಪವಾಸ ನಡೆಸಿದ್ದರು.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ದೇವಾಲಯದ ಜಂಟಿ ಕಾರ್ಯದರ್ಶಿ ರಾಜೇಶ್ ಸೆಮ್ವಾಲ್, "ಅರ್ಚಕರ ಶಾಪದಿಂದಾಗಿ ಬಿಜೆಪಿ ಮೂರೂವರೆ ವರ್ಷಗಳಲ್ಲಿ ಮೂರು ಮುಖ್ಯಮಂತ್ರಿಗಳನ್ನು ನೇಮಕ ಮಾಡಬೇಕಾಯಿತು. ಪಕ್ಷವು ಅನುಭವದಿಂದ ಕಲಿಯದಿದ್ದರೆ ಮತ್ತು ಅದರ ಹೊಸ ಮುಖ್ಯಮಂತ್ರಿ ಶೀಘ್ರದಲ್ಲೇ ದೇವಸ್ತಾನಂ ಮಂಡಳಿಯನ್ನು ವಿಸರ್ಜಿಸದಿದ್ದರೆ, ಅರ್ಚಕರ ಶಾಪದಿಂದಾಗಿ 2022 ರಲ್ಲಿ ಬಿಜೆಪಿ ಆಡಳಿತ ನಡೆಸಲು ಅವಕಾಶ ಸಿಗುವುದಿಲ್ಲ," ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ, ಮಾಜಿ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್, ಕುಂಭಮೇಳದ ಸಂದರ್ಭದಲ್ಲಿ ದೇವಾಲಯಗಳನ್ನು ಮಂಡಳಿಯ ನಿಯಂತ್ರಣದಿಂದ ತೆಗೆದುಹಾಕಲಾಗುವುದು ಮತ್ತು ಫಲಕವನ್ನು ರಚಿಸುವ ನಿರ್ಧಾರವನ್ನು ಮರುಪರಿಶೀಲಿಸಲಾಗುವುದು ಎಂದು ಘೋಷಿಸಿದ್ದರು. ಆದರೆ ರಾವತ್ ತನ್ನ ಭರವಸೆ ಈಡೇರಿಸುವ ಮುನ್ನವೇ ಸಿಎಂ ಸ್ಥಾನ ಕಳೆದುಕೊಂಡಿದ್ದು, ಪುಷ್ಕರ್ ಸಿಂಗ್ ಧಾಮಿ ಪ್ರಸ್ತುತ ಮುಖ್ಯಮಂತ್ರಿಯಾಗಿದ್ದಾರೆ. (ಒನ್ಇಂಡಿಯಾ ಸುದ್ದಿ)
-
ಶ್ರೀರಾಮನವಮಿ ಪ್ರಯುಕ್ತ ಬೆಂಗಳೂರಿನ ತ್ಯಾಗರಾಜನಗರದಲ್ಲಿ ಅಪರೂಪದ ‘ಪುಷ್ಪಯಾಗ’ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications