ಅಯೋಧ್ಯೆಗೆ ಬರುತ್ತಿವೆ ಟನ್ ಗಟ್ಟಲೆ ಕೆತ್ತನೆ ಕಲ್ಲು? ಏಕೆ?
ಅಯೋಧ್ಯೆಗೆ ರಾಜಸ್ಥಾನದಿಂದ ದೇವಾಲಯ ಕಟ್ಟುವ ಕಲ್ಲುಗಳ ರವಾನೆ. ಟನ್ ಗಟ್ಟಲೆ ಬಂದು ಬೀಳುತ್ತಿರುವ ಕಲ್ಲುಗಳು. ಅಯೋಧ್ಯೆಯಲ್ಲಿರುವ ಆರೆಸ್ಸೆಸ್ ಗೋದಾಮಿನಲ್ಲಿ ಸಂಗ್ರಹವಾಗುತ್ತಿರುವ ಕಲ್ಲುಗಳು.
ಲಖ್ನೋ, ಜುಲೈ 7: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಆರ್ ಎಸ್ ಎಸ್ ಕಚೇರಿಯ ಬಳಿಯ ಗೋದಾಮಿಗೆ ರಾಜಸ್ಥಾನದಿಂದ ದೇಗುಲದ ಕೆತ್ತನೆ ಕಲ್ಲುಗಳ ಸ್ಟಾಕ್ ಬಂದಿಳಿಯುತ್ತಿರುವುದು ಸ್ಥಳೀಯರಲ್ಲಿ ಶೀಘ್ರವೇ ರಾಮಮಂದಿರ ನಿರ್ಮಾಣ ಆಗುವ ನಿರೀಕ್ಷೆ ಹುಟ್ಟಿಸಿದೆ.
ಸುಮಾರು 200 ಟನ್ನಷ್ಟು ಕಲ್ಲುಗಳು ಬಂದಿವೆ. ಅವನ್ನು ಕೆತ್ತನೆ ಕಾರ್ಯಾಗಾರದ ಬಳಿ ಇಳಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿವೆ.

ಸುಮಾರು 15 ಟ್ರಕ್ ಗಳಲ್ಲಿ ಕಲ್ಲುಗಳು ಬಂದು ಜಮಾವಣೆಗೊಂಡಿವೆ ಎಂದು ಹೇಳಲಾಗಿದೆ. ಶೀಘ್ರದಲ್ಲೇ ಮತ್ತಷ್ಟು ಟನ್ ಗಳು ಅಯೋಧ್ಯೆಗೆ ಬರಲಿವೆ ಎಂದು ಹೆಸರನ್ನೇಳಲು ಇಚ್ಛಿಸದ ವಿಎಚ್ ಪಿ ನಾಯಕರೊಬ್ಬರು ತಿಳಿಸಿದ್ದಾರೆ. ಅಲ್ಲದೆ, ಗೋದಾಮಿನಲ್ಲಿ ಕಲ್ಲುಗಳ ಕೆತ್ತನೆ ಕಾರ್ಯ ಕೆಲಸವೂ ನಡೆಯುತ್ತಿದೆ ಎಂದೂ ಹೇಳಲಾಗಿದೆ.
ಆದರೆ, ಹೀಗೆ ಟನ್ ಗಟ್ಟಲೆ ಕಲ್ಲುಗಳು ಬಂದು ಬೀಳುತ್ತಿರುವುದರ ಬಗ್ಗೆ ಕೆಲ ಮುಸ್ಲಿಂ ಸಂಘಟನೆಗಳ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರಶ್ನಿಸಿದ ಮಾಧ್ಯಮಗಳಿಗೆ ಉತ್ತರಿಸಿದ ವಿಎಚ್ ಪಿ ವಕ್ತಾರ ಶರದ್ ಶರ್ಮಾ, ''1990ರಿಂದಲೂ ಇಲ್ಲಿಗೆ ಕಲ್ಲುಗಳನ್ನು ತರಲಾಗುತ್ತಿದೆ. ಕೆಲಸ ಮುಂದೆಯೂ ನಡೆಯಲಿದೆ. ಕಲ್ಲುಗಳನ್ನು ತರಲು ಯಾವುದೇ ನಿರ್ಬಂಧವಿಲ್ಲ'' ಎಂದು ಹೇಳಿದ್ದಾರೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications