ಮೀರತ್ ನಲ್ಲಿ 100 ಅಡಿ ಎತ್ತರದ ಮೋದಿ ಪ್ರತಿಮೆ !
ಮೀರತ್, ಅಕ್ಟೋಬರ್ 03: ಪ್ರಧಾನಿ ನರೇಂದ್ರ ಮೋದಿ ಕೋಟ್ಯಂತರ ಮಂದಿಗೆ ಆರಾಧ್ಯ ದೈವವಾಗಿರುವುದು ಹೊಸ ವಿಷಯವೇನಲ್ಲ.
ಮೋದಿ ಅವರನ್ನು ಆರಾಧಿಸಲು ಈಗ ದೇಗುಲವೊಂದನ್ನು ನಿರ್ಮಿಸಲಾಗುತ್ತಿದೆ. ಮೀರತ್ ನಲ್ಲಿ ನಿರ್ಮಿಸಲಾಗುವ ಈ ದೇಗುಲದಲ್ಲಿ 100 ಅಡಿ ಎತ್ತರದ ಮೋದಿ ಪ್ರತಿಮೆಯನ್ನು ಸ್ಥಾಪಿಸಲಾಗುತ್ತದೆ.

ಮೋದಿ ಅವರ ಪರಮ ಭಕ್ತ ಜೆ.ಪಿ ಸಿಂಗ್ ಎಂಬಾತ ಈ ಬೃಹತ್ ದೇಗುಲ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ. ಮೀರತ್ ನ ಸರ್ಧಾನ ಪ್ರದೇಶದಲ್ಲಿ ದೇಗುಲ ನಿರ್ಮಾಣಕ್ಕಾಗಿ ಐದು ಎಕರೆ ಭೂಮಿಯನ್ನು ಮೀಸಲಿಡಲಾಗಿದೆ.
ಅಕ್ಟೋಬರ್ 23ರಂದು ಗುದ್ದಲಿಪೂಜೆ ನಡೆಸಲು ನಿರ್ಧರಿಸಲಾಗಿದ್ದು, ಈ ದೇಗುಲ ನಿರ್ಮಾಣಕ್ಕೆ 10 ಕೋಟಿ ರು ಅಂದಾಜು ವೆಚ್ಚ ನಿಗದಿ ಮಾಡಲಾಗಿದೆ. ಸಾರ್ವಜನಿಕರಿಂದ ಚಂದಾ ಎತ್ತಿ ದೇಗುಲ ಹಾಗೂ ಬೃಹತ್ ಪ್ರತಿಮೆ ನಿರ್ಮಾಣ ಕಾರ್ಯ ನಡೆಸಲು ಮೋದಿ ಭಕ್ತ ಜೆಪಿ ಸಿಂಗ್ ಉದ್ದೇಶಿಸಿದ್ದಾರೆ.
ನರೇಂದ್ರ ಮೋದಿ ಅವರು ಭಾರತ ಮಾತೆಯ ಬಗ್ಗೆ ಇಟ್ಟುಕೊಂಡಿರುವ ಪ್ರೀತ್ಯಾದರಗಳಿಗೆ ನಾನು ತಲೆ ಬಾಗುತ್ತೇನೆ. ಮೋದಿ ಮ್ಯಾಜಿಕ್ ಎಲ್ಲರಿಗೂ ತಿಳಿಯಬೇಕಾದರೆ ದೇಗುಲ ನಿರ್ಮಾಣ ಆಗಲೇಬೇಕು. ಅಭಿವೃದ್ಧಿಯ ಪಥದಲ್ಲಿ ದೇಶವನ್ನು ಮುನ್ನಡೆಸುತ್ತಿರುವ ಮೋದಿ ಅವರ ಸಾಧನೆಯನ್ನು ಕೊಂಡಾಡಲು ಇದು ಸೂಕ್ತ ಮಾರ್ಗ ಎಂದು ನನಗಿಸಿತು ಎಂದು ಸಿಂಗ್ ಹೇಳಿದರು. ನೀರಾವರಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಆಗಿದ್ದ ಸಿಂಗ್ ಈಗ ನಿವೃತ್ತಿ ಬದುಕು ಸಾಗಿಸುತ್ತಿದ್ದಾರೆ.
ಮೀರತ್- ಕರ್ನಾಲ್ ಹೆದ್ದಾರಿಯಲ್ಲಿ ಐದು ಎಕರೆ ವಿಸ್ತೀರ್ಣದ ವಿಶಾಲವಾದ ಜಾಗವನ್ನು ದೇಗುಲ ನಿರ್ಮಾಣಕ್ಕಾಗಿ ಗುರುತಿಸಲಾಗಿದೆ. ಮೋದಿ ಅವರ ಬೃಹತ್ ಪ್ರತಿಮೆಯನ್ನು ಇಲ್ಲಿ ಸ್ಥಾಪಿಸಲಾಗುವುದು. ಇನ್ನೆರಡು ವರ್ಷಗಳಲ್ಲಿ ಈ ದೇಗುಲ ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ನಿರೀಕ್ಷೆಯಿದೆ ಎಂದು ಸಿಂಗ್ ಹೇಳಿದ್ದಾರೆ.(ಒನ್ಇಂಡಿಯಾ ಸುದ್ದಿ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications