ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಯೋತ್ಪಾದನೆ ಎಂಬುದು ಮನುಕುಲಕ್ಕೆ ಗಂಭೀರ ಬೆದರಿಕೆ: ಜೈಶಂಕರ್

|
Google Oneindia Kannada News

ನವದೆಹಲಿ,ಫೆಬ್ರವರಿ 23: ಭಯೋತ್ಪಾದನೆ ಎಂಬುದು ಮನುಕುಲಕ್ಕೇ ಬಹುದೊಡ್ಡ ಬೆದರಿಕೆಗಳಲ್ಲಿ ಒಂದಾಗಿದೆ ಎಂದು ಸಚಿವ ಎಸ್‌ ಜೈಶಂಕರ್ ಹೇಳಿದ್ದಾರೆ.

ಭಯೋತ್ಪಾದನೆ ಪರಿಣಾಮಕ್ಕೆ ತುತ್ತಾಗಿರುವ ಭಾರತ,ಇದರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಎಂದಿಗೂ ಮುಂಚೂಣಿಯಲ್ಲಿದೆ, ಮಾನಹಕ್ಕುಗಳ ರಕ್ಷಣೆ ಕುರಿತಂತೆ ಹೋರಾಡುತ್ತಿರುವ ಸಂಸ್ಥೆಗಳು ಒಳಗೊಂಡು ಎಲ್ಲರೂ ಭಯೋತ್ಪಾದನೆ ಪರಿಣಾಮವನ್ನು ಸ್ಪಷ್ಟವಾಗಿ ಅರಿತುಕೊಂಡಾಗ ಮಾತ್ರವೇ ಇದು ಸಾಧ್ಯವಾಗಲಿದೆ ಎಂದು ಹೇಳಿದರು.

ವಾಜಪೇಯಿ ದೃಷ್ಟಿಕೋನವೇ ಭಾರತದ ಬಾಂಧವ್ಯ ಗಟ್ಟಿಯಾಗಿರಲು ಕಾರಣ; ಜೈಶಂಕರ್ವಾಜಪೇಯಿ ದೃಷ್ಟಿಕೋನವೇ ಭಾರತದ ಬಾಂಧವ್ಯ ಗಟ್ಟಿಯಾಗಿರಲು ಕಾರಣ; ಜೈಶಂಕರ್

ಮಾನವ ಹಕ್ಕುಗಳ ಮಂಡಳಿಯ 46ನೇ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಭಯೋತ್ಪಾದನೆ ಎಂಬುದು ಮನುಕುಲದ ಮೇಲಿನ ಅಪರಾಧ,ಮೂಲಭೂತವಾಗಿ ಇದು ಮನುಷ್ಯನ ಬದುಕುವ ಹಕ್ಕನ್ನೇ ಕಸಿದುಕೊಳ್ಳಲಿದೆ ಎಂದು ಅಭಿಪ್ರಾಯಪಟ್ಟರು.

Terrorism Continues To Be One Of The Gravest Threats To Humankind: S Jaishankar

ಈಗ ಕಾಡುತ್ತಿರುವ ಕೊರೊನಾ ಪರಿಸ್ಥಿತಿಯು ಜಗತ್ತಿನ ವಿವಿಧೆಡೆ ಪರಿಸ್ಥಿತಿಯನ್ನು ಇನ್ನಷ್ಟು ಸಂಕೀರ್ಣಗೊಳಿಸಿದೆ.ಈಗಿನ ಸವಾಲು ಎದುರಿಸಲು ಪ್ರತಿಯೊಬ್ಬರು ಒಗ್ಗೂಡಬೇಕಿದೆ,ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸುವುದಕ್ಕೆ ಪೂರಕವಾಗಿ ವಿವಿಧ ಸಂಸ್ಥೆಗಳು ಹಾಗೂ ವ್ಯವಸ್ಥೆಯು ಬದಲಾಗಬೇಕಾದುದು ಅಗತ್ಯವಾಗಿದೆ ಎಂದರು.

ಭಯೋತ್ಪಾದನೆಯ ನಿಗ್ರಹ ಕುರಿತಂತೆ ಭಾರತ ಕಳೆದ ತಿಂಗಳು ವಿಶ್ವಸಂಸ್ಥೆಯ ಎದುರು 8 ಅಂಶಗಳ ಕ್ರಿಯಾ ಯೋಜನೆಯನ್ನು ಪ್ರಸ್ತಾಪಿಸಿತ್ತು. ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳ ಜೊತೆಗೂಡಿ ಕ್ರಿಯಾ ಯೋಜನೆ ಜಾರಿ ನಿಟ್ಟಿನಲ್ಲಿ ಪರಿಣಾಮವನ್ನು ಸ್ಪಷ್ಟವಾಗಿ ಅರಿತುಕೊಂಡಾಗ ಮಾತ್ರವೇ ಇದು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

English summary
Describing terrorism as one of the gravest threats to humankind, External Affairs Minister S Jaishankar said on Tuesday that the bodies dealing with human rights should realise that terrorism can never be justified, nor its perpetrators ever equated with its victims.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X