ಎನ್ಐಎಗೆ ಭಯೋತ್ಪಾದನಾ ದಾಳಿಯ ಬೆದರಿಕೆ ಸಂದೇಶ: ಮುಂಬೈನಲ್ಲಿ ಹೈ ಅಲರ್ಟ್!
ಮುಂಬೈನಲ್ಲಿ ಭಯೋತ್ಪಾದನಾ ದಾಳಿ ನಡೆಸುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಮೇಲ್ ಸಂದೇಶ ಬಂದಿದೆ.
ಮುಂಬೈ ಫೆಬ್ರವರಿ 3: ಮುಂಬೈನಲ್ಲಿ ಭಯೋತ್ಪಾದನಾ ದಾಳಿ ನಡೆಸುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಮೇಲ್ ಸಂದೇಶ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ತಾಲಿಬಾನಿ ಸದಸ್ಯ ಎಂದು ಹೇಳಿಕೊಳ್ಳುವ ಅಪರಿಚಿತ ವ್ಯಕ್ತಿಯಿಂದ ಮೇಲ್ ಸ್ವೀಕರಿಸಲಾಗಿದೆ. ಹೀಗಾಗಿ ಮಹಾರಾಷ್ಟ್ರದ ವಿವಿಧ ನಗರಗಳಲ್ಲಿ ಅಲರ್ಟ್ ಆಗಿರಲು ಎನ್ಐಎ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದೆ.
"ಬೆದರಿಕೆ ಮೇಲ್ ಕಳುಹಿಸಿದ ವ್ಯಕ್ತಿ ತನ್ನನ್ನು ತಾಲಿಬಾನಿ ಎಂದು ಹೇಳಿಕೊಂಡಿದ್ದಾನೆ. ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆಯಲಿದೆ ಎಂದು ಆತ ಹೇಳಿಕೊಂಡಿದ್ದಾನೆ ಎಂದು ಮುಂಬೈ ಪೊಲೀಸ್ ಮೂಲಗಳು ತಿಳಿಸಿವೆ. ಬೆದರಿಕೆ ಮೇಲ್ ಬಂದ ನಂತರ, ಮುಂಬೈ ಪೊಲೀಸರೊಂದಿಗೆ ಎನ್ಐಎ ಜಂಟಿ ತನಿಖೆಯನ್ನು ಪ್ರಾರಂಭಿಸಿದೆ.
ಈ ವರ್ಷದ ಜನವರಿಯಲ್ಲಿ ಮುಂಬೈನ ಧೀರೂಭಾಯಿ ಅಂಬಾನಿ ಇಂಟರ್ನ್ಯಾಶನಲ್ ಸ್ಕೂಲ್ಗೆ ಬೆದರಿಕೆ ಕರೆ ಬಂದಿತ್ತು. ಅದರಲ್ಲಿ ಅಪರಿಚಿತ ಕರೆ ಮಾಡಿದವರು ಶಾಲೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು. ಕಳೆದ ವರ್ಷ ಅಕ್ಟೋಬರ್ನಲ್ಲಿ ನಗರದ ವಿವಿಧೆಡೆ ಬಾಂಬ್ಗಳನ್ನು ಇರಿಸಿರುವ ಬಗ್ಗೆ ಮಾಹಿತಿ ನೀಡುವ ಇದೇ ರೀತಿಯ ಕರೆ ಬಂದಿತ್ತು.

ಸದ್ಯ ನಗರದಾದ್ಯಂತ ಹಲವು ಪ್ರಮುಖ ಸ್ಥಳಗಳಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ ಎಂದು ಮುಂಬೈ ಪೊಲೀಸರಿಗೆ ಅಪರಿಚಿತರಿಂದ 'ಅನುಮಾನಾಸ್ಪದ' ಕರೆ ಬಂದಿದೆ.
ಪೊಲೀಸರ ಪ್ರಕಾರ, ಇನ್ಫಿನಿಟಿ ಮಾಲ್ ಅಂಧೇರಿ, ಪಿವಿಆರ್ ಮಾಲ್ ಜುಹು ಮತ್ತು ಸಹಾರಾ ಹೋಟೆಲ್ ಏರ್ಪೋರ್ಟ್ನಲ್ಲಿ ನಗರದಲ್ಲಿ ಮೂರು ಬಾಂಬ್ಗಳನ್ನು ಇರಿಸಲಾಗಿದೆ ಎಂದು ಕರೆ ಬಂದಿದೆ. ಹೀಗಾಗಿ ಮುಂಬೈ ಪೊಲೀಸರು ಉದ್ದೇಶಿತ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications