ಮಣಿಪುರ: 18 ಜನರ ಹತ್ಯೆಗೆ ಕಾರಣನಾಗಿದ್ದ ಭಯೋತ್ಪಾದಕನ ಬಂಧನ
ಇಂಫಾಲ್, ಮಾರ್ಚ್ 10: ಕೆಸಿಇಎನ್ ಸಂಘಟನೆಗೆ ಸೇರಿದ ಭಯೋತ್ಪಾದಕನೊಬ್ಬನನ್ನು ಬಧಿಸುವಲ್ಲಿ ರಾಷ್ಟ್ರೀಯ ತನಿಖಾ ದಳ ಯಶಸ್ವಿಯಾಗಿದೆ. ಉಗ್ರನನ್ನು ಅನಿಲ್ ಶರ್ಮಾ ಅಲಿಯಾಸ್ ಮೈರಬಾ ಎಂದು ಗುರುತಿಸಲಾಗಿದ್ದು, ಆತನನ್ನು ಮಣಿಪುರದಲ್ಲಿ ಬಂಧಿಸಲಾಗಿದೆ.
ಮಣಿಪುರ ಪೊಲೀಸ್ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ತನಿಖಾ ದಳ, ಖಚಿತ ಮಾಹಿತಿಯ ಮೇರೆಗೆ ಅನಿಲ್ ಶರ್ಮಾನನ್ನು ಬಂಧಿಸಿತು. ಮಣಿಪುರದಲ್ಲಿ ಚಾಂದೇಲ್ ಜಿಲ್ಲೆಯ ಪ್ಯಾರಾಲೋನ್ ಎಂಬ ಹಳ್ಳಿಯಲ್ಲಿ ನಡೆದ ದಾಳಿಯೊಂದಕ್ಕೆ ಸಂಬಂಧಿಸಿದಂತೆ ಆತನನ್ನು ಬಂಧಿಸಲಾಗಿದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಈ ದಾಳಿಯಲ್ಲಿ ಒಟ್ಟು 18 ಜನ ಮೃತರಾಗಿದ್ದು, 15 ಜನ ಗಂಭೀರವಾಗಿ ಗಾಯಗೊಂಡಿದ್ದರು. ಬಂಧನದ ನಂತರ ಶರ್ಮಾನನ್ನು ಇಂಫಾಲ್ ನ ರಾಷ್ಟ್ರೀಯ ತನಿಖಾ ದಳದ ನ್ಯಾಯಾಲಯಕ್ಕೆ ಒಪ್ಪಿಸಲಾಗಿತ್ತು. ಹತ್ತು ದಿನಗಳ ಕಾಲ ಆತನನ್ನು ನ್ಯಾಯಾಲಯ ಬಂಧನದಲ್ಲಿರಿಸಲು ನ್ಯಾಯಾಲಯ ಆದೇಶಿಸಿದೆ.












Click it and Unblock the Notifications