ಪಂಜಾಬ್ : ವಾಯುನೆಲೆಯಲ್ಲಿ ಗುಂಡಿನ ಚಕಮಕಿ ಮುಕ್ತಾಯ
ನವದೆಹಲಿ, ಜನವರಿ 02 : ಪಠಾಣ್ ಕೋಟ್ ವಾಯುನೆಲೆಯಲ್ಲಿ ಗುಂಡಿನ ಚಕಮಕಿ ಮುಕ್ತಾಯಗೊಂಡಿದೆ. 45 ನಿಮಿಷಗಳಿಂದ ಯಾವುದೇ ಗುಂಡಿನ ಸದ್ದು ಕೇಳಿಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಮಯ 11.30 : ಪಠಾಣ್ ಕೋಟ್ ವಾಯುನೆಲೆಯಲ್ಲಿ ಪುನಃ ಗುಂಡಿನ ಚಕಮಕಿ ಆರಂಭವಾಗಿದೆ. ನಾಲ್ವರು ಉಗ್ರರನ್ನು ಇದುವರೆಗೂ ಯೋಧರು ಹತ್ಯೆ ಮಾಡಿದ್ದಾರೆ. ವಾಯುನೆಲೆಯಲ್ಲಿ ಇನ್ನೊಬ್ಬ ಉಗ್ರ ಅಡಗಿ ಕುಳಿತಿರಬಹುದು ಎಂದು ಶಂಕಿಸಲಾಗಿದೆ.
SWAT team at #Pathankot attack site, combing operations underway (visuals deferred by unspecified time) pic.twitter.com/ojOOT9xjpF
— ANI (@ANI_news) January 2, 2016 ಹಿಂದಿನ ಸುದ್ದಿ : ಪಂಜಾಬ್ನ ಪಠಾಣ್ ಕೋಟ್ ವಾಯುನೆಲೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಸೇನಾ ಸಮವಸ್ತ್ರ ಧರಿಸಿದ್ದ ಉಗ್ರರು ಶನಿವಾರ ಮುಂಜಾನೆ ವಾಯುನೆಲೆಗೆ ನುಗ್ಗಿದ್ದು, ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.

ಎರಡು ದಿನಗಳ ಹಿಂದೆ ಗಡಿದಾಟಿ ಭಾರತಕ್ಕೆ ಪ್ರವೇಶಿಸಿರುವ ಉಗ್ರರು ಗುರುದಾಸ್ ಪುರ ಎಸ್ಪಿ ವಾಹನವನ್ನು ಅಪಹರಿಸಿ ಅದರ ಮೂಲಕ ವಾಯುನೆಲೆ ಪ್ರವೇಶಿಸಿದ್ದಾರೆ. ಶನಿವಾರ ಮುಂಜಾನೆ 3.30ರ ಸುಮಾರಿಗೆ ವಾಯುನೆಲೆಗೆ ನುಗ್ಗಿದ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದಾರೆ. [ಚಿತ್ರಗಳು : ನರೇಂದ್ರ ಮೋದಿ ಅಚ್ಚರಿಯ ಲಾಹೋರ್ ಭೇಟಿ]
ಯೋಧರು ವಾಯುನೆಲೆಯನ್ನು ಸುತ್ತುವರೆದಿದ್ದು, ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ನಾಲ್ಕು ಉಗ್ರರು ಮತ್ತು ಇಬ್ಬರು ಯೋಧರು ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾರೆ. ಪಠಾಣ್ ಕೋಟ್ ವಾಯುನೆಲೆ ಪ್ರದೇಶವನ್ನು ಯೋಧರು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, ವಾಯುನೆಲೆ ಸುತ್ತಲು ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
Security deployed outside #Pathankot Air Force Station. (pictures deferred by unspecified time) pic.twitter.com/LmR5ylbGo4
— ANI (@ANI_news) January 2, 2016 ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ : ಪಠಾಣ್ ಕೋಟ್ನಲ್ಲಿನ ಉಗ್ರರ ದಾಳಿಯ ಕುರಿತು ದೆಹಲಿಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಧೋವಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ದಾಳಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ.
2015ರಲ್ಲಿಯೂ ದಾಳಿ ನಡೆದಿತ್ತು : 2015ರ ಜುಲೈನಲ್ಲಿ ಗುರುದಾಸ್ ಪುರ್ಕ್ಕೆ ನುಗ್ಗಿದ್ದ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು. ಸುಮಾರು 11 ಗಂಟೆಗಳ ಕಾರ್ಯಾಚರಣೆ ಬಳಿಕ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳೊಂದಿಗೆ ನುಗ್ಗಿದ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದವು. [ಚಿತ್ರಗಳು : ಪಂಜಾಬಿನಲ್ಲಿ ಉಗ್ರರನ್ನು ಮಟ್ಟ ಹಾಕಿದ ಯೋಧರು]
ಈ ಉಗ್ರರ ದಾಳಿಯಲ್ಲಿ ಹತ್ತು ಜನರು ಮೃತಪಟ್ಟಿದ್ದರು. ಸೇನಾ ಸಮವಸ್ತ್ರ ಧರಿಸಿ ಮಾರುತಿ 800 ಕಾರಿನಲ್ಲಿ ಆಗಮಿಸಿದ ನಾಲ್ವರು ಉಗ್ರರು ಪಂಜಾಬ್ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಮೇಲೆ ದಾಳಿ ಮಾಡಿ, ನಂತರ ಪೊಲೀಸ್ ಠಾಣೆಯಲ್ಲಿ ಅಡಗಿ ಕುಳಿತಿದ್ದರು.
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ












Click it and Unblock the Notifications