Pics : ಭಾರತೀಯ ಸೇನಾ ಶಿಬಿರಕ್ಕೆ ನುಗ್ಗಿದ ಉಗ್ರರ ಗುಂಡು
ಶ್ರೀನಗರ, ಡಿ.5: ಜಮ್ಮು ಮತ್ತು ಕಾಶ್ಮೀರದ ಉರಿ ವಲಯದ ಭಾರತೀಯ ಸೇನೆಯ ಶಿಬಿರವನ್ನು ಉಗ್ರರ ಗುಂಡು ತಲುಪಿದೆ. ಶುಕ್ರವಾರ ಮುಂಜಾನೆ ನಡೆದ ಉಗ್ರರು ಗುಂಡಿನ ದಾಳಿಗೆ ಐವರು ಯೋಧರು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ. ಸಾವಿನಸಂಖ್ಯೆ 17ಕ್ಕೇರಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಕಂಡು ಬಂದಿದೆ.
ಇತ್ತೀಚಿನ ವರದಿಗಳು ಬಂದಾಗ ಸುಮಾರು 11 ಭದ್ರತಾ ಸಿಬ್ಬಂದಿ ಹಾಗೂ 6 ಜನ ಉಗ್ರರು ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣಾ ಮತದಾನ ಮುಗಿದಿದ್ದು, ಎರಡನೇ ಹಂತದ ಮತದಾನ ಡಿ.9 ರಂದು ನಡೆಯಲಿದೆ. ಡಿ.23ಕ್ಕೆ ಫಲಿತಾಂಶ ಹೊರಬೀಳಲಿದೆ. ಇಂದು ಗುಂಡಿನ ಚಕಮಕಿ ನಡೆದ ಉರಿ ಪ್ರದೇಶದಲ್ಲಿ 6 ವಿಧಾನಸಭಾಕ್ಷೇತ್ರಗಳಿವೆ.
ಗಡಿ ನಿಯಂತ್ರಣ ರೇಖೆ ಸಮೀಪದ ಉರಿ ವಲಯಗಳಲ್ಲಿದ್ದ ಸೇನಾ ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಸೇನಾ ಕ್ಯಾಂಪ್ ಮೇಲೆ ದಾಳಿ ಮಾಡಲು ಉಗ್ರರು ಯತ್ನ ಮಾಡಿದ್ದಾರೆ. ಈ ವೇಳೆ, ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಶುಕ್ರವಾರ ಬೆಳಗ್ಗೆ ಬರಮುಲ್ಲಾ ಜಿಲ್ಲೆಯ ಉರಿ ಎಂಬಲ್ಲಿ ಗುಂಡಿನ ಚಕಮಕಿ ನಡೆದಿದೆ. ಭಾರತೀಯ ಸೇನಾ ಶಿಬಿರದಲ್ಲಿ ಭಾರಿ ಶಸ್ತ್ರಾಸ್ತ್ರಗಳಿರುವುದನ್ನು ಗಮನಿಸಿರುವ ಉಗ್ರರು ಶಿಬಿರವನ್ನು ಟಾರ್ಗೆಟ್ ಮಾಡಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ.

ಉಗ್ರರ ದಾಳಿಯಲ್ಲಿ ಮೂವರು ಯೋಧರು, ಇಬ್ಬರು ಪೊಲೀಸ್ ಅಧಿಕಾರಿಗಳು ಹುತಾತ್ಮರಾಗಿದ್ದಾರೆ ಎಂದು ಸೇನೆ ಪ್ರಕಟಿಸಿದೆ.

ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಸಹ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಯೋಧರ ಗುಂಡಿಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ.

ಗುಂಡಿನ ಚಕಮಕಿ ನಿಂತಿದ್ದರೂ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಉಗ್ರರಿಗಾಗಿ ಯೋಧರು ತೀವ್ರ ಶೋಧ ನಡೆಸಲಾಗುತ್ತಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications