ಲಂಡನ್ನಿನ ಉಗ್ರರ ದಾಳಿಗೂ ಬೆಂಗಳೂರಿಗೂ ನಂಟಿದೆ!
ಲಂಡನ್ನಿನಲ್ಲಿ ಪಾದಚಾರಿಗಳ ಮೇಲೆ ವಾಹನ ಹರಿಸಿದ ಘಟನೆಗೂ ಕರ್ನಾಟಕಕ್ಕೂ ಸಂಬಂಧವಿದೆ. ಈ ಮಾದರಿಯ ದಾಳಿಯನ್ನು ಆರಂಭಿಸಿದ್ದು ಬೆಂಗಳೂರಿನ ಮೂಲದ ಜಿಹಾದಿ
ಬೆಂಗಳೂರು, ಜೂನ್ 04 : ಲಂಡನ್ನಿನಲ್ಲಿ ಪಾದಚಾರಿಗಳ ಮೇಲೆ ವಾಹನ ಹರಿಸಿದ ಉಗ್ರರ ದಾಳಿ ಘಟನೆಗೂ ಕರ್ನಾಟಕಕ್ಕೂ ಸಂಬಂಧವಿದೆ. ಈ ಮಾದರಿಯ ದಾಳಿಯನ್ನು ಮೊದಲಿಗೆ ಆರಂಭಿಸಿದ್ದು ಬೆಂಗಳೂರಿನ ಮೂಲದ ಜಿಹಾದಿ.
ಲಂಡನ್ನಿನ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಶನಿವಾರ(ಜೂನ್ 03) ರಾತ್ರಿ ಉಗ್ರರ ದಾಳಿ ಸಂಭವಿಸಿದ್ದು, 7 ಮಂದಿ ಸತ್ತು, ಹಲವಾರು ಮಂದಿಗೆ ಗಾಯಗಳಾಗಿವೆ. ಲಂಡನ್ನಿನ ಬರೋ, ಲಂಡನ್ ಬ್ರಿಡ್ಜ್, ದಿ ವಾಕ್ಸ್ ಹಾಲ್ ಪ್ರದೇಶದಲ್ಲಿ ಉಗ್ರರ ದಾಳಿ ನಡೆದಿದೆ. ಪಾದಚಾರಿಗಳ ಮೇಲೆ ವಾಹನದಿಂದ ಡಿಕ್ಕಿ ಹೊಡೆಯಲಾಗಿದೆ. ಇನ್ನೊಂದೆಡೆ 'ಒಂಟಿ ತೋಳ ದಾಳಿ' ಮಾದರಿಯಲ್ಲಿ ಸಾರ್ವಜನಿಕರಿಗೆ ಚಾಕುವಿನಿಂದ ಇರಿದು ಕೊಲ್ಲಲಾಗಿದೆ.[ಉಗ್ರರ ದಾಳಿ: ಭಾರತ ಹಾಗೂ ಪಾಕಿಸ್ತಾನ ಪಂದ್ಯದ ಕಥೆ ಏನು?]
ವಾಹನ ಡಿಕ್ಕಿ ವಿಧಾನ: ಚಾಕು ಇರಿತ, ವಾಹನ ಡಿಕ್ಕಿ, ವಿಷ ಬಳಕೆ ಎಲ್ಲವೂ ಇರಾಕಿ ಉಗ್ರಸಂಘಟನೆ ಸದಸ್ಯರು, ಜಿಹಾದಿಗಳು ಬಳಸುವ ವಿಧಾನವಾಗಿದೆ. ಇಸ್ರೇಲ್ ನ ಪ್ಯಾಲೆಸ್ಟೇನ್ ನಲ್ಲಿ ವಾಹನ ಡಿಕ್ಕಿ ಮಾಡಿ ಸಾರ್ವಜನಿಕರನ್ನು ಕೊಲ್ಲುವ ವಿಧಾನ ಬಳಕೆಯಾಗಿತ್ತು. ಆದರೆ, ಲಂಡನ್ನಿನ ಗ್ಲಾಸ್ಗೋ ವಿಮಾನ ನಿಲ್ದಾಣದ ಗೋಡೆಗೆ ಬೆಂಕಿ ಹೊತ್ತಿಕೊಂಡಿರುವ ವ್ಯಾನ್ ಡಿಕ್ಕಿ ಹೊಡೆಸಿದ್ದು ಬೆಂಗಳೂರು ಮೂಲದ ಜಿಹಾದಿ ಖಲೀಫ್ ಅಹ್ಮದ್.

2007ರ ಜೂನ್ 30ರಂದು ಗ್ಲಾಸ್ಗೋ ದಾಳಿ ನಂತರ ಈ ವಿಧಾನ ಬಳಕೆ ಕಡಿಮೆಯಾಗಿತ್ತು. 2014ರಲ್ಲಿ ಐಎಸ್ಐಎಸ್ ಹಾಗೂ ಅಲ್ ಖೈದಾ ಸಂಘಟನೆಗಳು ವಾಹನ ಡಿಕ್ಕಿ ವಿಧಾನ ಬಳಸುವಂತೆ ಸೂಚಿಸಿದ್ದವು. [ಉಗ್ರರ ದಾಳಿಗೆ ಬೆಚ್ಚಿದ ಲಂಡನ್, ಹೈ ಅಲರ್ಟ್ ಘೋಷಣೆ!]
ಇದೀಗ ಮತ್ತೊಮ್ಮೆ ಇದೇ ವಿಧಾನದಲ್ಲಿ ದಾಳಿ ಹೆಚ್ಚು ಜನಪ್ರಿಯಗೊಳ್ಳುತ್ತಿದೆ. ಖಲೀಫ್ ಅಹ್ಮದ್ ಕೂಡಾ ಹಿಂದೊಮ್ಮೆ ಗೋವಾದಲ್ಲಿ ಇದೇ ರೀತಿ ವಾಹನವನ್ನು ಪಾದಚಾರಿಗಳ ಮೇಲೆ ಹರಿಸಿ ದಾಳಿ ನಡೆಸುವ ಉದ್ದೇಶ ಹೊಂದಿದ್ದ. ಆದರೆ, ಆತನ ಕಾರ್ಯಾಚರಣೆ ವಿಫಲವಾಗಿತ್ತು.
ಗನ್, ಬಾಂಬ್ ಗಳ ಕಾಲದಲ್ಲಿ ಚಾಕು ಚೂರಿ, ವಿಷ, ಅಪಘಾತದಂಥ ವಿಧಾನ ಬಳಸಿ, ಪೊಲೀಸರ ಹದ್ದಿನ ಕಣ್ಣಿಗೆ ಮಣ್ಣೆರೆರಚಲಾಗುತ್ತಿದೆ. ಅಲ್ ಖೈದಾ ಈಗಾಗಲೇ ಕಾರು ಬಾಂಬ್ ಬಳಕೆ ಮಾಡಿದೆ. ಲಂಡನ್ ನಲ್ಲಿ ಕಾರು ಹರಿಸಿ ನಡೆಸಿರುವ ದಾಳಿ ಬಗ್ಗೆ ಇನ್ನಷ್ಟು ಮಾಹಿತಿ, ತನಿಖೆ ನಂತರ ಹೊರಬೀಳಲಿದೆ.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications