ಲೋಕಭೆಯಲ್ಲ....ನಟ ದಳಪತಿ ವಿಜಯ್ ಕಣ್ಣಿಟ್ಟಿರೋದು 2026 ರ ವಿಧಾನಸಭಾ ಚುನಾವಣೆ ಮೇಲೆ!
ತಮಿಳು ಚಿತ್ರರಂಗದ ಸೂಪರ್ಸ್ಟಾರ್ ವಿಜಯ್ ಅವರು ರಾಜಕೀಯಕ್ಕೆ ಧುಮುಕಲು ಸಿದ್ಧರಾಗಿದ್ದಾರೆ. ಇದು ತಮಿಳುನಾಡಿನ ಸಿನಿಮಾ ಮತ್ತು ರಾಜಕೀಯದಲ್ಲಿ ಇದು ಹೊಸ ತಿರುವು ತರಲಿದೆ ಎಂದು ಮೂಲಗಳು ಮಂಗಳವಾರ ಸೂಚಿಸಿವೆ. ಫೆಬ್ರವರಿ ಮೊದಲ ವಾರದಲ್ಲಿ ನವ ದೆಹಲಿಯಲ್ಲಿ ಇನ್ನೂ ಹೆಸರಿಸದ ರಾಜಕೀಯ ಪಕ್ಷವನ್ನು ನೋಂದಾಯಿಸಲು ನಟ ವಿಜಯ್ ಚಿಂತನೆ ನಡೆಸಿದ್ದಾರೆ.
ಇನ್ನೂ ನಟ ವಿಜಯ್ ಅವರ ಪಕ್ಷವು ಲೋಕಸಭೆಗಲ್ಲ... ಮುಂದಿನ ತಮಿಳುನಾಡು ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದೆ ಎಂದು ಹೇಳಲಾಗಿದೆ. ಹೆಸರು ನೋಂದಾಯಿಸದ ವಿಜಯ್ ಅವರ ಪಕ್ಷವು 2026 ರ ತಮಿಳುನಾಡು ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ವಿಜಯ್ ಪಕ್ಷದ ಅಧ್ಯಕ್ಷರೆಂದು ಘೋಷಿಸಲಾಗಿದ್ದು, ಹೆಸರು ನೋಂದಾಯಿಸುವ ಪ್ರಕ್ರಿಯೆ ನಡೆಯುತ್ತಿದೆ.

"ವಿಜಯ್ ಅವರು ತಮಿಳುನಾಡಿನಲ್ಲಿ 2026 ರ ರಾಜ್ಯ ಚುನಾವಣೆಗೆ ಮುಂಚಿತವಾಗಿ ರಾಜಕೀಯಕ್ಕೆ ಪ್ರವೇಶಿಸುತ್ತಾರೆ. ತಮಿಳುನಾಡಿನ ಸಂಪ್ರದಾಯಗಳಿಗೆ ಅನುಗುಣವಾಗಿ ಹೆಸರನ್ನು ಇಡಲಾಗುತ್ತದೆ. ಖಂಡಿತವಾಗಿಯೂ ಅದರಲ್ಲಿ ಕಳಗಂ ಇರುತ್ತದೆ" ಎಂದು ಮೂಲಗಳು ತಿಳಿಸಿವೆ.
ಜೊತೆಗೆ "ನಟ ವಿಜಯ್ ಅವರನ್ನು ತಮ್ಮ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಾಯಿಸುವ ಪ್ರಕ್ರಿಯೆ ನಡೆಯುತ್ತಿದೆ. ಪಕ್ಷವು ತನ್ನ ಪ್ರಧಾನ ಕಾರ್ಯದರ್ಶಿ ಮತ್ತು ಖಜಾಂಚಿಯನ್ನೂ ನೇಮಿಸಿದೆ. ಸುಮಾರು 200 ಸದಸ್ಯರು ಪಾಲ್ಗೊಂಡಿದ್ದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಕೇಂದ್ರ ಕಾರ್ಯಕಾರಿ ಸಮಿತಿಯನ್ನೂ ರಚಿಸಲಾಗಿದೆ" ಎಂದು ವರದಿಯಾಗಿದೆ.
ವಿಜಯ್ ಅವರಿಗೆ ಪಕ್ಷದ ಹೆಸರನ್ನು ಆಯ್ಕೆ ಮಾಡುವ ಅಧಿಕಾರ ನೀಡಲಾಗಿದೆ. ನಟ ಈಗಾಗಲೇ 'ವಿಜಯ್ ಮಕ್ಕಳ್ ಇಯಕ್ಕಂ' ಎಂಬ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಸಾವಿರಾರು ಅಭಿಮಾನಿಗಳನ್ನು ಇದು ಹೊಂದಿದೆ. ಈ ಫ್ಯಾನ್ ಗ್ರೂಪ್ ರಾಜ್ಯಾದ್ಯಂತ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಇತ್ತೀಚೆಗಷ್ಟೇ ಅಭಿಮಾನಿಗಳ ಸಂಘ ತಮಿಳುನಾಡಿನ ಪಬ್ಲಿಕ್ ಪರೀಕ್ಷೆಯಲ್ಲಿ ಟಾಪರ್ ಆದವರನ್ನು ಸನ್ಮಾನಿಸಿತ್ತು.

ರಾಜಕೀಯದಲ್ಲಿ ಆಸಕ್ತಿ ಹೊಂದಿರುವ ವಿಜಯ್
ನಟ ವಿಜಯ್ ಯಾವಾಗಲೂ ರಾಜಕೀಯದ ಮಹತ್ವಾಕಾಂಕ್ಷೆಯನ್ನು ಹೊಂದಿದ್ದಾರೆ. ಹಲವಾರು ಬಾರಿ, ಅವರು ತಮ್ಮ ವೃತ್ತಿಜೀವನದ ಕೆಲವು ಹಂತದಲ್ಲಿ ರಾಜಕೀಯಕ್ಕೆ ಪ್ರವೇಶಿಸುವ ಬಗ್ಗೆ ಸುಳಿವುಗಳನ್ನು ನೀಡಿದ್ದಾರೆ. 2020 ರಲ್ಲಿ, ಅವರ ತಂದೆ ಎಸ್ಎ ಚಂದ್ರಶೇಖರ್ ಅವರು ರಾಜಕೀಯ ಪಕ್ಷದ ಮೂಲಕ ರಾಜಕೀಯದಲ್ಲಿ ಸಕ್ರಿಯರಾಗುವುದಾಗಿ ಘೋಷಿಸಿದ್ದರು. ಅಲ್ಲಿಂದಲೇ ವಿಜಯ್ ಕೂಡ ರಾಜಕೀಯಕ್ಕ ಎಂದ್ಟರಿ ಕೊಡುವ ಸುದ್ದಿ ಹಬ್ಬಿತ್ತು.
ಹೊಸ ಪಕ್ಷಕ್ಕೆ ವಿಜಯ್ ತಂದೆ ಎ ಚಂದ್ರಶೇಖರ್ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ, ಅವರ ಪತ್ನಿ ಅದರ ಖಜಾಂಜಿ ಮತ್ತು ಸಂಬಂಧಿ ಪದ್ಮನಾಭನ್ ಪಕ್ಷದ ಅಧ್ಯಕ್ಷರು ಎಂದು ಘೋಷಿಸಿದರು. ಆದರೆ, ವಿಜಯ್ ತನ್ನ ಹೆಸರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದರಿಂದ ತಂದೆಯೊಂದಿಗೆ ಅಸಮಾಧಾನ ಹೊಂದಿದ್ದರು. ಹೀಗಾಗಿ, ಅವರು ತಮ್ಮ ಪೋಷಕರಾದ ಎಸ್ಎ ಚಂದ್ರಶೇಖರ್ ಮತ್ತು ಶೋಬಾ ಚಂದ್ರಶೇಖರ್ ಸೇರಿದಂತೆ ಹನ್ನೊಂದು ಜನರ ವಿರುದ್ಧ ಚೆನ್ನೈನ ಸಿಟಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದರು.
"ನನ್ನ ತಂದೆ ನೀಡಿರುವ ರಾಜಕೀಯ ಹೇಳಿಕೆಗಳಿಗೂ ನನಗೂ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಯಾವುದೇ ಸಂಬಂಧವಿಲ್ಲ, ನನ್ನ ತಂದೆಯ ರಾಜಕೀಯ ಆಕಾಂಕ್ಷೆಗಳನ್ನು ಅನುಸರಿಸಲು ನಾನು ಬದ್ಧನಲ್ಲ. ನನ್ನ ತಂದೆ ಪ್ರಾರಂಭಿಸಿದ ಪಕ್ಷಕ್ಕೆ ನನ್ನ ಅಭಿಮಾನಿಗಳು ಸೇರಬೇಡಿ ಎಂದು ವಿನಂತಿಸುತ್ತೇನೆ. ಯಾರಾದರೂ ತಮ್ಮ ರಾಜಕೀಯ ಆಕಾಂಕ್ಷೆಗಳಿಗಾಗಿ ನನ್ನ ಹೆಸರು, ಫೋಟೋ ಅಥವಾ ನನ್ನ ಅಭಿಮಾನಿ ಸಂಘಗಳನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸಿದರೆ, ನಾನು ಅವರ ವಿರುದ್ಧ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇನೆ" ಎಂದು ಹೇಳಿಕೆಯಲ್ಲಿ ತಿಳಿಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಎಸ್ಎ ಚಂದ್ರಶೇಖರ್ ಪಕ್ಷವನ್ನು ವಿಸರ್ಜಿಸಿದರು.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications