ಬೆಂಗಳೂರಿನ ಮತದಾರರಿಗೆ ಥ್ಯಾಂಕ್ಸ್ ಎಂದ ಮೋದಿ
ಬೆಂಗಳೂರು, ಆಗಸ್ಟ್ 25: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರ ಸ್ಥಾಪಿಸುವ ಹಂತಕ್ಕೆ ಬಂದಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮೇಲೆ ಜನರು ವಿಶ್ವಾಸ ಇರಿಸಿಕೊಂಡಿದ್ದಾರೆ. 126 ಕೋಟಿ ಜನರ ಆಶೋತ್ತರ ಈಡೇರಿಸುವುದೇ ನಮ್ಮ ಗುರಿ ಎಂದಿದ್ದಾರೆ.
ಮೈಕ್ರೋ ಬ್ಲಾಗಿಂಗ್ ತಾಣ ಬಳಸಿ ಟ್ವೀಟ್ ಮಾಡಿರುವ ಮೋದಿ, ಮಧ್ಯಪ್ರದೇಶ, ರಾಜಸ್ಥಾನ ನಂತರ ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧಿಸಿದ್ದೇವೆ. ಇದು ಉತ್ತಮ ಆಡಳಿತ ಹಾಗೂ ರಾಜಕೀಯ ಬೆಳವಣಿಗೆಗೆ ಪೂರಕವಾಗಿದೆ ಎಂದಿದ್ದಾರೆ.
ಬೆಂಗಳೂರಿನ ಮತದಾರರು, ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರಿಗೆ ನನ್ನ ಅಭಿನಂದನೆ ತಿಳಿಸುತ್ತೇನೆ. ಬಿಬಿಎಂಪಿ ಚುನಾವಣೆ ಫಲಿತಾಂಶ ಸಂತಸ ತಂದಿದೆ ಎಂದು ಮೋದಿ ಹೇಳಿದ್ದಾರೆ. [ಬಿಬಿಎಂಪಿ: ಬಿಜೆಪಿಗೆ ಸ್ಪಷ್ಟ ಬಹುಮತ, ಕಾಂಗ್ರೆಸ್ಸಿಗೆ ಮುಖಭಂಗ]
ಇನ್ನೊಂದೆಡೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಇದು ಬಿಜೆಪಿ ಕಾರ್ಯಕರ್ತರ ಗೆಲುವು ಎಂದಿದ್ದಾರೆ. ಅಮಿತ್ ಶಾ ಅವರು ಸದ್ಯ ತಮಿಳುನಾಡಿನ ಚಿದಂಬರಂನಲ್ಲಿ ನಟರಾಜ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
| ಒಟ್ಟು ಸ್ಥಾನಗಳು | ಬಿಜೆಪಿ | ಕಾಂಗ್ರೆಸ್ | ಜೆಡಿಎಸ್ | ಇತರೆ |
| 198 | 100 | 76 | 14 | 8 |
ಫಲಿತಾಂಶ: ಬೆಂಗಳೂರು ದಕ್ಷಿಣ | ಉತ್ತರ ಜಿಲ್ಲೆ | ನಗರ ಜಿಲ್ಲೆ| ಸೆಂಟ್ರಲ್ ಜಿಲ್ಲೆಬಿಬಿಎಂಪಿ ಫಲಿತಾಂಶ: ಬಿಜೆಪಿ 100; ಕಾಂಗ್ರೆಸ್ 76; ಜೆಡಿಎಸ್ 14; ಇತರೆ 8. ಈ ಹಿಂದಿನ ಅವಧಿಯಲ್ಲಿ ಬಿಬಿಎಂಪಿಯಲ್ಲಿ ಕಾಂಗ್ರೆಸ್ 65 ಸದಸ್ಯ ಬಲ ಹೊಂದಿತ್ತು. ಬಿಜೆಪಿ 111 ಸ್ಥಾನ ಗಳಿಸಿತ್ತು. ಜೆಡಿಎಸ್ 15 ಸ್ಥಾನ ಪಡೆದಿತ್ತು. ಸರಳ ಬಹುಮತ ಸಾಬೀತು ಪಡಿಸಲು ಬಿಜೆಪಿಗೆ 103 ಸ್ಥಾನಗಳು ಬೇಕು.

ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಿಜೆಪಿ
ಮೈಕ್ರೋ ಬ್ಲಾಗಿಂಗ್ ತಾಣ ಬಳಸಿ ಟ್ವೀಟ್ ಮಾಡಿರುವ ಮೋದಿ, ಮಧ್ಯಪ್ರದೇಶ, ರಾಜಸ್ಥಾನ ನಂತರ ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧಿಸಿದ್ದೇವೆ. ಇದು ಉತ್ತಮ ಆಡಳಿತ ಹಾಗೂ ರಾಜಕೀಯ ಬೆಳವಣಿಗೆಗೆ ಪೂರಕವಾಗಿದೆ ಎಂದಿದ್ದಾರೆ
|
ಥ್ಯಾಂಕ್ ಯೂ ಬೆಂಗಳೂರು
ಥ್ಯಾಂಕ್ ಯೂ ಬೆಂಗಳೂರು. ಬಿಜೆಪಿ ಮೇಲೆ ಮತದಾರರು ಇನ್ನೂ ನಂಬಿಕೆ ಇಟ್ಟುಕೊಂಡಿದ್ದಾರೆ ಎಂಬುದಕ್ಕೆ ಇತ್ತೀಚಿನ ನಗರ ಪಾಲಿಕೆ ಫಲಿತಾಂಶಗಳೇ ಸಾಕ್ಷಿ
|
125 ಕೋಟಿ ಜನರ ಆಶೋತ್ತರ ಈಡೇರಿಸುತ್ತೇವೆ
125 ಕೋಟಿ ಜನರ ಆಶೋತ್ತರ ಈಡೇರಿಸುತ್ತೇವೆ. ಎನ್ ಡಿಎ ಸರ್ಕಾರ ಎಲ್ಲರ ಏಳಿಗೆಗೆ ಬದ್ಧವಾಗಿದೆ.
|
ಕಾರ್ಯಕರ್ತರಿಗೆ ಗೆಲುವು ಸಲ್ಲಬೇಕು ಎಂದ ಶಾ
ಇದು ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಜಯವಾಗಿದೆ. ಬೆಂಗಳೂರಿನ ಮತದಾರರಿಗೆ ನನ್ನ ಧನ್ಯವಾದಗಳು ಎಂದ ಬಿಜೆಪಿ ಅಧ್ಯಕ್ಷ ಅಮಿತ್ ಶಾ
|
ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ಮಾಡೋಣ ಬನ್ನಿ
ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ಮಾಡೋಣ ಬನ್ನಿ #BJPSweepsBLR ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿ ಎಂದು ಕರೆ ನೀಡಿದ ಬಿಜೆಪಿ ಕರ್ನಾಟಕ.
|
ತಮಿಳುನಾಡಿನ ದೇಗುಲದಲ್ಲಿ ಅಮಿತ್ ಶಾ
ತಮಿಳುನಾಡಿನ ಚಿದಂಬರಂನ ದೇಗುಲದಲ್ಲಿರುವ ಅಮಿತ್ ಶಾ ಅವರ ಚಿತ್ರಗಳು.
|
ಬಿಜೆಪಿ ಬೆಂಗಳೂರು ಘಟಕದಲ್ಲಿ ಸಂಭ್ರಮ
ಬಿಜೆಪಿ ಬೆಂಗಳೂರು ಘಟಕದಲ್ಲಿ ಸಂಭ್ರಮಾಚರಣೆ ಆರಂಭವಾಗಿದೆ
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications