'ವ್ಯಾಕ್ಸಿನೇಷನ್ ದಾಖಲೆಯ ಹಿಂದಿನ ರಹಸ್ಯ ಇದು': ಪಿ ಚಿದಂಬರಂ ಹೇಳಿದ್ದೇನು?
ನವದೆಹಲಿ, ಜೂ.23: ಭಾನುವಾರ ಸಂಗ್ರಹ, ಸೋಮವಾರ ದಾಖಲೆಯ ಲಸಿಕೆ ಹಾಗೂ ಮಂಗಳವಾರ ಧಿಡೀರ್ ಲಸಿಕೆ ನೀಡಿಕೆ ಪ್ರಮಾಣ ಕುಸಿತ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಕೇಂದ್ರ ಸರ್ಕಾರ ಕೊರೊನಾ ಲಸಿಕೆ ನೀತಿಯನ್ನು ಟೀಕಿಸಿದ್ದಾರೆ. ಕೇಂದ್ರದ ಈ ಸೋಮವಾರದ ಒಂದು ದಿನದ ಲಸಿಕೆ ದಾಖಲೆಯ ಹಿಂದಿನ ಮೂರು ಪ್ರಕಾರದ ಕಾರ್ಯಕ್ರಮವನ್ನು ಉಲ್ಲೇಖ ಮಾಡಿ ಪಿ.ಚಿದಂಬರಂ ಕೇಂದ್ರಕ್ಕೆ ಟಾಂಗ್ ನೀಡಿದ್ದಾರೆ.
ಸೋಮವಾರ ದಾಖಲೆಯ 88 ಲಕ್ಷ ಕೊರೊನಾ ಲಸಿಕೆ ನೀಡಲಾಗಿದೆ. ಆದರೆ ಮಂಗಳವಾರ ದೇಶಾದ್ಯಂತ ಲಸಿಕೆ ನೀಡಿಕೆ ಅಂಕಿಅಂಶವು ಧಿಡೀರ್ 54.22 ಲಕ್ಷಕ್ಕೆ ಇಳಿದಿದೆ. ಕೇಂದ್ರ ಸರ್ಕಾರ ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲರಿಗೂ ಲಸಿಕೆ ನೀಡುವ ಭರವಸೆ ನೀಡಿರುವಾಗ ಈ ಲಸಿಕೆ ನೀಡಿಕೆ ಪ್ರಮಾಣ ಇಳಿಕೆಯು ಗೊಂದಲಕ್ಕೆ ಕಾರಣವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ, ''ಭಾನುವಾರ ಸಂಗ್ರಹಿಸಿ, ಸೋಮವಾರ ಲಸಿಕೆ ಹಾಕಿ ಮತ್ತು ಮಂಗಳವಾರ ಲಸಿಕೆ ನೀಡಿಕೆಯಲ್ಲಿ ಇಳಿಕೆ ಕಾಣಿರಿ. ಇದು ಒಂದು ದಿನದ ಲಸಿಕೆ ನೀಡಿಕೆಯ ವಿಶ್ವ ದಾಖಲೆಯ ಹಿಂದಿನ ರಹಸ್ಯ,'' ಎಂದು ವ್ಯಂಗ್ಯವಾಡಿದ್ದಾರೆ.

ಹಾಗೆಯೇ ಈ "ಸಾಧನೆ" ಗಿನ್ನೆಸ್ ಬುಕ್ ಆಫ್ ರೆಕಾರ್ಡ್ನಲ್ಲಿ ಸ್ಥಾನವನ್ನು ಪಡೆಯುತ್ತದೆ ಎಂದು ನನಗೆ ಖಾತ್ರಿಯಿದೆ ಎಂದು ಲೇವಡಿ ಮಾಡಿದ್ದಾರೆ.
Hoard on Sunday, vaccinate on Monday, and go back to limping on Tuesday.
— P. Chidambaram (@PChidambaram_IN) June 22, 2021
That is the secret behind the world “record” of vaccinations on a “single day”
I am sure the “feat” will find a place in the Guinness book of records!
ಅಷ್ಟೇ ಅಲ್ಲದೇ ಬಿಜೆಪಿಯ 2019 ರ ಚುನಾವಣಾ ಘೋಷಣೆ "ಮೋದಿ ಹೈ, ಮುಮ್ಕಿನ್ ಹೈ" (ಮೋದಿ ಇದ್ದರೆ ಎಲ್ಲವೂ ಸಾಧ್ಯ) ಎಂಬುದನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿಯ ಕಾಲೆಳೆದಿದ್ದಾರೆ. "ಯಾರಿಗೆ ಗೊತ್ತು, ಮೋದಿ ಸರ್ಕಾರಕ್ಕೆ ಔಷಧಕ್ಕಾಗಿ ನೊಬೆಲ್ ಪ್ರಶಸ್ತಿ ನೀಡಬಹುದು.
'ಮೋದಿ ಹೈ, ಮಮ್ಕಿನ್ ಹೈ' (ಮೋದಿ ಇದ್ದರೆ ಎಲ್ಲವೂ ಸಾಧ್ಯ) ಈಗ 'ಮೋದಿ ಹೈ, ಮಿರಾಕಲ್ ಹೈ' (ಮೋದಿ ಇದ್ದರೆ ಪವಾಡ) ಎನ್ನಬೇಕು ಎಂದು ಅಣಕಿಸಿದ್ದಾರೆ.
ಸೋಮವಾರ ದಾಖಲೆಯ ಪ್ರಮಾಣದ ಕೊರೊನಾ ಲಸಿಕೆ ಹಾಕುವ ನಿಟ್ಟಿನಲ್ಲಿ ಮಧ್ಯಪ್ರದೇಶ ಸೇರಿದಂತೆ ಕೆಲವು ರಾಜ್ಯಗಳು ''ಲಸಿಕೆ ಪ್ರಮಾಣವನ್ನು ಹಲವು ದಿನಗಳವರೆಗೆ ಸಂಗ್ರಹಿಸಿರಿಸಿವೆ'' ಎಂಬ ಆರೋಪಗಳಿವೆ. ಇನ್ನು ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡಿರುವ ದಾಖಲೆ ಹೊಂದಿರುವ ಅಗ್ರ 10 ರಾಜ್ಯಗಳಲ್ಲಿ ಏಳು ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯವಾಗಿದೆ.
Who knows, there may be a Nobel Prize for Medicine awarded to the Modi government
— P. Chidambaram (@PChidambaram_IN) June 22, 2021
‘Modi Hai, Mumkin Hai’ must now read ‘Modi Hai, Miracle Hai’
ಈ ವರ್ಷದ ಅಂತ್ಯದ ವೇಳೆಗೆ ಎಲ್ಲಾ ವಯಸ್ಕರಿಗೆ ಸಂಪೂರ್ಣವಾಗಿ ಲಸಿಕೆ ನೀಡುವ ಕೇಂದ್ರದ ಗುರಿಯನ್ನು ಪೂರೈಸಲು, ದಿನಕ್ಕೆ 97 ಲಕ್ಷ ಲಸಿಕೆ ನೀಡಬೇಕಾಗಿತ್ತು. ಪ್ರಸ್ತುತ ಪೂರೈಕೆ ಪರಿಸ್ಥಿತಿಯು ಗುರಿಯನ್ನು ಪೂರೈಸುತ್ತದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.
ಸರ್ಕಾರ ದೈನಂದಿನ ಅಗತ್ಯವಿರುವ ಲಸಿಕೆಗಳನ್ನು ಸಂಗ್ರಹಿಸುವ ಮತ್ತು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿಕೊಂಡಿದೆ. ಆದರೆ ಕೊರೊನಾ ಲಸಿಕೆ ನೀಡಿಕೆ ಪ್ರಮಾಣದಲ್ಲಿ ಮತ್ತೆ ಏರಿಳಿತ ಕಂಡು ಬಂದಿದೆ. ಈ ನಡುವೆ ದೇಶದಲ್ಲಿ ಡೆಲ್ಟಾ ಕೊರೊನಾವೈರಸ್ ರೂಪಾಂತರಗಳ ಸಂಖ್ಯೆ ಏರಿಕೆಯಾಗುತ್ತಿದೆ.
(ಒನ್ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications