CDS : ಶೀಘ್ರದಲ್ಲೇ ಸಿಡಿಎಸ್ ಹುದ್ದೆ ನೇಮಕಕ್ಕೆ ಸಜ್ಜಾದ ಕೇಂದ್ರ ಸರ್ಕಾರ
ನವದೆಹಲಿ, ಏಪ್ರಿಲ್ 17: ದೇಶದ ಮೊಟ್ಟಮೊದಲ ಸಿಡಿಎಸ್ ಆಗಿದ್ದ ಜನರಲ್ ಬಿಪಿನ್ ರಾವತ್ ಅವರ ವೀರಮರಣದ ನಂತರ ಸಿಡಿಎಸ್ ಹುದ್ದೆ ಖಾಲಿಯೇ ಉಳಿದಿದ್ದು ಕೇಂದ್ರ ಸರ್ಕಾರವು ಯಾವ ಅಧಿಕಾರಿಯನ್ನು ನೇಮಕ ಮಾಡಬಹುದು ಎಂಬುದು ಕುತೂಹಲ ಮೂಡಿಸಿದೆ.
ಸಿಡಿಎಸ್ ಬಿಪಿನ್ ರಾವತ್ ರಕ್ಷಣಾ ಸೇನೆಯ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾಗಿದ್ದರು ಬಳಿಕ ಈ ಹುದ್ದೆಯನ್ನು ನೇಮಕ ಮಾಡಲು ಕೇಂದ್ರ ಸರಕಾರವು ಸಮಯಾವಕಾಶ ತೆಗೆದುಕೊಂಡಿತ್ತು. ಆದರೆ ಮತ್ತೆ ರಕ್ಷಣೆಯಲ್ಲಿ ಮಹತ್ವದ ಪಾತ್ರವಹಿಸಿರುವ ಸಿಡಿಎಸ್ ಹುದ್ದೆಯನ್ನು ತುಂಬಿಕೊಳ್ಳಲು ಕೇಂದ್ರವು ಈ ಹುದ್ದೆಗೆ ಸೇವೆ ಸಲ್ಲಿಸುತ್ತಿರುವ ನಿವೃತ್ತ ಮಿಲಿಟರಿ ಅಧಿಕಾರಿಗಳನ್ನು ಪರಿಗಣಿಸಬಹುದು ಅಥವಾ ನಿವೃತ್ತ ಸೇನಾ ಅಧಿಕಾರಿಗಳನ್ನು ಸರ್ಕಾರ ಪರಿಗಣಿಸಬಹುದು ಎನ್ನಲಾಗಿದೆ.
ಮುಂದಿನ ಸೇನಾ ಮುಖ್ಯಸ್ಥರನ್ನು ನೇಮಕ ಮಾಡಲು ಸರ್ಕಾರ ಈಗಾಗಲೇ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಮುಂಬರುವ ವಾರದದಲ್ಲಿಯೇ ನೂತನ ಸಿಡಿಎಸ್ ಮುಖ್ಯಸ್ಥರನ್ನು ಸರ್ಕಾರ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಎಎನ್ಐ ಮೂಲಗಳು ತಿಳಿಸಿವೆ.ಸಿಡಿಎಸ್ ಹುದ್ದೆಗೆ ನೇಮಕವಾಗುವ ಈ ಮಹತ್ವದ ಹುದ್ದೆಯನ್ನು ತುಂಬಲು ಮೂರು ಅಥವಾ ನಾಲ್ಕು ಸ್ಟಾರ್ ಹೊಂದಿರುವ ಉನ್ನತ ಶ್ರೇಣಿಯ ಅಧಿಕಾರಿಗಳನ್ನು ಸಹ ಸಮಿತಿಯಲ್ಲಿ ಸೇರಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಇನ್ನು 2019ರಲ್ಲಿ ಅಧಿಕಾರಿಕ್ಕೆ ಬಿಜೆಪಿ ನೇತೃತ್ವದ ಮೋದಿ ಸರ್ಕಾರವು ಅಧಿಕಾರಕ್ಕೆ ಬಂದ 6 ತಿಂಗಳಲ್ಲಿಯೇ ಸಿಡಿಎಸ್ ಸೇನಾ ಮುಖ್ಯಸ್ಥರನ್ನು ನೇಮಕ ಮಾಡಿಕೊಂಡಿತ್ತು. ದೇಶದ ಉನ್ನತ ಮಿಲಿಟರಿ ಮೂಲ ಸೌಕರ್ಯಗಳಲ್ಲಿ ಅನೇಕ ಸುಧಾರಣೆಗಳಲ್ಲಿ ಒಂದಾಗಿದೆ ಎಂದು ಪ್ರಶಂಸಿಸಲಾಗಿದೆ.

ಸಿಡಿಎಸ್ ಹುದ್ದೆಯನ್ನು ನಿಭಾಯಿಸಲು ತಕ್ಕ ಅಧಿಕಾರಿಗಳು ಮಾತ್ರ ನೇಮಕ ಮಾಡಲಾಗುತ್ತದೆ. ಏಕೆಂದರೆ ಇದು ದೇಶದ ಅತ್ಯಂತ ಬಲಿಷ್ಠ ಮಿಲಿಟರಿಯ ಕೇಂದ್ರ ವಿಭಾಗವೆಂದು ನಿರೀಕ್ಷಿಸಲಾಗಿದೆ. ದೇಶದ ಎಲ್ಲಾ ಯುದ್ಧದ ರಚನೆಗಳು ನೇರವಾಗಿ ವರದಿ ಮಾಡುತ್ತವೆ. ಪ್ರಸ್ತುತ ಹೆಚ್ಚುವರಿ ಕಾರ್ಯದರ್ಶಿ ಶ್ರೇಣಿಯ ಲೆಫ್ಟಿನೆಂಟ್ ಜನರಲ್ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮಿಲಿಟರಿ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿ ಸಿಡಿಎಸ್ ಅವರನ್ನು ನೇಮಕ ಮಾಡಲಾಗುತ್ತದೆ.
Recommended Video
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications