CDS : ಶೀಘ್ರದಲ್ಲೇ ಸಿಡಿಎಸ್ ಹುದ್ದೆ ನೇಮಕಕ್ಕೆ ಸಜ್ಜಾದ ಕೇಂದ್ರ ಸರ್ಕಾರ
ನವದೆಹಲಿ, ಏಪ್ರಿಲ್ 17: ದೇಶದ ಮೊಟ್ಟಮೊದಲ ಸಿಡಿಎಸ್ ಆಗಿದ್ದ ಜನರಲ್ ಬಿಪಿನ್ ರಾವತ್ ಅವರ ವೀರಮರಣದ ನಂತರ ಸಿಡಿಎಸ್ ಹುದ್ದೆ ಖಾಲಿಯೇ ಉಳಿದಿದ್ದು ಕೇಂದ್ರ ಸರ್ಕಾರವು ಯಾವ ಅಧಿಕಾರಿಯನ್ನು ನೇಮಕ ಮಾಡಬಹುದು ಎಂಬುದು ಕುತೂಹಲ ಮೂಡಿಸಿದೆ.
ಸಿಡಿಎಸ್ ಬಿಪಿನ್ ರಾವತ್ ರಕ್ಷಣಾ ಸೇನೆಯ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾಗಿದ್ದರು ಬಳಿಕ ಈ ಹುದ್ದೆಯನ್ನು ನೇಮಕ ಮಾಡಲು ಕೇಂದ್ರ ಸರಕಾರವು ಸಮಯಾವಕಾಶ ತೆಗೆದುಕೊಂಡಿತ್ತು. ಆದರೆ ಮತ್ತೆ ರಕ್ಷಣೆಯಲ್ಲಿ ಮಹತ್ವದ ಪಾತ್ರವಹಿಸಿರುವ ಸಿಡಿಎಸ್ ಹುದ್ದೆಯನ್ನು ತುಂಬಿಕೊಳ್ಳಲು ಕೇಂದ್ರವು ಈ ಹುದ್ದೆಗೆ ಸೇವೆ ಸಲ್ಲಿಸುತ್ತಿರುವ ನಿವೃತ್ತ ಮಿಲಿಟರಿ ಅಧಿಕಾರಿಗಳನ್ನು ಪರಿಗಣಿಸಬಹುದು ಅಥವಾ ನಿವೃತ್ತ ಸೇನಾ ಅಧಿಕಾರಿಗಳನ್ನು ಸರ್ಕಾರ ಪರಿಗಣಿಸಬಹುದು ಎನ್ನಲಾಗಿದೆ.
ಮುಂದಿನ ಸೇನಾ ಮುಖ್ಯಸ್ಥರನ್ನು ನೇಮಕ ಮಾಡಲು ಸರ್ಕಾರ ಈಗಾಗಲೇ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಮುಂಬರುವ ವಾರದದಲ್ಲಿಯೇ ನೂತನ ಸಿಡಿಎಸ್ ಮುಖ್ಯಸ್ಥರನ್ನು ಸರ್ಕಾರ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಎಎನ್ಐ ಮೂಲಗಳು ತಿಳಿಸಿವೆ.ಸಿಡಿಎಸ್ ಹುದ್ದೆಗೆ ನೇಮಕವಾಗುವ ಈ ಮಹತ್ವದ ಹುದ್ದೆಯನ್ನು ತುಂಬಲು ಮೂರು ಅಥವಾ ನಾಲ್ಕು ಸ್ಟಾರ್ ಹೊಂದಿರುವ ಉನ್ನತ ಶ್ರೇಣಿಯ ಅಧಿಕಾರಿಗಳನ್ನು ಸಹ ಸಮಿತಿಯಲ್ಲಿ ಸೇರಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಇನ್ನು 2019ರಲ್ಲಿ ಅಧಿಕಾರಿಕ್ಕೆ ಬಿಜೆಪಿ ನೇತೃತ್ವದ ಮೋದಿ ಸರ್ಕಾರವು ಅಧಿಕಾರಕ್ಕೆ ಬಂದ 6 ತಿಂಗಳಲ್ಲಿಯೇ ಸಿಡಿಎಸ್ ಸೇನಾ ಮುಖ್ಯಸ್ಥರನ್ನು ನೇಮಕ ಮಾಡಿಕೊಂಡಿತ್ತು. ದೇಶದ ಉನ್ನತ ಮಿಲಿಟರಿ ಮೂಲ ಸೌಕರ್ಯಗಳಲ್ಲಿ ಅನೇಕ ಸುಧಾರಣೆಗಳಲ್ಲಿ ಒಂದಾಗಿದೆ ಎಂದು ಪ್ರಶಂಸಿಸಲಾಗಿದೆ.

ಸಿಡಿಎಸ್ ಹುದ್ದೆಯನ್ನು ನಿಭಾಯಿಸಲು ತಕ್ಕ ಅಧಿಕಾರಿಗಳು ಮಾತ್ರ ನೇಮಕ ಮಾಡಲಾಗುತ್ತದೆ. ಏಕೆಂದರೆ ಇದು ದೇಶದ ಅತ್ಯಂತ ಬಲಿಷ್ಠ ಮಿಲಿಟರಿಯ ಕೇಂದ್ರ ವಿಭಾಗವೆಂದು ನಿರೀಕ್ಷಿಸಲಾಗಿದೆ. ದೇಶದ ಎಲ್ಲಾ ಯುದ್ಧದ ರಚನೆಗಳು ನೇರವಾಗಿ ವರದಿ ಮಾಡುತ್ತವೆ. ಪ್ರಸ್ತುತ ಹೆಚ್ಚುವರಿ ಕಾರ್ಯದರ್ಶಿ ಶ್ರೇಣಿಯ ಲೆಫ್ಟಿನೆಂಟ್ ಜನರಲ್ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮಿಲಿಟರಿ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿ ಸಿಡಿಎಸ್ ಅವರನ್ನು ನೇಮಕ ಮಾಡಲಾಗುತ್ತದೆ.
Recommended Video
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications