ತಿಹಾರ್ ಜೈಲಿನಲ್ಲಿ ಛೋಟಾ ರಾಜನ್ ದಿನಚರಿ, ಭದ್ರತೆ
ಬೆಂಗಳೂರು, ಡಿಸೆಂಬರ್ 29 : ಇಂಡೋನೇಷಿಯಾದ ಬಾಲಿ ದ್ವೀಪದಲ್ಲಿ ಬಂಧಿತನಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ನನ್ನು ಭಾರತಕ್ಕೆ ಕರೆತರಲಾಗಿದೆ. ಸದ್ಯ, ಆತ ಬಿಗಿಭದ್ರತೆಯ ತಿಹಾರ್ ಜೈಲಿನಲ್ಲಿದ್ದು, 10 ಶಸ್ತ್ರಧಾರಿ ಯೋಧರು ಆತನ ರಕ್ಷಣೆಗೆ ನಿಂತಿದ್ದಾರೆ.
ತಿಹಾರ್ ಜೈಲಿನಲ್ಲಿನಲ್ಲಿರುವ ರಾಜನ್ಗೆ ದಾವುದ್ ಇಬ್ರಾಹಿಂ ಬಲಗೈ ಬಂಟ ಛೋಟಾ ಶಕೀಲ್ನಿಂದ ಜೀವ ಬೆದರಿಕೆ ಇದೆ. ಛೋಟಾ ರಾಜನ್ ಭದ್ರತೆಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿರುವ ಅಧಿಕಾರಿಗಳು ದಿನಕ್ಕೆ ಎರಡು ಬಾರಿ ಸಭೆ ನಡೆಸಿ, ರಾಜನ್ ಭದ್ರತೆಯ ಬಗ್ಗೆ ಚರ್ಚೆ ನಡೆಸುತ್ತಾರೆ. [ಭಾರತಕ್ಕೆ ಬಂದ ಭೂಗತ ಪಾತಕಿ ಛೋಟಾ ರಾಜನ್]

ಭದ್ರತೆಯ ಕಾರಣದಿಂದಾಗಿಯೇ ರಾಜನ್ನನ್ನು ಮುಂಬೈಗೆ ಸ್ಥಳಾಂತರ ಮಾಡದೇ ತಿಹಾರ್ ಜೈಲಿನಲ್ಲಿ ಇಡಲಾಗಿದೆ. ರಾಜನ್ ಕೊಲ್ಲುವ ಬಗ್ಗೆ ಹಲವು ಬಾರಿ ಶಕೀಲ್ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿದ್ದಾನೆ. ಆದ್ದರಿಂದ, ರಾಜನ್ ಭದ್ರತೆಯ ಬಗ್ಗೆ ಹೆಚ್ಚಿನ ನಿಗಾ ಇಡಲಾಗಿದೆ. [ಮುಂಬೈ ಪೊಲೀಸರನ್ನು ನಂಬಲ್ಲ, ದೆಹಲಿಗೆ ಕಳಿಸಿ: ಛೋಟಾರಾಜನ್]
ಹೇಗಿದೆ ರಾಜನ್ ಭದ್ರತೆ? : ಭೂಗತ ಪಾತಕಿಗಳು ಜೈಲಿನಲ್ಲಿ ತಮ್ಮ ವೈರಿಗಳನ್ನು ಹತ್ಯೆ ಮಾಡಿಸುವುದು ಹೊಸ ವಿಷಯವಲ್ಲ. ಆದ್ದರಿಂದಲೇ ಜೈಲಿನಲ್ಲಿ ರಾಜನ್ಗೆ ಬಿಗಿ ಭದ್ರತೆ ಒದಗಿಸಲಾಗಿದೆ. 10 ಶಸ್ತ್ರಧಾರಿ ಯೋಧರು ರಾಜನ್ ಭದ್ರತೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. [ಸಂದರ್ಶನ : ಛೋಟಾ ರಾಜನ್ ಬಂಧನ ಕೇವಲ ಆಕಸ್ಮಿಕ]
ತಿಹಾರ್ ಜೈಲಿನಲ್ಲಿ ರಾಜನ್ಗೆ ನೀಡುವ ಆಹಾರವನ್ನು ಮೊದಲು ಪರಿಶೀಲಿಸಿ ನಂತರ ನೀಡಲಾಗುತ್ತಿದೆ. ಅನಾರೋಗ್ಯದಿಂದ ಬಳಲುತ್ತಿರುವ ರಾಜನ್ಗೆ ಜೈಲಿನಲ್ಲಿ ಹಲವು ವ್ಯಾಯಾಯಗಳನ್ನು ಮಾಡುವಂತೆಯೂ ಸಲಹೆ ನೀಡಲಾಗಿದೆ. ರಾಜನ್ ಪ್ರತಿದಿನ ಬೆಳಗ್ಗೆ ವಾಕಿಂಗ್ ಮತ್ತು ಯೋಗ ಮಾಡುವಾಗ ಭದ್ರತೆ ನೀಡಲಾಗುತ್ತಿದೆ.
ರಾಜನ್ ಭೇಟಿ ಮಾಡಲು ಬರುವವರನ್ನು ತಪಾಸಣೆ ಮಾಡಲಾಗುತ್ತಿದೆ. ರಾಜನ್ ಜೊತೆ ಮಾತನಾಡುವಾಗ ನಿಗದಿತ ಅಂತರ ಕಾಯ್ದುಕೊಳ್ಳುವಂತೆ ಅವರಿಗೆ ಸೂಚನೆ ನೀಡಲಾಗುತ್ತದೆ. ರಾಜನ್ ಜೊತೆ ಸಂದರ್ಶಕರು ಮಾತನಾಡುವಾಗ ಒಬ್ಬರು ಭದ್ರತಾ ಸಿಬ್ಬಂದಿ ಅಲ್ಲಿರುತ್ತಾರೆ.
ಬಾಲಿ ದ್ವೀಪದಲ್ಲಿ 2015ರ ಅಕ್ಟೋಬರ್ 26ರಂದು ರಾಜೇಂದ್ರ ಸದಾಶಿವ್ ನಿಕ್ಲಾಜೆ ಅಲಿಯಾಸ್ ಛೋಟಾ ರಾಜನ್ನನ್ನು ಇಂಡೋನೇಷಿಯಾದ ಪೊಲೀಸರು ಬಂಧಿಸಿದ್ದರು. ಬಾಲಿ ದ್ವೀಪಕ್ಕೆ ತೆರಳಿದ್ದ ಸಿಬಿಐ ಅಧಿಕಾರಿಗಳು ಮತ್ತು ಮುಂಬೈ ಪೊಲೀಸರ ತಂಡ ನವೆಂಬರ್ 6ರಂದು ರಾಜನ್ನನ್ನು ದೆಹಲಿಗೆ ಕರೆತಂದಿತ್ತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications