ತಿಹಾರ್ ಜೈಲಿನಲ್ಲಿ ಛೋಟಾ ರಾಜನ್ ದಿನಚರಿ, ಭದ್ರತೆ
ಬೆಂಗಳೂರು, ಡಿಸೆಂಬರ್ 29 : ಇಂಡೋನೇಷಿಯಾದ ಬಾಲಿ ದ್ವೀಪದಲ್ಲಿ ಬಂಧಿತನಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ನನ್ನು ಭಾರತಕ್ಕೆ ಕರೆತರಲಾಗಿದೆ. ಸದ್ಯ, ಆತ ಬಿಗಿಭದ್ರತೆಯ ತಿಹಾರ್ ಜೈಲಿನಲ್ಲಿದ್ದು, 10 ಶಸ್ತ್ರಧಾರಿ ಯೋಧರು ಆತನ ರಕ್ಷಣೆಗೆ ನಿಂತಿದ್ದಾರೆ.
ತಿಹಾರ್ ಜೈಲಿನಲ್ಲಿನಲ್ಲಿರುವ ರಾಜನ್ಗೆ ದಾವುದ್ ಇಬ್ರಾಹಿಂ ಬಲಗೈ ಬಂಟ ಛೋಟಾ ಶಕೀಲ್ನಿಂದ ಜೀವ ಬೆದರಿಕೆ ಇದೆ. ಛೋಟಾ ರಾಜನ್ ಭದ್ರತೆಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿರುವ ಅಧಿಕಾರಿಗಳು ದಿನಕ್ಕೆ ಎರಡು ಬಾರಿ ಸಭೆ ನಡೆಸಿ, ರಾಜನ್ ಭದ್ರತೆಯ ಬಗ್ಗೆ ಚರ್ಚೆ ನಡೆಸುತ್ತಾರೆ. [ಭಾರತಕ್ಕೆ ಬಂದ ಭೂಗತ ಪಾತಕಿ ಛೋಟಾ ರಾಜನ್]

ಭದ್ರತೆಯ ಕಾರಣದಿಂದಾಗಿಯೇ ರಾಜನ್ನನ್ನು ಮುಂಬೈಗೆ ಸ್ಥಳಾಂತರ ಮಾಡದೇ ತಿಹಾರ್ ಜೈಲಿನಲ್ಲಿ ಇಡಲಾಗಿದೆ. ರಾಜನ್ ಕೊಲ್ಲುವ ಬಗ್ಗೆ ಹಲವು ಬಾರಿ ಶಕೀಲ್ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿದ್ದಾನೆ. ಆದ್ದರಿಂದ, ರಾಜನ್ ಭದ್ರತೆಯ ಬಗ್ಗೆ ಹೆಚ್ಚಿನ ನಿಗಾ ಇಡಲಾಗಿದೆ. [ಮುಂಬೈ ಪೊಲೀಸರನ್ನು ನಂಬಲ್ಲ, ದೆಹಲಿಗೆ ಕಳಿಸಿ: ಛೋಟಾರಾಜನ್]
ಹೇಗಿದೆ ರಾಜನ್ ಭದ್ರತೆ? : ಭೂಗತ ಪಾತಕಿಗಳು ಜೈಲಿನಲ್ಲಿ ತಮ್ಮ ವೈರಿಗಳನ್ನು ಹತ್ಯೆ ಮಾಡಿಸುವುದು ಹೊಸ ವಿಷಯವಲ್ಲ. ಆದ್ದರಿಂದಲೇ ಜೈಲಿನಲ್ಲಿ ರಾಜನ್ಗೆ ಬಿಗಿ ಭದ್ರತೆ ಒದಗಿಸಲಾಗಿದೆ. 10 ಶಸ್ತ್ರಧಾರಿ ಯೋಧರು ರಾಜನ್ ಭದ್ರತೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. [ಸಂದರ್ಶನ : ಛೋಟಾ ರಾಜನ್ ಬಂಧನ ಕೇವಲ ಆಕಸ್ಮಿಕ]
ತಿಹಾರ್ ಜೈಲಿನಲ್ಲಿ ರಾಜನ್ಗೆ ನೀಡುವ ಆಹಾರವನ್ನು ಮೊದಲು ಪರಿಶೀಲಿಸಿ ನಂತರ ನೀಡಲಾಗುತ್ತಿದೆ. ಅನಾರೋಗ್ಯದಿಂದ ಬಳಲುತ್ತಿರುವ ರಾಜನ್ಗೆ ಜೈಲಿನಲ್ಲಿ ಹಲವು ವ್ಯಾಯಾಯಗಳನ್ನು ಮಾಡುವಂತೆಯೂ ಸಲಹೆ ನೀಡಲಾಗಿದೆ. ರಾಜನ್ ಪ್ರತಿದಿನ ಬೆಳಗ್ಗೆ ವಾಕಿಂಗ್ ಮತ್ತು ಯೋಗ ಮಾಡುವಾಗ ಭದ್ರತೆ ನೀಡಲಾಗುತ್ತಿದೆ.
ರಾಜನ್ ಭೇಟಿ ಮಾಡಲು ಬರುವವರನ್ನು ತಪಾಸಣೆ ಮಾಡಲಾಗುತ್ತಿದೆ. ರಾಜನ್ ಜೊತೆ ಮಾತನಾಡುವಾಗ ನಿಗದಿತ ಅಂತರ ಕಾಯ್ದುಕೊಳ್ಳುವಂತೆ ಅವರಿಗೆ ಸೂಚನೆ ನೀಡಲಾಗುತ್ತದೆ. ರಾಜನ್ ಜೊತೆ ಸಂದರ್ಶಕರು ಮಾತನಾಡುವಾಗ ಒಬ್ಬರು ಭದ್ರತಾ ಸಿಬ್ಬಂದಿ ಅಲ್ಲಿರುತ್ತಾರೆ.
ಬಾಲಿ ದ್ವೀಪದಲ್ಲಿ 2015ರ ಅಕ್ಟೋಬರ್ 26ರಂದು ರಾಜೇಂದ್ರ ಸದಾಶಿವ್ ನಿಕ್ಲಾಜೆ ಅಲಿಯಾಸ್ ಛೋಟಾ ರಾಜನ್ನನ್ನು ಇಂಡೋನೇಷಿಯಾದ ಪೊಲೀಸರು ಬಂಧಿಸಿದ್ದರು. ಬಾಲಿ ದ್ವೀಪಕ್ಕೆ ತೆರಳಿದ್ದ ಸಿಬಿಐ ಅಧಿಕಾರಿಗಳು ಮತ್ತು ಮುಂಬೈ ಪೊಲೀಸರ ತಂಡ ನವೆಂಬರ್ 6ರಂದು ರಾಜನ್ನನ್ನು ದೆಹಲಿಗೆ ಕರೆತಂದಿತ್ತು.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications