ಹಜ್ ಯಾತ್ರೆ ವಿಚಾರದಲ್ಲಿ ದೆಹಲಿ ಹೈಕೋರ್ಟ್ ಮಹತ್ವದ ಆದೇಶ!
ನವದೆಹಲಿ: ಹಜ್ ಯಾತ್ರೆಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹಜ್ ಯಾತ್ರೆ ಸಂಘಟಕರ ನೋಂದಣಿ ಪ್ರಮಾಣ ಪತ್ರದ ಕುರಿತಾಗಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಮಹತ್ವದ ಆದೇಶ ಹೊರಬಿದ್ದಿದೆ. ಈ ಮೂಲಕ ಹಜ್ ಯಾತ್ರಿಕರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಹೌದು, ದೆಹಲಿ ಹೈಕೋರ್ಟ್ ಹಜ್ ಯಾತ್ರೆ ಸಂಘಟಕರ ನೋಂದಣಿ ಪ್ರಮಾಣಪತ್ರ ಹಾಗೂ ಹಜ್ ಕೋಟಾಗಳನ್ನು ಮರುಸ್ಥಾಪಿಸಿದೆ. ಹಜ್ ಯಾತ್ರೆ ಸಂಘಟಕರ ಪ್ರಮಾಣಪತ್ರಗಳು ಮತ್ತು ಕೋಟಾ ವಜಾಗೊಳಿಸಿದರೆ, ಅವರೊಂದಿಗೆ ನೋಂದಣಿ ಮಾಡಿಸಿಕೊಂಡ ಯಾತ್ರಾರ್ಥಿಗಳಿಗೆ ಸಂವಿಧಾನದ ಅಡಿಯಲ್ಲಿ ರಕ್ಷಿತವಾಗಿರುವ ತಮ್ಮ ಧಾರ್ಮಿಕ ಕರ್ತವ್ಯಗಳನ್ನು ನೆರವೇರಿಸಲು ಸಾಧ್ಯವಾಗದು ಎಂದು ಜಸ್ಟಿಸ್ ಚಂಧ್ರ ಧಾರಿ ಸಿಂಗ್ ಅವರು ತಿಳಿಸಿದ್ದಾರೆ. ಅಲ್ಲದೆ ಮತ್ತಷ್ಟು ಪ್ರಮುಖ ವಿಚಾರಗಳನ್ನು ಕೂಡ ಇದೇ ವೇಳೆ ನ್ಯಾಯಾಲಯವು ತಿಳಿಸಿತು.

ಸಂವಿಧಾನದ ವಿಧಿ 25ರ ಉಲ್ಲಂಘನೆ!
ಅಂದಹಾಗೆ ಈ ಅರ್ಜಿಯ ಬಗ್ಗೆ ಆದೇಶ ನೀಡುವಾಗ ನ್ಯಾಯಾಲಯ ಮತ್ತೊಂದು ವಿಚಾರ ಕೂಡ ತಿಳಿಸಿತು. ಹಜ್ ಯಾತ್ರೆ ಸಂಘಟಕರ ಪ್ರಮಾಣಪತ್ರ ಮತ್ತು ಕೋಟಾ ವಜಾಗೊಳಿಸಿದರೆ ಏನಾಗುತ್ತದೆ ಎಂಬುದನ್ನೂ ತಿಳಿಸಲಾಗಿದೆ. 'ಇಂತಹ ಒಂದು ಕ್ರಮ ಹಜ್ ನೀತಿಯ ಉದ್ದೇಶ ಸೋಲಿಸುತ್ತದೆ ಹಾಗೂ ಇದು ಸಂವಿಧಾನದ 25ನೇ ವಿಧಿಯ ಉಲ್ಲಂಘನೆ ಆಗುತ್ತದೆ' ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ. ಈ ಮೂಲಕ ಹಜ್ ಯಾತ್ರಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹಾಗಾದರೆ ಸಂವಿಧಾನದ 25ನೇ ವಿಧಿ ಹೇಳುವುದಾದರೂ ಏನು? ಆ ಬಗ್ಗೆ ಮಾಹಿತಿ ಇಲ್ಲಿ ತಿಳಿಯೋಣ.
25ನೇ ವಿಧಿ ಹೇಳುವುದೇನು?
ಇನ್ನು ಸಂವಿಧಾನದ 25ನೇ ವಿಧಿಯು ಪ್ರತಿಯೊಬ್ಬ ಭಾರತದ ಪ್ರಜೆಗೂ ತನ್ನ ಧರ್ಮವನ್ನು ಆಚರಿಸಲು, ಪಾಲಿಸಲು ಹಾಗೂ ಅದರ ಪ್ರಚಾರದ ಹಕ್ಕನ್ನು ಖಾತ್ರಿಪಡಿಸುತ್ತದೆ. ಹೀಗಾಗಿ ಈ ವಿಧಿಯನ್ನು ನ್ಯಾಯಾಲಯ ಪ್ರಸ್ತಾಪ ಮಾಡಿದೆ. ತಮ್ಮ ನೋಂದಣಿ ಪ್ರಮಾಣಪತ್ರ ಹಾಗೂ ಹಜ್ ಕೋಟಾ ವಜಾಗೊಳಿಸಿ ಕೇಂದ್ರ ಸರ್ಕಾರ ಮೇ 25ರಂದು ಹೊರಡಿಸಿದ ಆದೇಶ ಪ್ರಶ್ನಿಸಿ ಹಜ್ ಯಾತ್ರೆ ಸಂಘಟಕರು ಅರ್ಜಿ ಸಲ್ಲಿಸಿದ್ದರು. ಇನ್ನು ಹಜ್ ಯಾತ್ರೆ ಸಂಘಟಕರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ದಿಲ್ಲಿ ಹೈಕೋರ್ಟ್ ನಡೆಸಿದ್ದು, ಈ ಮಹತ್ವದ ಆದೇಶ ಹೊರಡಿಸಿದೆ.

ಹಾಗೇ ಮತ್ತೊಂದ್ಕಡೆ ಹಜ್ ಯಾತ್ರೆ ಸಂಘಟಕರ ಪ್ರಮಾಣಪತ್ರಗಳನ್ನು ನ್ಯಾಯಾಲಯ ಈಗ ಮರುಸ್ಥಾಪಿಸಿದೆ, ಆದರೂ ಇಂತಹ ಸಂಸ್ಥೆಗಳ ವಿರುದ್ಧ ತನಿಖೆ ಮುಂದುವರಿಸಲು ಸರ್ಕಾರಕ್ಕೆ ಅನುಮತಿ ನೀಡಿದೆ ಕೋರ್ಟ್. ಅಲ್ಲದೆ ಅರ್ಜಿದಾರರ ತಪ್ಪುಗಳಿಂದಾಗಿ ಯಾತ್ರಾರ್ಥಿಗಳು ಬಾಧಿತರಾಗದಂತೆ ಹಾಗೂ ಯಾವುದೇ ಅಡೆತಡೆಯಿಲ್ಲದೆ ಅವರು ಯಾತ್ರೆ ಕೈಗೊಳ್ಳುವ ಕುರಿತು ಕೇಂದ್ರ ಸರ್ಕಾರ ಖಾತ್ರಿಪಡಿಸಬೇಕು ಎಂದು ಕೂಡ ನ್ಯಾಯಾಲಯ ಸೂಚಿಸಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications