Haryana: ನಾಳೆ ಮತ ಎಣಿಕೆ, ಇತ್ತ ಸಿಎಂ ಕುರ್ಚಿಗೆ ಕರ್ಚೀಫ್ ಹಾಕಿದ ಕಾಂಗ್ರೆಸ್ ನಾಯಕರು
ಹರಿಯಾಣ ವಿಧಾನಸಭಾ ಚುನಾವಣೆ ಮುಗಿದಿದ್ದು, ನಾಳೆ ಮತ ಎಣಿಕೆ ನಡೆಯಲಿದೆ. ಈಗಾಗಲೇ ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್ಗೆ ಹರಿಯಾಣದಲ್ಲಿ ಬಹುಮತ ನೀಡಿವೆ. ಮತ್ತೊಂದೆಡೆ ಬಿಜೆಪಿ ಕೂಡ ಇದಕ್ಕೆ ಕ್ಯಾರೇ ಎನ್ನದೆ ತಮ್ಮ ಹ್ಯಾಟ್ರಿಕ್ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ. ಇತ್ತ ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟವೂ ಜೋರಾಗಿದೆ ಎನ್ನಲಾಗಿದೆ.
ನಿನ್ನೆ ಬಿಡುಗಡೆಯಾದ ಬಹುತೇಕ ಎಕ್ಸಿಟ್ ಪೋಲ್ ವರದಿಗಳು ಈ ಬಾರಿ ಹರಿಯಾಣದಲ್ಲಿ ಕಾಂಗ್ರೆಸ್ ಗದ್ದುಗೆ ಏರುವುದು ಖಚಿತ ಎಂದು ಹೇಳಿವೆ. ಇದೇ ವಿಶ್ವಾಸದಲ್ಲಿರುವ ಕಾಂಗ್ರೆಸ್ನಲ್ಲಿ ಆಗಲೇ ಸಿಎಂ ಕುರ್ಚಿಯ ಜಗಳ ಶುರುವಾಗಿದೆಯಂತೆ. ಕರ್ನಾಟಕದಂತೆ ಅಲ್ಲಿಯೂ ನಾನೇ ಮುಂದಿನ ಸಿಎಂ ಎನ್ನುವವರ ಸಂಖ್ಯೆ ಹೆಚ್ಚಾಗಿದೆ. ಶನಿವಾರ ಸಂಜೆ ಬಿಡುಗಡೆಯಾದ ಎಕ್ಸಿಟ್ ಪೋಲ್ನಲ್ಲಿ ಕಾಂಗ್ರೆಸ್ಗೆ ಅವಿರೋಧವಾಗಿ ಗೆಲುವು ಸಾಧಿಸುವ ಮುನ್ಸೂಚನೆ ನೀಡಿದೆ.

ಕಾಂಗ್ರೆಸ್ ಬರೋಬ್ಬರಿ 50ರಿಂದ 55 ಸ್ಥಾನಗಳು ಬರುವುದು ಖಚಿತ ಎಂದು ಹೇಳಿದೆ. ಹ್ಯಾಟ್ರಿಕ್ ಹೊಡೆಯಲು ಮುಂದಾಗಿರುವ ಬಿಜೆಪಿಗೆ 20ರಿಂದ 25 ಸ್ಥಾನಗಳು ಬರಬಹುದು ಎಂದು ಹೇಳಲಾಗಿದೆ. 90 ಸ್ಥಾನಗಳನ್ನು ಹೊಂದಿರುವ ಹರಿಯಾಣ ವಿಧಾನಸಭೆಗೆ ಸದ್ಯ 46 ಮ್ಯಾಜಿಕ್ ನಂಬರ್ ಆಗಲಿದೆ.
ಒಂದು ವೇಳೆ ಎಕ್ಸಿಟ್ ಪೋಲ್ ಭವಿಷ್ಯವಾಣಿ ನಿಜವಾದರೆ, ಇದು ಬಿಜೆಪಿಗೆ ಕಾಂಗ್ರೆಸ್ ದೊಡ್ಡ ಹೊಡೆತ ನೀಡಲಿದ್ದು, ಕಾಂಗ್ರೆಸ್ಗೆ ಅಡಿಪಾಯ ಹಾಕುವಲ್ಲಿ ಹರಿಯಾಣ ಮಹತ್ವದ ಪಾತ್ರ ವಹಿಸಲಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಮಟ್ಟಕ್ಕಿಂತ ಉತ್ತಮ ಫಲಿತಾಂಶ ಪಡೆದಿರುವ ಕಾಂಗ್ರೆಸ್ ಬಿಜೆಪಿ ಜೊತೆ ಫೈಟ್ ಮಾಡಲು ಇದು ಸಕಾಲ ಎನ್ನಲಾಗಿದೆ. ಪ್ರಮುಖ ಹಿಂದಿ ರಾಜ್ಯಗಳಲ್ಲಿ ಒಂದಾದ ಹರಿಯಾಣ ಕಾಂಗ್ರೆಸ್ ತೆಕ್ಕೆಗೆ ಬರಲಿದ್ದು, ಬಿಜೆಪಿಗೆ ಇದೊಂದು ದೊಡ್ಡ ಹಿನ್ನಡೆ ಎನ್ನಲಾಗುತ್ತಿದೆ.
ಒಂದೆಡೆ ಕಾಂಗ್ರೆಸ್ಗೆ ಗೆಲುವು ಸಿಗುವುದು ಬಹುತೇಕ ಖಚಿತ ಎನ್ನಲಾದರೂ ಮತ್ತೊಂದೆಡೆ ಸರ್ಕಾರ ರಚನೆಯ ವಿಚಾರದಲ್ಲಿ ಇಕ್ಕಟ್ಟಿಗೆ ಸಿಲುಕುವ ಸಾಧ್ಯತೆ ಇದೆ ಎಂದು ಅಲ್ಲಿನ ರಾಜಕೀಯ ವಲಯದಲ್ಲಿ ವಿಚಾರ ದೊಡ್ಡದಾಗಿ ಎದ್ದಿದೆ. ಕಾಂಗ್ರೆಸ್ನಲ್ಲಿ ಈಗಾಗಲೇ ಹಲವು ಬಣಗಳು ಹುಟ್ಟಿಕೊಂಡಿದ್ದು, ಪರಸ್ಪರವಾಗಿ ಒಳಜಗಳಗಳಿಗೂ ಕಾರಣವಾಗಿದೆ. ಒಂದು ವೇಳೆ ಬಹುಮತ ಬಂದರೂ ಸಿಎಂ ಯಾರಾಗಬಹುದು ಎಂಬುದರ ಬಗ್ಗೆ ಸ್ಪಷ್ಟ ನಿರ್ಣಯ ಇನ್ನೂ ಇಲ್ಲ.

ಈ ಹಿಂದೆ 2005ರಿಂದ 2014ರವರೆಗೆ ಹರಿಯಾಣ ಸಿಎಂ ಆಗಿ ಮುನ್ನಡೆಸಿದ ಭೂಪಿಂದರ್ ಸಿಂಗ್ ಹೂಡಾ, ಹರಿಯಾಣ ಕಾಂಗ್ರೆಸ್ ಅಧ್ಯಕ್ಷೆಯಾಗಿಯೂ ಸೇವೆ ಸಲ್ಲಿಸಿರುವ ಲೋಕಸಭೆ ಸಂಸದೆ ಮತ್ತು ದಲಿತ ನಾಯಕಿ ಕುಮಾರಿ ಸೆಲ್ಜಾ, ರಾಷ್ಟ್ರೀಯ ವಕ್ತಾರ ಮತ್ತು ಹರಿಯಾಣ ಕಾಂಗ್ರೆಸ್ನ ಪ್ರಮುಖ ನಾಯಕ ರಣದೀಪ್ ಸುರ್ಜೇವಾಲಾ ಕೂಡ ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿ ಎನ್ನಲಾಗಿದೆ.
ಈಗಾಗಲೇ ಹೂಡಾ ಅವರು ದೆಹಲಿಗೆ ತೆರಳಿದ್ದು, ಚುನಾವಣಾ ಫಲಿತಾಂಶ ಪ್ರಕಟವಾಗುವವರೆಗೂ ಅಲ್ಲಿಯೇ ಇರಲಿದ್ದಾರೆ ಎನ್ನಲಾಗಿದೆ. ಈ ಹಿಂದೆಯೂ ಸಿಎಂ ಸ್ಥಾನದ ಬಗ್ಗೆ ಮಾತನಾಡಿದ್ದ ಹೂಡಾ, ನಾನಿನ್ನೂ ನಿವೃತ್ತನಾಗಿಲ್ಲ ಎಂದು ಸುಳಿವು ನೀಡಿದ್ದರು. ಆದರೂ ಮುಖ್ಯಮಂತ್ರಿ ಯಾರಾಗಬೇಕೆಂದು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ. ಈ ಎಲ್ಲ ಗೊಂದಲಗಳಿಗೂ ನಾಳೆ ತೆರೆ ಬೀಳಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications