Ratan Tata: ಸರ್ಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಸಂಸ್ಕಾರ
ಮುಂಬೈ, ಅಕ್ಟೋಬರ್ 10: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರು (86) ಬುಧವಾರ ಮಧ್ಯರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸರ್ಕಾರಿ ಗೌರವಗಳೊಂದಿಗೆ ಉದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್ ಪೋಸ್ಟ್ನಲ್ಲಿ ಸಂತಾಪ ಸೂಚಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ನೈತಿಕತೆ ಮತ್ತು ಉದ್ಯಮಶೀಲತೆಯ ವಿಶಿಷ್ಟ ಮಿಶ್ರಣ ರತನ್ ಟಾಟಾ. 150 ವರ್ಷಗಳಷ್ಟು ಹಳೆಯ ಟಾಟಾ ಸಮೂಹವನ್ನು ಯಶಸ್ವಿಯಾಗಿ ಮುನ್ನಡಿಸಿದ ಜೀವಂತ ದಂತಕಥೆಯಾಗಿದ್ದರು. ರತನ್ ಟಾಟಾ ಜಿ ಅವರ ಪಾರ್ಥಿವ ಶರೀರಕ್ಕೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆಯನ್ನು ನೀಡಲಾಗುವುದು ಎಂದು ಸಿಎಂ ಶಿಂಧೆ ತಿಳಿಸಿದ್ದಾರೆ.
ಹೀಗೆ ಟಾಟಾ ಗ್ರೂಪ್ ವಿವಿಧ ಕೈಗಾರಿಕಾ ಎತ್ತರಗಳನ್ನು ತಲುಪಿತು. ಅವರಿಗೆ ನನ್ನ ಹೃತ್ಪೂರ್ವಕ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ರತನ್ ಟಾಟಾ ಅವರು ಭಾರತದ ಹೆಮ್ಮೆಯಾಗಿದ್ದರು, ಮುಂದಿನ ಪೀಳಿಗೆಯ ಉದ್ಯಮಿಗಳಿಗೆ ಅವರು ಯಾವಾಗಲೂ ಮಾದರಿಯಾಗಿರುತ್ತಾರೆ. ರತನ್ ಟಾಟಾ ಅವರು ಅನೇಕ ಅಂತರರಾಷ್ಟ್ರೀಯ ಕಂಪನಿಗಳನ್ನು ಬಹಳ ಸಮರ್ಥವಾಗಿ ಸ್ವಾಧೀನಪಡಿಸಿಕೊಂಡರು ಮತ್ತು ದೇಶ ಮತ್ತು ವಿದೇಶಗಳಲ್ಲಿ ವ್ಯವಹಾರವನ್ನು ವಿಸ್ತರಿಸಿದರು. ಅವರು ಮಾಹಿತಿ ತಂತ್ರಜ್ಞಾನದ ಹೊಸ ಕ್ಷೇತ್ರದಲ್ಲೂ ಬಲವಾಗಿ ಮುನ್ನಡೆದರು. ಉದ್ಯಮವನ್ನು ಕಾಪಾಡಿಕೊಳ್ಳುವುದರೊಂದಿಗೆ, ಟಾಟಾ ಕುಟುಂಬವು ದೇಶ ಮತ್ತು ಸಮಾಜದ ಅಭಿವೃದ್ಧಿಯ ಕಡೆಗೆ ಸಿದ್ಧಾಂತ ಮತ್ತು ಸಂಪ್ರದಾಯವನ್ನು ಉಳಿಸಿಕೊಂಡಿದೆ.
खो गया देश का अनमोल रत्न
— Eknath Shinde - एकनाथ शिंदे (@mieknathshinde) October 9, 2024
रतनजी टाटा नैतिकता और उद्यमशीलता के अपूर्व और आदर्श संगम थे.लगभग 150 वर्षों की उत्कृष्टता और अखंडता की परंपरा वाले टाटा ग्रुप की कमान सफलतापूर्वक संभालने वाले रतनजी टाटा एक जीवित किवदंती थे.उन्होंने समय-समय पर जिस निर्णय क्षमता और मानसिक दृढ़ता का परिचय… https://t.co/u6MdkdheCC
1991 ರಲ್ಲಿ, ರತನ್ಜಿ ಟಾಟಾ ಟಾಟಾ ಗ್ರೂಪ್ನ ಅಧ್ಯಕ್ಷರಾದರು. ಅವರ ಅಧಿಕಾರಾವಧಿಯಲ್ಲಿ, ಟಾಟಾ ಸಮೂಹವು ಬೃಹತ್ ಪ್ರಮಾಣದಲ್ಲಿ ವಿಸ್ತರಿಸಿತು. ಅವರು ನಂತರ ಟಾಟಾ ಮೋಟಾರ್ಸ್ ಕಾರು ಉತ್ಪಾದನಾ ವಲಯದಲ್ಲಿ ಪ್ರಮುಖ ಕಂಪನಿಯನ್ನಾಗಿ ಮಾಡಿದರು ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಅನ್ನು ಮಾಡಿದರು. ಇದರೊಂದಿಗೆ ಟಾಟಾ ಕೆಮಿಕಲ್ಸ್, ಟಾಟಾ ಟೀ, ಟಾಟಾ ಸ್ಟೀಲ್ ಮುಂತಾದ ಹಲವು ಕಂಪನಿಗಳನ್ನು ಯಶಸ್ಸಿಗೊಳಿಸಿದರು. 2012 ರಲ್ಲಿ, ಅವರು ಟಾಟಾ ಗ್ರೂಪ್ನ ಅಧ್ಯಕ್ಷರಾಗಿ ನಿವೃತ್ತರಾದರು, ಆದರೆ ನಂತರವೂ ಅವರು ವಿವಿಧ ಉದ್ಯಮಗಳಿಗೆ ಮಾರ್ಗದರ್ಶನ ನೀಡುತ್ತಿದ್ದರು.
2008ರ ಮುಂಬೈ ದಾಳಿಯ ನಂತರ ಅವರು ತೋರಿದ ದೃಢತೆ ಎಲ್ಲರಿಗೂ ಸದಾ ನೆನಪಿನಲ್ಲಿ ಉಳಿಯುತ್ತದೆ. ಅವರ ದೃಢ ನಿರ್ಧಾರಗಳು, ಧೈರ್ಯದ ಮನೋಭಾವ ಮತ್ತು ಸಾಮಾಜಿಕ ಬದ್ಧತೆ ಸದಾ ನೆನಪಿನಲ್ಲಿ ಉಳಿಯುತ್ತದೆ. ರತನ್ ಅವರು ದೇಶದ ಹೆಮ್ಮೆ. ಮುಂದಿನ ಪೀಳಿಗೆಯ ಉದ್ಯಮಿಗಳಿಗೆ ಸದಾ ಸ್ಪೂರ್ತಿಯಾಗಿದ್ದಾರೆ ಎಂದು ಶಿಂಧೆ ಹೇಳಿದ್ದಾರೆ.
ರತನ್ ಟಾಟಾ ಅವರ ಪಾರ್ಥೀವ ಶರೀರವನ್ನು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4ಯ ವರೆಗೆ ದಕ್ಷಿಣ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications