ಸುಕ್ರಿ ಬೊಮ್ಮಗೌಡ ಸೇರಿದಂತೆ 89 ಸಾಧಕರಿಗೆ ಪದ್ಮ ಪ್ರಶಸ್ತಿ
ಕರ್ನಾಟಕದ ಹಾಲಕ್ಕಿ ಒಕ್ಕಲಿಗ ಜನಾಂಗದ 'ಜಾನಪದ ಕೋಗಿಲೆ ' ಸುಕ್ರಿ ಬೊಮ್ಮಗೌಡ ಅವರು ಸೇರಿದಂತೆ 89 ಮಂದಿ ಸಾಧಕರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ನವದೆಹಲಿ ಜನವರಿ25: ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಪದ್ಮಪ್ರಶಸ್ತಿ ಪುರಸ್ಕೃತರ ಪಟ್ಟ ಪ್ರಕಟವಾಗಿದೆ. ಕರ್ನಾಟಕದ ಹಾಲಕ್ಕಿ ಒಕ್ಕಲಿಗ ಜನಾಂಗದ 'ಜಾನಪದ ಕೋಗಿಲೆ ' ಸುಕ್ರಿ ಬೊಮ್ಮಗೌಡ ಅವರು ಸೇರಿದಂತೆ 89 ಮಂದಿ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
'ಎಲೆಮರೆಯ ಸಾಧಕರು'(unsung heroes) ಎಂಬ ವಿಭಾಗದಿಂದ ಪದ್ಮ ಪ್ರಶಸ್ತಿ ವಿಜೇತರನ್ನು ಆಯ್ಕೆ ಮಾಡಲಾಗುತ್ತಿದ್ದು, ಈ ಮೂಲಕ ಜನಪ್ರಿಯತೆಯಿಂದ ದೂರವುಳಿದಿರುವ ಸಾಧಕರನ್ನು ಗುರುತಿಸಲು ಆಯ್ಕೆ ಸಮಿತಿ ಮುಂದಾಗಿದೆ.[2017ನೇ ಸಾಲಿನ ಪದ್ಮ ಪ್ರಶಸ್ತಿ ವಿಜೇತರ ಪೂರ್ಣ ಪಟ್ಟಿ]
75 ವರ್ಷದ ಸುಕ್ರಿ ಬೊಮ್ಮಗೌಡ ಅವರು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯವರಾಗಿದ್ದು, ಹಾಲಕ್ಕಿ ಜನಾಂಗದವರಾಗಿದ್ದಾರೆ. ಪಶ್ಚಿಮ ಬಂಗಾಳದ ಜಾನಪದ ಗಾಯಕ ಇಮ್ರತ್ ಖಾನ್ ಈ ವಿಭಾಗದಿಂದ ಅಯ್ಕೆಯಾಗಿದ್ದಾರೆ.[ರಾಜ್ಯದ ಯು. ಆರ್ ರಾವ್ ಸೇರಿದಂತೆ ಏಳು ಸಾಧಕರಿಗೆ ಪದ್ಮ ಪ್ರಶಸ್ತಿ]
ದೇಶದ ಎರಡನೇ ಅತ್ಯುನ್ನತ ನಾಗರಿಕ ಪುರಸ್ಕಾರವಾದ 2017ನೇ ಸಾಲಿನ ಪದ್ಮ ಪ್ರಶಸ್ತಿಗಳು ಅಧಿಕೃತವಾಗಿ ಬುಧವಾರ ಸಂಜೆ ಪ್ರಕಟಗೊಂಡಿದೆ. ಖ್ಯಾತ ಕ್ರಿಕೆಟ್ ಪಟು ಮಹೇಂದ್ರ ಸಿಂಗ್ ಧೋನಿ, ಒಲಿಂಪಿಕ್ ಪದಕ ವಿಜೇತರಾದ ಪಿ.ವಿ.ಸಿಂಧು, ಸಾಕ್ಷಿ ಮಲ್ಲಿಕ್, ಕೋಚ್ ಪುಲ್ಲೇಲ ಗೋಪಿಚಂದ್, ಸಾಮಾಜಿಕ ಕಾರ್ಯಕರ್ತ ಅಲೋಕ್ ಸಾಗರ್ ಸೇರಿದಂತೆ 150 ಮಂದಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳು ಲಭಿಸಲಿದೆ.

150 ಮಂದಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ
75 ವರ್ಷದ ಸುಕ್ರಿ ಬೊಮ್ಮಗೌಡ ಅವರು 12 ವರ್ಷಕ್ಕೆ ಮದುವೆಯಾಗಿ ಸಂಸಾರದ ಭಾರ ಹೊತ್ತವರು. ಉತ್ತರಕನ್ನಡ ಜಿಲ್ಲೆಯ ಹಾಲಕ್ಕಿ ಒಕ್ಕಲಿಗ ಜನಾಂಗದ ಮಹಿಳೆಯರ ಪರ ದನಿ ಎತ್ತಿದವರು. ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿದರು. ಅರಣ್ಯ ಅತಿಕ್ರಮಣ ಸಕ್ರಮ ಹೋರಾಟ, ಸಾರಾಯಿ ವಿರೋಧಿ ಹೋರಾಟದಲ್ಲಿ ಪಾಲ್ಗೊಂಡು ಜನ ಜಾಗೃತಿ ಮೂಡಿಸಿದ್ದಾರೆ.

ಚಿನ್ನದ ಪದಕ ಗೆದ್ದ ಹೈ ಜಂಪ್ ಪಟು
ಎಂ ತಂಗವೇಲು-ರಿಯೋ ಪ್ಯಾರಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಹೈ ಜಂಪ್ ಪಟು.
ತಮಿಳುನಾಡು ಮೂಲದ ತಂಗವೇಲು ಅವರು ಬೆಂಗಳೂರಿನಲ್ಲಿ ತರಬೇತಿ ಹೊಂದಿದವರು.

ಜಿಮ್ನಾಸ್ಟ್
ದೀಪಾ ಕರ್ಮಾಕರ್- ಫೈನಲ್ ಹಂತ ತಲುಪಿ ನಾಲ್ಕನೇ ಸ್ಥಾನಕ್ಕೆ ತೃಪ್ತರಾದ ಜಿಮ್ನಾಸ್ಟ್

ಅಂಧರ ಕ್ರಿಕೆಟ್ ತಂಡ ನಾಯಕ
ಕರ್ನಾಟಕ ಮೂಲದ ಶೇಖರ್ ನಾಯ್ಕ್ ಅವರು ರಾಷ್ಟ್ರೀಯ ಕ್ರಿಕೆಟ್ (ಅಂಧರ) ತಂಡ ನಾಯಕರಾಗಿದ್ದಾರೆ

ಸಮಾಜಸೇವೆ
52 ವರ್ಷ ವಯಸ್ಸು, ಪಶ್ಚಿಮ ಬಂಗಾಲ, ಆಂಬ್ಯುಲೆನ್ಸ್ ದಾದಾ ಎಂದೇ ಕರೆಯಲ್ಪಡುವ ಕರೀಂಮುಲ್ಲಾ ಹಕ್ ಅವರು ಉಚಿತವಾಗಿ 24X7 ಬೈಕ್ ಆಂಬ್ಯುಲೆನ್ಸ್ ಸೇವೆ ನೀಡುತ್ತಿದ್ದಾರೆ.

ರಂಗಬಾತಿ ಕಿ ಅವಾಜ್
64 ವರ್ಷ ವಯಸ್ಸು, ಒಡಿಶಾದ ಗಾಯಕ , 1000ಕ್ಕೂ ಅಧಿಕ ಗೀತೆಗಳನ್ನು ಹಾಡಿರುವ ಜಾನಪದ ಗಾಯಕ.

ಅನಾರ್ ದಾದಾ, ಗುಜರಾತ್
ಕೃಷಿಕರು, 52 ವರ್ಷ ವಯಸ್ಸು, ದಾಳಿಂಬೆ ಕೃಷಿ ಮೂಲಕ ಬರ ಪೀಡಿತ ಪ್ರದೇಶವನ್ನು ಹಸಿರಾಗಿಸಿದ ಸಾಧಕ.

ಲೇಖಕಿ, ಅಸ್ಸಾಂ
81 ವರ್ಷ ವಯಸ್ಸು, ಲೇಖಕ ಹಾಗೂ ಶಿಕ್ಷಣ ವಿಭಾಗ. ಫಿಲಂ ಇನ್ಸ್ಟಿಟ್ಯೂಟ್ ಸ್ಥಾಪಕಿ.

ಎನ್ನಾರೈ, ಯುಎಸ್ ಎ
51ವರ್ಷ ವಯಸ್ಸು, edX ಸ್ಥಾಪಕ, ಇಂಗ್ಲೀಷ್ ಹಾಗೂ ಹಿಂದಿ ಭಾಷೆಯಲ್ಲಿ 160ಕ್ಕೂ ಅಧಿಕ ದೇಶಗಳಲ್ಲಿ ಪ್ರಸಾರ

ಸ್ವಚ್ಛದೂತ, ಮಹಾರಾಷ್ಟ್ರ
ಸಮಾಜಸೇವಕ ಡಾ. ಮಪೂಸ್ಕರ್ ಅವರಿಗೆ ಮರಣೋತ್ತರ ಪ್ರಶಸ್ತಿ ನೀಡಲಾಗುತ್ತಿದೆ. ಕಡಿಮೆ ಖರ್ಚಿನಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಿದ ಸಾಧಕ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications