ಜಮ್ಮು-ಕಾಶ್ಮೀರ ಚುನಾವಣೆ; ಕಾಂಗ್ರೆಸ್ ಜತೆ ಮೈತ್ರಿ ಘೋಷಿಸಿದ ಎನ್ಸಿ
ಜಮ್ಮು-ಕಾಶ್ಮೀರ, ಆಗಸ್ಟ್ 22: ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು, ಈ ಬಾರಿ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಹಾಗೂ ಕಾಂಗ್ರೆಸ್ ಪಕ್ಷ ಮೈತ್ರಿಯಾಗಿ ಚುನಾವಣೆ ಎದುರಿಸಲು ಸಜ್ಜಾಗಿವೆ. 90 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ನ (ಎನ್ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಇಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಶ್ರೀನಗರದ ಮಾತುಕತೆ ನಡೆಸಿದ ಬಳಿಕ ಫಾರೂಕ್ ಅವರು ಕಾಂಗ್ರೆಸ್ ಜತೆಗಿನ ಮೈತ್ರಿ ಘೋಷಿಸಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ನಡುವಿನ ಈ ಮೈತ್ರಿಯು ದೇಶದ ವಿಭಜನೆ ಮಾಡಲು ಹೊರಟಿರುವ ಶಕ್ತಿಗಳನ್ನು ಮಣಿಸುವ ಉದ್ದೇಶ ಹೊಂದಿದೆ ಎಂದು ಫಾರೂಕ್ ಹೇಳಿದ್ದಾರೆ.

ಈ ಚುನಾವಣೆಯಲ್ಲಿ ನಾವು ಬಹುಮತದಿಂದ ಗೆಲ್ಲುವ ನಿರೀಕ್ಷೆಯಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವುದು ಕಾಂಗ್ರೆಸ್ ಮತ್ತು ಇಂಡಿಯಾ ಕೂಟದ ಆದ್ಯತೆಯಾಗಿದೆ. ಈ ಚುನಾವಣೆಯಲ್ಲಿ ಗೆದ್ದು, ಎಲ್ಲಾ ಅಧಿಕಾರಗಳೊಂದಿಗೆ ಪೂರ್ಣ ರಾಜ್ಯತ್ವವನ್ನು ಮರುಸ್ಥಾಪಿಸಲಾಗುವುದು ಎಂದು ಫಾರೂಕ್ ಭರವಸೆ ವ್ಯಕ್ತಪಡಿಸಿದ್ದಾರೆ. ಜಮ್ಮುಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಬಹಳ ಮುಖ್ಯವಾಗಿದೆ. ನಮ್ಮ ರಾಜ್ಯವು ಅತ್ಯಂತ ಕೆಟ್ಟ ದಿನಗಳನ್ನು ಕಂಡಿದ್ದು, ಇದಕ್ಕೆ ಸಂಪೂರ್ಣ ಅಧಿಕಾರದ ಜೊತೆಗೆ ಪುನರ್ ಸ್ಥಾಪಿಸುವ ವಿಶ್ವಾಸ ನಮಗಿದೆ. ಅದಕ್ಕಾಗಿ ನಾವು ಇಂಡಿಯಾ ಬಣದ ಜೊತೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.
#WATCH | Srinagar, J&K: Congress President Mallikarjun Kharge, Lok Sabha LoP and Congress MP Rahul Gandhi met National Conference President Farooq Abdullah and Vice President Omar Abdullah at the residence in Srinagar.
— ANI (@ANI) August 22, 2024
(Video: AICC) pic.twitter.com/u5v5ULq5W7
ನಿನ್ನೆ ಶ್ರೀನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ್ದ ರಾಹುಲ್ ಗಾಂಧಿ, ಜಮ್ಮು ಕಾಶ್ಮೀರದಲ್ಲಿ ಆದಷ್ಟು ಬೇಗ ರಾಜ್ಯತ್ವವನ್ನು ಮರುಸ್ಥಾಪಿಸಬೇಕು. ಇದಕ್ಕೆ ನಾವು ಹಾಗೂ ಇಂಡಿಯಾ ಬಣ ಆದ್ಯತೆ ನೀಡುತ್ತದೆ. ಜಮ್ಮು ಕಾಶ್ಮೀರ ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಪುನಃಸ್ಥಾಪಿಸುವ ಆಶಯ ಹೊಂದಿದ್ದೇವೆ ಎಂದು ಹೇಳಿದ್ದರು.

ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಕೂಡ ಕಣಿವೆ ರಾಜ್ಯದಲ್ಲಿ ಮಿಂಚಿನ ತಯಾರಿ ನಡೆಸಲಾರಂಭಿಸಿದೆ. ಮುಂದಿನ ವಾರದಿಂದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕಣಿವೆ ರಾಜ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಕಲ್ಪಿಸಿದ್ದ ವಿಶೇಷ ಸ್ಥಾನಮಾನವನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ 2019ರ ಆಗಸ್ಟ್ 5ರಂದು ರದ್ದುಪಡಿಸಿತ್ತು. ಇದಾದ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಬಿಜೆಪಿ ಏಕಾಂಗಿಯಾಗಿ ಜಮ್ಮು ಕಾಶ್ಮೀರದಲ್ಲಿ ಚುನಾವಣೆಯನ್ನು ಎದುರಿಸುತ್ತಿದೆ. ಮತ್ತೊಂದೆಡೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳ ಚುನಾವಣಾ ಪೂರ್ವ ಮೈತ್ರಿ ಯಶಸ್ವಿಯಾಗಿದೆ. ಹಾಗಾಗಿ ಈ ವಿಧಾನಸಭಾ ಚುನಾವಣೆಯು ತೀವ್ರ ಕುತೂಹಲ ಮೂಡಿಸಿದೆ.
ಜಮ್ಮು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಕ್ರಮವಾಗಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಹಾಗೂ ಅಕ್ಟೋಬರ್ 1ರಂದು ಚುನಾವಣೆ ನಿಗದಿಯಾಗಿದೆ. ಅಕ್ಟೋಬರ್ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications