ಈ ಎರಡು ಪ್ರದೇಶಗಳ ಮೇಲೆ ನಿಂತಿದೆ ಮಧ್ಯಪ್ರದೇಶದ ಭವಿಷ್ಯ
ಭೋಪಾಲ್, ನವೆಂಬರ್ 07: ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಅಸಲಿ ಯುದ್ಧ ಶುರುವಾಗುವುದೇ ಮಾಳ್ವಾ ಮತ್ತು ನಿಮಾರ್ ಪ್ರದೇಶದಿಂದ.
ಈ ಪ್ರದೇಶದಲ್ಲಿ ಎಷ್ಟು ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂಬುದರ ಮೇಲೆ ಆಯಾ ಪಕ್ಷದ ರಾಜಕೀಯ ಭವಿಷ್ಯ ಅಡಗಿರುತ್ತದೆ.
ಮಾಲ್ವಾ-ನಿಮಾರ ಕ್ಷೇತ್ರದಲ್ಲಿ ಒಟ್ಟು 66 ವಿಧಾನಸಭಾ ಕ್ಷೇತ್ರಗಳಿವೆ. ಇವುಗಳಲ್ಲಿ ಯಾವ ಪಕ್ಷ ಹೆಚ್ಚನ್ನು ಗೆಲ್ಲುತ್ತದೋ ಅದಕ್ಕೆ ವಿಜಯ ಮಾಲೆ ಗ್ಯಾರಂಟಿ! ಆದ್ದರಿಂದಲೇ ಮಧ್ಯಪ್ರದೇಶದ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಈ ಪ್ರದೇಶದ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಿದ್ದಾರೆ.

56 ಸ್ಥಾನ ಗೆದ್ದಿದ್ದ ಬಿಜೆಪಿ
ಕಳೆದ ವಿಧಾನಸಭಾ ಚುನಾವಣೆಯಯಲ್ಲಿ ಈ ಭಾಗದ 66 ಕ್ಷೇತ್ರಗಳಲ್ಲಿ 56 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಈ ಪ್ರದೇಶದ ಪ್ರಾಮುಖ್ಯತೆಯನ್ನು ಬಲ್ಲ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಇಲ್ಲಿಂದಲೇ ತಮ್ಮ ಪ್ರಚಾರವನ್ನೂ ಆರಂಭಿಸುವುದು ಮಾಮೂಲಾಗಿದೆ. ಈ ವರ್ಷವೂ ಈ ಭಾಗದಲ್ಲಿ ಭರ್ಜರಿ ಪ್ರಚಾರ ನಡೆಯುವ ಸಾಧ್ಯತೆ ಇದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮುಂತಾದವರು ಇಲ್ಲಿಂದಲೇ ಪ್ರಚಾರ ಆರಂಭಿಸಲಿದ್ದಾರೆ.

ಆರೆಸ್ಸೆಸ್ ಪ್ರಾಬಲ್ಯ
ಮಾಲ್ವಾ ಪ್ರದೇಶದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಬಲ್ಯ ಸಾಕಷ್ಟಿದೆ. ಹಲವು ಮುಖ್ಯಮಂತ್ರಿಗಳನ್ನು ನೀಡಿದ ಪ್ರದೇಶವೂ ಇದು. ಬಿಜೆಪಿ ಮಾಜಿ ಅಧ್ಯಕ್ಷ ಕುಶಭಾಹು ಠಾಕ್ರೆ, ಮಧ್ಯಪ್ರದೇಶ ಮುಖ್ಯಮಂತ್ರಿಗಳಾಗಿದ್ದ ಸುಂದರಲಾಲ್ ಪಾತ್ವಾ, ಕೈಲಾಶ್ ಜೋಷಿ, ವೀರೇಂದ್ರ ಸಕ್ಲೇಚಾ ಮುಂತಾದವರನ್ನು ನೀಡಿದ್ದು ಇದೇ ಪ್ರದೇಶ. ಜೊತೆಗೆ ಇಲ್ಲಿನ ಬುಡಕಟ್ಟು ಪ್ರದೇಶವಾದ ಧಾರ್, ಝಾಬುವಾ, ಅಲಿರಾಜಪುರ ಮತ್ತು ರತ್ಲಮ್ ಗಳಲ್ಲಿ ಕಾಂಗ್ರೆಸ್ ಪ್ರಭಾವ ಸಾಕಷ್ಟಿದೆ.

ರೈತ ಹೋರಾಟಕ್ಕೆ ವೇದಿಕೆಯಾದ ಸ್ಥಳ
ಇದೇ ಪ್ರದೇಶದಲ್ಲಿ ಕಳೆದ ವರ್ಷ ರೈತ ಹೋರಾಟ ಆರಂಭವಾಗಿ, ಐವರು ರೈತರು ಮೃತರಾಗಿದ್ದು. ಈ ಪ್ರದೇಶದಲ್ಲಿ ಪ್ರಾಬಲ್ಯ ಪಡೆದ ಪಾಟೀದಾರ್ ಸಮುದಾಯದೊಂದಿಗೆ ಪಾಟಿದಾರ್ ಆಂದೋಲನದ ಮುಖಂಡ ಹಾರ್ದಿಕ್ ಪಟೇಲ್ ನಿರಂತರ ಸಂಪರ್ಕದಲ್ಲಿದ್ದಾರೆ. ಈ ಭಾಗದಲ್ಲಿ ಪಾಟೀದಾರ್ ಸಮುದಾಯದ 50 ಲಕ್ಷಕ್ಕೂ ಹೆಚ್ಚು ಮಂದಿ ಬದುಕುತ್ತಿದ್ದು, ಆದ್ದರಿಂದಲೇ ಈ ಭಾಗದಲ್ಲಿ 12 ಪಾಟೀದಾರ್ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಹಾರ್ದಿಕ್ ಪಟೇಲ್ ಒತ್ತಾಯಿಸಿದ್ದಾರೆ.

ಮಹತ್ವದ ಪ್ರದೇಶಗಳು
ಮಹಾಕೊಶಾಲ್, ಮಾಳ್ವಾ, ವಿಂಧ್ಯಪ್ರದೇಶ, ಚಂಬಲ್ ಪ್ರದೇಶಗಳು ಬಹು ಮಹತ್ವದ್ದಾಗಿವೆ. 2013 ರ ಚುನಾವಣೆಯಲ್ಲಿ ಬಿಜೆಪಿಗೆ ಸಿಕ್ಕ ಹೆಚ್ಚುವರಿ 18 ಕ್ಷೇತ್ರಗಳು ಮಾಳ್ವಾ ಕ್ಷೇತ್ರದಿಂದ ಬಂದವು. ಮಾಳ್ವಾ ಪ್ರದೇಶದಲ್ಲಿ ಈ ಬಾರಿ 45 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕು ಎಂಬ ಗುರಿಯನ್ನು ಬಿಜೆಪಿ ಹಾಕಿಕೊಂಡಿದೆ. ಆದರೆ ಬಿಜೆಪಿ ವಿರುದ್ಧ ಇರುವ ಆಡಳಿತವಿರೋಧಿ ಅಲೆ ಅದಕ್ಕೆ ದಾರಿ ಮಾಡಿಕೊಡದಿದ್ದೀತು ಎಂಬ ಭಯ ಬಿಜೆಪಿ ಮುಖಂಡರಿಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications