ಸುಕ್ಮಾ ನಕ್ಸಲ್ ದಾಳಿಯ ಹಿಂದಿನ ನಿಜವಾದ ಕಾರಣ!
ಈ ಹತ್ಯೆಯ ಹಿಂದಿನ ಕಾರಣ ಮಾತ್ರ ನಾಚಿಕೆಗೇಡಿನದು. ಈ ಪ್ರದೇಶದಲ್ಲಿ ಸಿಆರ್ಪಿಎಫ್ ಯೋಧರು ಕೈಗೊಂಡಿದ್ದ ಅಭಿವೃದ್ಧಿ ಕಾರ್ಯದ ವಿರುದ್ಧ ನಕ್ಸಲೀಯರು ಕಿಡಿಕಾರುತ್ತಿದ್ದರು. ಅವರಿಗೆ ಆ ಪ್ರದೇಶದಲ್ಲಿ ಅಭಿವೃದ್ಧಿ ಬೇಡವಾಗಿತ್ತು. ಇದಕ್ಕಾಗಿ ಈ ಹತ್ಯೆ.
ಬೆಂಗಳೂರು, ಏಪ್ರಿಲ್ 25 : ನೂರರ ಆಸುಪಾಸಿನಲ್ಲಿದ್ದ ಕೇಂದ್ರ ಮೀಸಲು ದಳದ ಪೊಲೀಸರ ಮೇಲೆ ಮುನ್ನೂರಕ್ಕೂ ಹೆಚ್ಚಿದ್ದ ನಕ್ಸಲೀಯರು ಏಕಾಏಕಿ ಗುಂಡಿನ ದಾಳಿ ನಡೆಸಿ ಭೀಕರ ಹತ್ಯಾಕಾಂಡ ಎಸಗಲು ನಿಜವಾದ ಕಾರಣವಾದರೂ ಏನು?
ಸದ್ಯಕ್ಕೆ ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆಯಿದು. ರೋಷಾವೇಶದಿಂದ ಪೊಲೀಸರ ಮೇಲೆ ಮುಗಿಬಿದ್ದು ಯೋಧರನ್ನು ಕೊಂದು ಹಾಕಲು ಇದ್ದ ನಿಜವಾದ ಕಾರಣ ಅಭಿವೃದ್ಧಿ. ಅಭಿವೃದ್ದಿ ಇಲ್ಲದ್ದಕ್ಕಲ್ಲ. ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಕ್ಕೆ ಈ ಪ್ರತೀಕಾರ![ನಕ್ಸಲೀಯರ ಇತ್ತೀಚಿನ ಹತ್ಯಾಕಾಂಡ : ಟೈಮ್ ಲೈನ್]

ಛತ್ತೀಸ್ ಗಢದ ಸುಕ್ಮಾ ಪ್ರಾಂತ್ಯದಲ್ಲಿ ಸೋಮವಾರ ಮಧ್ಯಾಹ್ನ ನಡೆಸಿದ ಭೀಕರ ಗುಂಡಿನ ದಾಳಿಗೆ ಸಿಆರ್ಪಿಎಫ್ಗೆ ಸೇರಿದ 26 ಯೋಧರನ್ನು ನಕ್ಸಲೀಯರು ಹತ್ಯೆ ಮಾಡಿದ್ದು ಇಡೀ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಯೋಧರ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗುಡುಗಿದ್ದಾರೆ.
ಈ ಹತ್ಯೆಯ ಹಿಂದಿನ ಕಾರಣ ಮಾತ್ರ ನಾಚಿಕೆಗೇಡಿನದು. ಈ ಪ್ರದೇಶದಲ್ಲಿ ಸಿಆರ್ಪಿಎಫ್ ಯೋಧರು ಕೈಗೊಂಡಿದ್ದ ಅಭಿವೃದ್ಧಿ ಕಾರ್ಯದ ವಿರುದ್ಧ ನಕ್ಸಲೀಯರು ಕಿಡಿಕಾರುತ್ತಿದ್ದರು. ಅವರಿಗೆ ಆ ಪ್ರದೇಶದಲ್ಲಿ ಅಭಿವೃದ್ಧಿ ಬೇಡವಾಗಿತ್ತು. ಇದಕ್ಕಾಗಿ ಈ ಹತ್ಯೆ.
ಸುಕ್ಮಾದಲ್ಲಿ ಮೈಲುಗಟ್ಟಲೆ ರಸ್ತೆ ಹಾಕಲಾಗಿದೆ. ಒಟ್ಟು 44 ಜಿಲ್ಲೆಗಳಲ್ಲಿ 5,412 ಕಿ.ಮೀ.ನಷ್ಟು ರಸ್ತೆ ಕಾಮಗಾರಿಯನ್ನು ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯ ಹಸಿರು ನಿಶಾನೆ ನೀಡಿದೆ. ಛತ್ತೀಸಗಢ, ಬಿಹಾರ, ಜಾರ್ಖಂಡ್, ಆಂಧ್ರಪ್ರದೇಶ, ಓರಿಸ್ಸಾ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲಿ ಈ ರಸ್ತೆ ನಿರ್ಮಿಸಲಾಗುತ್ತಿದೆ. [ನಕ್ಸಲರ ದಾಳಿ ಹಿಂದೆ ಜೆಎನ್ ಯು ವಿವಿಯ ಪಿತೂರಿ?]
Saluting the bravehearts !!
— Prasar Bharati (@prasarbharati) April 25, 2017
Prasar Bharati salutes the supreme sacrifice of 25 @crpfindia bravehearts of #SukmaAttack. pic.twitter.com/4q27PaKA5f
ಈ ರಸ್ತೆ ನಿರ್ಮಾಣವಾದರೆ ಅಲ್ಲೆಲ್ಲ ಶಾಲೆ, ಕಾಲೇಜು, ಆಸ್ಪತ್ರೆ ಮತ್ತಿತರ ವ್ಯಾಪಾರ ಕೇಂದ್ರಗಳು ತಲೆ ಎತ್ತುತ್ತವೆ. ಈ ಎಲ್ಲ ಅಭಿವೃದ್ಧಿ ಕಾರ್ಯ ಕಾರ್ಯಗತವಾದರೆ, ಈ ಪ್ರದೇಶದಲ್ಲಿ ಕೇಂದ್ರ ಏನೂ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲವೆಂದು ದೂರುತ್ತಿದ್ದ ನಕ್ಸಲೀಯರ ಸಿದ್ಧಾಂತಕ್ಕೆ ಹೊಡೆತ ಬೀಳುತ್ತಲಿತ್ತು. [ಛತ್ತೀಸ್ ಘಡ ಎನ್ಕೌಂಟರ್: ಪೊಲೀಸರ ಸಾವಿನ ಸಂಖ್ಯೆ 26ಕ್ಕೆ ಏರಿಕೆ]
ಈ ಎಲ್ಲ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆ ಸಹಕಾರ ನೀಡುತ್ತಿತ್ತು. ಇದು ನಕ್ಸಲೀಯರಿಗೆ ಬೇಡವಾಗಿತ್ತು. ಪೊಲೀಸರ ಮೇಲೆ ದಾಳಿ ನಡೆಸಿದ್ದರ ಮೂಲ ಉದ್ದೇಶ, ಇಂಥ ಕೆಲಸದಲ್ಲಿ ಪೊಲೀಸರು ತಲೆ ಹಾಕಬಾರದು ಎಂದು ಕೇಂದ್ರ ಗೃಹ ಸಚಿವಾಲಯ ಭದ್ರತಾ ಇಲಾಖೆಯ ಹಿರಿಯ ಅಧಿಕಾರಿ ಕೆ ವಿಜಯ್ ಕುಮಾರ್ ಹೇಳುತ್ತಾರೆ. [ಹುತಾತ್ಮರ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ: ರಾಜನಾಥ್]
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications