ಗಂಡ ಬೆಳ್ಳಗಿಲ್ಲ..ಅಂದವಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಹೆಂಡತಿ
ಉತ್ತರ ಪ್ರದೇಶ, ಅಕ್ಟೋಬರ್ 26: ಇತ್ತೀಚಿಗೆ ಆತ್ಮಹತ್ಯೆ ಎನ್ನುವುದು ಎಲ್ಲಾ ಸಮಸ್ಯೆಗಳಿಗೆ ಸುಲಭ ಪರಿಹಾರ ಎನ್ನುವಂತೆ ಕೆಲವರು ವರ್ತಿಸುತ್ತಿದ್ದಾರೆ. ಚಿಕ್ಕ ಪುಟ್ಟ ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳಲಾಗದೇ ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ಸಾಲ, ಸಾವು, ನೋವು ಇವುಗಳಿಂದ ಬೇಸತ್ತು ಜೀವನ ಸಾಕು ಎನಿಸಿ ಕೆಲವರು ಆತ್ಮಹತ್ಯೆ ಶರಣಾಗುತ್ತಾರೆ. ಆದರೆ ಇಲ್ಲೊಬ್ಬಳ್ಳು ಯುವತಿ ಗಂಡನ ಅಂದದ ಬಗ್ಗೆ ನೊಂದು ಮದುವೆಯಾದ ನಾಲ್ಕೇ ತಿಂಗಳಿಗೆ ಜೀವನ ಅಂತ್ಯಗೊಳಿಸಿಕೊಂಡಿದ್ದಾಳೆ.
ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಸಿಯಾಲ್ ಖೇಡಾ ಮೊಹಲ್ಲಾದಲ್ಲಿ ನೆಲೆಸಿರುವ 25 ವರ್ಷದ ತೌಫಿಕ್ ಎನ್ನುವಾತನ ಪತ್ನಿ ಸಿಮ್ರಾನ್ ಸಾವಿಗೆ ಶರಣಾದ ಮಹಿಳೆಯಾಗಿದ್ದಾಳೆ. ತೌಫಿಕ್, ಸಿಯಾಲ್ ಖೇಡಾ ಮೊಹಲ್ಲಾದಲ್ಲಿ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದ. ಬರೌಲಾದ ಅಲಿಗಢದ ಜಫರಾಬಾದ್ ಸಿಮ್ರಾನ್ ತವರು ಮನೆಯಾಗಿದ್ದು, ಮದುವೆ ಬಳಿಕ ತೌಫಿಕ್ ಊರು ಸಿಯಾಲ್ ಖೇಡಾ ಮೊಹಲ್ಲಾಗೆ ಬಂದು ಜೀವನ ನಡೆಸುತ್ತಿದ್ದರು.

ಸಿಮ್ರಾನ್ಗೆ ತೌಫಿಕ್ನನ್ನು ಮದುವೆಯಾಗಲು ಇಷ್ಟ ಇರಲಿಲ್ಲವಂತೆ. ಆತ ನೋಡಲು ಅಂದವಾಗಿಲ್ಲ, ನೋಡಲು ಕಪ್ಪಗಿದ್ದಾನೆ ಎನ್ನುವುದು ಪೋಷಕರಿಗೆ ಆಕೆಯ ದೂರಾಗಿತ್ತು. ಆದರೆ ತೌಫಿಕ್ ಒಳ್ಳೆಯ ಹುಡುಗ ಎಂದು ಮನೆಯವರು ಮದುವೆ ಮಾಡಿಕೊಟ್ಟಿದ್ದರು. ತನ್ನ ಗಂಡ ಕಪ್ಪಗಿದ್ದಾನೆ ಎಂದೇ ಆಕೆ ಪ್ರತಿ ದಿನ ಕೊರಗುತ್ತಿದ್ದಳಂತೆ. ಮದುವೆಯಾಗಿ 4 ತಿಂಗಳಾದರೂ ಆಕೆ ಸಂತೋಷವಾಗಿರಲಿಲ್ಲ. ಗಂಡನ ಅಂದದ ಬಗ್ಗೆಯೇ ಕೊರಗುತ್ತಿದ್ದಳು ಎನ್ನಲಾಗಿದೆ.
ನಾಲ್ಕು ತಿಂಗಳು ಹೇಗೋ ಇಷ್ಟ ವಿಲ್ಲದ, ಅಂದವಿಲ್ಲದ ಗಂಡನ ಜೊತೆ ಜೀವನ ಸಾಗಿಸಿದ್ದ ಸಿಮ್ರಾನ್, ಪತಿ ತೌಫಿಕ್ ಕೆಲಸಕ್ಕೆ ತೆರಳಿದ ಬಳಿಕ ಜೀವನವನ್ನೇ ಕೊನೆಗೊಳಿಸಿಕೊಳ್ಳುವ ನಿರ್ಧಾರ ಮಾಡಿದ್ದಾಳೆ. ಮನೆಯಲ್ಲಿ ಇಬ್ಬರೇ ಇದ್ದ ಕಾರಣ ಗಂಡ ಕೆಲಸಕ್ಕೆ ಹೋಗುತ್ತಿದ್ದಂತೆ ಪತ್ನಿ ಕೋಣೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ ಎನ್ನುವ ಮಾಹಿತಿ ಇದೆ.
ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದ ಸಿಮ್ರಾನ್ನನ್ನು ನೋಡಿದ ಅಕ್ಕಪಕ್ಕದ ಕೆಲವರು ಆಕೆಯ ಪತಿ ತೌಫಿಕ್ಗೆ ವಿಷಯ ತಿಳಿಸಿದ್ದಾರೆ. ಸ್ಥಳೀಯ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇನ್ನು ಸಿಮ್ರಾನ್ ತವರು ಮನೆಯವರು ಕೂಡ ಘಟನಾ ಸ್ಥಳಕ್ಕೆ ಬಂದಿದ್ದು, ಗಂಡನ ಬಣ್ಣದ ಬಗ್ಗೆ ಆಗಾಗ ದೂರುತ್ತಿದ್ದಳು. ಅದೇ ಅವಳ ಸಾವಿಗೆ ಕಾರಣ ಇರಬಹುದು ಎನ್ನುವ ಅನುಮಾನ ವ್ಯಕ್ತಪಡಿಸಿದ್ದಾರೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
-
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ












Click it and Unblock the Notifications