ಬೇಟಿ ಬಚಾವೋ: ಉತ್ತರಕಾಶಿಯ ಈ ಹಳ್ಳಿಗಳಲ್ಲಿ ಹೆಣ್ಣು ಮಕ್ಕಳೇ ಜನಿಸುತ್ತಿಲ್ಲ!
ಉತ್ತರಕಾಶಿ (ಉತ್ತರಾಖಂಡ್), ಜುಲೈ 22: ಕೇಂದ್ರ ಸರಕಾರವು 'ಬೇಟಿ ಬಚಾವೋ ಬೇಟಿ ಪಢಾವೋ' ಅಭಿಯಾನದ ಮೂಲಕ ಹೆಣ್ಣುಮಕ್ಕಳ ಪ್ರೋತ್ಸಾಹಕ್ಕೆ ಕಾರ್ಯಕ್ರಮ ರೂಪಿಸಿದೆ. ಇಂಥ ಸನ್ನಿವೇಶದಲ್ಲಿ ಉತ್ತರಾಖಂಡ್ ರಾಜ್ಯದ ಉತ್ತರಕಾಶಿ ಜಿಲ್ಲೆಯ 132 ಹಳ್ಳಿಗಳಲ್ಲಿ ಜನನ ಮಾಹಿತಿಯ ಲಿಂಗಾನುಪಾತ ಪ್ರಮಾಣವು ಬಹಿರಂಗವಾಗಿದ್ದು, ಕಳೆದ ಮೂರು ತಿಂಗಳಲ್ಲಿ ಈ ಪ್ರದೇಶದಲ್ಲಿ ಒಂದೇ ಒಂದು ಹೆಣ್ಣುಮಗು ಜನಿಸಿಲ್ಲ.
ಲಭ್ಯ ದತ್ತಾಂಶದ ಪ್ರಕಾರ, ಕಳೆದ ಮೂರು ತಿಂಗಳಲ್ಲಿ 216 ಮಕ್ಕಳು ಉತ್ತರಕಾಶಿ ಜಿಲ್ಲೆಯ ಒಟ್ಟು 132 ಹಳ್ಳಿಗಳಲ್ಲಿ ಜನಿಸಿವೆ. ಆದರೆ ನವಜಾತ ಶಿಶುಗಳಲ್ಲಿ ಒಂದು ಹೆಣ್ಣು ಮಗು ಇಲ್ಲದಿರುವುದು ಜಿಲ್ಲಾಡಳಿತವನ್ನೇ ಅಚ್ಚರಿಗೆ ದೂಡಿದೆ. ಹೆಣ್ಣು ಭ್ರೂಣ ಹತ್ಯೆಯ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
"ನಾವು ಕೆಲವು ಪ್ರದೇಶಗಳನ್ನು ಗುರುತಿಸಿದ್ದೇವೆ. ಅಲ್ಲಿ ಹೆಣ್ಣುಮಕ್ಕಳ ಜನನ ಸಂಖ್ಯೆ ಶೂನ್ಯ ಅಥವಾ ಒಂದಂಕಿಯಲ್ಲಿದೆ. ಈ ಪ್ರದೇಶಗಳಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳ ಜನನ ಅನುಪಾತದ ಮೇಲೆ ಈ ರೀತಿ ಪರಿಣಾಮ ಬೀರುತ್ತಿರುವ ಅಂಶಗಳೇನು ಎಂದು ಪರಿಶೀಲಿಸುತ್ತಿದ್ದೇವೆ. ಕಾರಣದ ಹಿಂದಿನ ಅಂಶವನ್ನು ಪತ್ತೆ ಹಚ್ಚಲು ಸಮಗ್ರವಾದ ಸಮೀಕ್ಷೆ, ಅಧ್ಯಯನ ನಡೆಸಲಿದ್ದೇವೆ" ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ಚೌಹಾಣ್ ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಜತೆ ತುರ್ತು ಸಭೆ ನಡೆಸಿದ್ದು, ಈ ಪ್ರದೇಶಗಳಲ್ಲಿ ನಿಗಾ ಕ್ರಮಗಳನ್ನು ಹೆಚ್ಚಿಸಿ, ದತ್ತಾಂಶಗಳನ್ನು ಒಳಗೊಂಡಂತೆ ಕಾರಣದ ಬಗ್ಗೆ ಸಮಗ್ರ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಅಂದ ಹಾಗೆ ಈ ತುರ್ತು ಸಭೆಯಲ್ಲಿ ಗಂಗೋತ್ರಿಯ ಜನ ಪ್ರತಿನಿಧಿ ಗೋಪಾಲ್ ರಾವತ್ ಕೂಡ ಪಾಲ್ಗೊಂಡಿದ್ದರು.
"ಕಳೆದ ಮೂರು ತಿಂಗಳಿಂದ ಈ ಹಳ್ಳಿಗಳಲ್ಲಿ ಹೆಣ್ಣುಮಕ್ಕಳು ಜನಿಸಿಲ್ಲ ಎಂಬುದು ಕಾಕತಾಳೀಯ ಅಲ್ಲ. ಹೆಣ್ಣು ಭ್ರೂಣ ಹತ್ಯೆ ಆಗುತ್ತಿರುವುದರಿಂದಲೇ ಹೀಗಾಗಿದೆ. ಸರಕಾರವಾಗಲೀ ಜಿಲ್ಲಾಡಳಿತವಾಗಲೀ ಈ ಸಂಬಂಧ ಯಾವ ಕ್ರಮವನ್ನು ಕೈಗೊಳ್ಳುತ್ತಿಲ್ಲ" ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications