ಮುಕ್ತ ಸ್ತನ್ಯಪಾನದಲ್ಲಿ ಯಾವುದೇ ಅಶ್ಲೀಲತೆಯಿಲ್ಲ : ಹೈಕೋರ್ಟ್
ತಿರುವನಂತಪುರಂ, ಜೂನ್ 21 : ಗೃಹಲಕ್ಷ್ಮಿ ಪತ್ರಿಕೆಗಾಗಿ ರೂಪದರ್ಶಿ ಗಿಲು ಜೋಸೆಫ್ ಅವರು ಮಗುವಿಗೆ ಸ್ತನ್ಯಪಾನ ಮಾಡಿಸುವ ಚಿತ್ರದಲ್ಲಿ ಯಾವುದೇ ಅಶ್ಲೀಲತೆ ಇಲ್ಲ ಎಂದು ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಅಶ್ಲೀಲತೆ ಇರುವುದು ನೋಡುಗರ ದೃಷ್ಟಿಯಲ್ಲಿಯೇ ಹೊರತು, ಮಗುವಿಗೆ ಸ್ತನ್ಯಪಾನ ಮಾಡಿಸುವುದರಲ್ಲಿ ಇಲ್ಲ ಎಂದು ಹೈಕೋರ್ಟ್ ಹೇಳಿದ್ದನ್ನು ಎಲ್ಲರೂ ಮುಕ್ತಕಂಠದಿಂದ ಹೊಗಳುತ್ತಿದ್ದಾರೆ. ಇದು ಹೆಚ್ಚು ಸುದ್ದಿಗೇಕೆ ಗ್ರಾಸವಾಗಿತ್ತೆಂದರೆ, ಗಿಲು ಜೋಸೆಫ್ ಅವರು ಅವಿವಾಹಿತೆಯಾಗಿದ್ದು.
ಗಿಲು ಜೋಸೆಫ್ ಅವರು ಮುಕ್ತವಾಗಿ ಸ್ತನ್ಯಪಾನ ಮಾಡಿಸುತ್ತಿರುವ ಪೋಸ್ ನೀಡಿದ್ದರಿಂದ ಸ್ತ್ರೀತನದ ಗೌರವಕ್ಕೆ ಚ್ಯುತಿ ತಂದಿದೆ ಮತ್ತು ಆ ಚಿತ್ರ ಕಾಮ ಪ್ರಚೋದಕವಾಗಿದೆ ಎಂದು ವಕೀಲರಾದ ಮ್ಯಾಥ್ಯೂ ವಿಲ್ಸನ್ ಎಂಬುವವರು ಕಳೆದ ಮಾರ್ಚ್ ನಲ್ಲಿಯೇ ದೂರು ನೀಡಿದ್ದರು.

ರೂಪದರ್ಶಿ ಗಿಲು ಜೋಸೆಫ್ ಅವರು ಮಗುವಿಗೆ, ಮೈಮೇಲೆ ಯಾವುದೇ ಹೊದಿಕೆ ಹಾಕಿಕೊಳ್ಳದೆ ಮುಕ್ತವಾಗಿ ಸ್ತನ್ಯಪಾನ ಮಾಡಿಸಿದ್ದು ಸಂಪ್ರದಾಯಸ್ಥರ ಆಕ್ರೋಶಕ್ಕೆ ಗುರಿಯಾಗಿತ್ತು. ಕೆಲವರು ಇದು ಮಹಿಳಾ ಸ್ವಾತಂತ್ರ್ಯ ಮತ್ತು ಹಕ್ಕಿನ ಸಂಕೇತ ಎಂದೂ ಬೆಂಬಲಿಸಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಈ ಚಿತ್ರ ವೈರಲ್ ಆಗಿತ್ತು ಮತ್ತು ಚರ್ಚೆಗೆ ಗ್ರಾಸವಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಗಿಲು ಜೋಸೆಫ್ ಅವರು, ಮಗುವಿಗೆ ಹಾಲೂಡಿಸುವುದು ತಾಯ್ತನದ ಸಂಕೇತ. ಇದನ್ನು ಎಲ್ಲರೂ ಮಾಡಬೇಕು. ಆದರೆ, ಈರೀತಿ ಸ್ತನ್ಯಪಾನ ಮಾಡಿಸಿದ್ದು ಅನೇಕರು ಇಷ್ಟಪಡದಿದ್ದರೂ, ಇದು ನನ್ನ ಆಯ್ಕೆ ಎಂದು ಸಮರ್ಥಿಸಿಕೊಂಡಿದ್ದರು.
ಹೈಕೋರ್ಟ್ ನೀಡಿರುವ ತೀರ್ಪನ್ನು ಹಲವಾರು ಜನರು ಮುಕ್ತಕಂಠದಿಂದ ಹೊಗಳುತ್ತಿದ್ದಾರೆ. ಹಳ್ಳಿಗಳಲ್ಲಿ ಈಗಲೂ ಕೂಡ ತಾಯಂದಿರು ಮುಚ್ಚುಮರೆಯಿಲ್ಲದೆ ಸ್ತನ್ಯಪಾನ ಮಾಡಿಸುತ್ತಾರೆ. ಇದಕ್ಕೆ ಯಾರೂ ತಕರಾರು ತೆಗೆಯುವುದಿಲ್ಲ. ಆದರೆ, ಸ್ವೇಚ್ಛೆಯ ಹೆಸರಿನಲ್ಲಿ ಕೆಲ ಮಹಿಳೆಯರು ಬಿಕಿನಿ, ಶಾರ್ಟ್ಸ್ ಗಳಲ್ಲಿ ಅಲೆದಾಡುವುದು ಏಕೆ ಚರ್ಚೆಗೀಡಾಗುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications