ಹರಿಯಾಣದಲ್ಲಿ ಬಿಜೆಪಿ ಅಭೂತ ಪೂರ್ವ ಗೆಲುವಿಗೆ ಇದೇ 'ತ್ರಿಮೂರ್ತಿ' ನಾಯಕರು ಕಾರಣ
ನವದೆಹಲಿ, ಅಕ್ಟೋಬರ್ 10: ಹರಿಯಾಣದ ಸದರಿ ವಿಧಾನಸಭಾ ಚುನಾವಣೆಯಲ್ಲಿ ಅನೇಕ ಸವಾಲುಗಳ ಮಧ್ಯೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಪ್ರಯಾಸದಾಯಕವಾಗಿ ಈಜಿ ದಡ ಸೇರಿದೆ. ದಶಕಗಳ ಆಡಳಿತ ವಿರೋಧಿ ಅಲೆ ನಡುವೆ ಪ್ರಚಂಡ ಬಹುಮತ ಗಳಿಸಲು ಈ 'ತ್ರಿಮೂರ್ತಿ'ಗಳ ಪಾತ್ರ ಮಹತ್ವದ್ದಾಗಿದೆ. ಇಲ್ಲಿನ ಗೆಲುವು ಬಿಜೆಪಿಗೆ ಮಹಾರಾಷ್ಟ್ರ, ಝಾರ್ಖಂಡ್ ಚುನಾವಣೆ ಮೇಲೂ ಪರಿಣಾಮ ಭೀರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಬಿಜೆಪಿ ಹರಿಯಾಣದಲ್ಲಿ ಅಚ್ಚರಿಯ ರೀತಿಯಲ್ಲಿ ಕಾಂಗ್ರೆಸ್ ವಿರುದ್ಧ ಗೆದ್ದು ಬೀಗಿದೆ. ನಿರುದ್ಯೋಗ, ರೈತರ ಪ್ರತಿಭಟನೆ, ಶಾಸಕರ ಅಸಮಾಧಾನ, ಕುಸ್ತಿಪಟುಗಳ ಧರಣಿಯಂತ ಹಲವು ಸವಾಲುಗಳನ್ನು ಸಮರ್ಥವಾಗಿ ಬಿಜೆಪಿ ನಿಭಾಯಿಸಿದೆ. ಆಡಳಿತ ವಿರೋಧಿ ಅಲೆ ಇದ್ದ ಕಾರಣ ಕಾಂಗ್ರೆಸ್ ತಾನು ಅಧಿಕಾರಕ್ಕೆ ಬರಲಿದೆ ಎಂದುಕೊಂಡಿತ್ತು. ಆದರೆ ಈ ತ್ರಿಮೂರ್ತಿಗಳ ನಿರಂತರ ಶ್ರಮದಿಂದ ಕಾಂಗ್ರೆಸ್ ಲೆಕ್ಕಾಚಾರ ತಲೆಕೆಳಗಾಯಿತು.

ಹೌದು, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಿರಿಯ ನಾಯಕರಾದ ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್, ಸತೀಶ್ ಪೂನಿಯಾ ಮತ್ತು ಬಿಪ್ಲಬ್ ದೇವ್. ಈ ಮೂವರು ಹರಿಯಾಣದಲ್ಲಿ ಬಿಜೆಪಿ ಮೂರನೇ ಭಾರಿಗೆ ಅಧಿಕಾರ ಹಿಡಿಯಲು ಕಾರಣಿಭೂತರಾಗಿದ್ದಾರೆ.
ಸೂಕ್ತ ಸಮಯಕ್ಕೆ ನಾಯಕತ್ವ ಬದಲಾವಣೆ
ರಾಜಕೀಯ ಬೆಳವಣಿಗೆ ಆಧರಿಸಿ ಸೂಕ್ತ ಸಮಯದಲ್ಲಿ ನಾಯಕತ್ವ ಬದಲಾವಣೆ ಮಾಡಲಾಯಿತು. ಪಕ್ಷವನ್ನು ತಳಮಟ್ಟದ ಸಂಘಟನೆಗೆ ಮುಂದಾಯಿತು. ಆರ್ಎಸ್ಎಸ್ ಕಾರ್ಯಕರ್ತರನ್ನು ಒಗ್ಗೂಡಿಸಿ ಗ್ರಾಮೀಣ ಭಾಗದ ಜನರನ್ನು ಸಂಪರ್ಕಿಸಲಾಯಿತು. ಎಲ್ಲ ಸಮುದಾಯದವರನ್ನು ಟಾರ್ಗೆಟ್ ಮಾಡಲಾಯಿತು. ಗ್ರಾಮೀಣ ಭಾಗದಲ್ಲಿ ನಿರಂತರ ಸಭೆ ನಡೆಸಿ ಸರ್ಕಾರ ಯೋಜನೆ ತಲುಪಿಸಲಾಯಿತು.
ಸವಾಲುಗಳ ಯಶಸ್ವಿ ನಿರ್ವಹಣೆ
ಹೀಗೆ ತಳಮಟ್ಟದಲ್ಲಿ ಪಕ್ಷ ಸಂಘಟಿಸುವಲ್ಲಿ ಯಶಸ್ವಿಯಾದ ಬಿಜೆಪಿಯು ತನ್ನ ಮೇಲಿನ ಆರೋಪಗಳಿಂದ ಮುಕ್ತಗೊಳಿಸುವಲ್ಲಿ ಒಂದ ಹಂತದಲ್ಲಿ ಯಶಸ್ವಿಯಾಗಿದೆ. ಈಗಾಗಲೇ ಧರ್ಮೇಂದ್ರ ಪ್ರಧಾನ್ ಅವರು ಓಡಿಶಾ ಪಕ್ಷ ಸಂಘಟನೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದ ಅವರು ಇಲ್ಲೂ ಸಹ ಪ್ರಮುಖ ಕೊಡುಗೆ ನೀಡಿದ್ದಾರೆ.
ಚುನಾವಣೆ ವೇಳೆ ಟಿಕೆಟ್ ಹಂಚಿಕೆ, ಪಕ್ಷ ಸೇರ್ಪಡೆ, ಜಾತಿ ಆಧಾರಿತ ಪ್ರಭಾವಿ ನಾಯಕರು, ಅದರಲ್ಲೂ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಣ್ಣಕ್ಕಿಳಿಸಿತು. ರೈತರ ಸಮಸ್ಯೆಗಳ ವಿಚಾರದಲ್ಲಿ ಹೆಚ್ಚು ಸೂಕ್ಷ್ಮವಾಗಿ ನಡೆದುಕೊಂಡು ಪರಿಣಾಮ ಇಂದು ಬಿಜೆಪಿ ಮರಳಿ ಅಧಿಕಾರ ಹಿಡಿಯುವಲ್ಲಿ ಸಫಲವಾಗಿದೆ.
ಚುನಾವಣೆಗೂ ಮೊದಲು ಕೇಂದ್ರ ಬಿಜೆಪಿಯು ಈ ಮೂವರನ್ನು ರಾಜ್ಯಕ್ಕೆ ಸೀಮಿತವಾಗಿ, ಗೆಲುವಿನ ಹಾದಿ ಸುಗಮ ಮಾಡಲು ಒಂದಷ್ಟು ಟಾಸ್ಕ್ ನೀಡಲಾಯಿತು. ತಮಗೆ ದೊರೆತ ಸವಾಲುಗಳನ್ನು ಲೀಲಾಜಾಲವಾಗಿ ನಿರ್ವಹಿಸಿದ ಪರಿಣಾಮವೇ ಇಂದು ಮೂರನೇ ಭಾರಿಗೆ ಬಿಜೆಪಿ ಹ್ಯಾಟ್ರಿಕ್ ಭಾರಿಸಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications