Vande Sadharan Train: ಬರಲಿವೆ 'ವಂದೇ ಸಾಧಾರಣ್' ರೈಲುಗಳು- ಏನೇನು ಸೌಲಭ್ಯ? ಯಾರಿಗೆಲ್ಲಾ ಅನುಕೂಲ? ಅಂಕಿಅಂಶ, ವಿವರ
ನವದೆಹಲಿ, ಸೆಪ್ಟೆಂಬರ್ 15: ಸೆಮಿ-ಹೈ ಸ್ಪೀಡ್ ರೈಲು 'ವಂದೇ ಭಾರತ್ ಎಕ್ಸ್ಪ್ರೆಸ್' ಭಾರತದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸಿದೆ. ವಂದೇ ಭಾರತ್ನಲ್ಲಿ ಒದಗಿಸಲಾದ ಸೌಲಭ್ಯಗಳು ಜನರಿಗೆ ಸುಖಕರ ಪ್ರಯಾಣವನ್ನು ನೀಡುತ್ತವೆ. ಈ ಹಿನ್ನೆಲೆಯಲ್ಲಿ ಜನರು ರೈಲಿನಲ್ಲಿ ಪ್ರಯಾಣಿಸಲು ಹೆಚ್ಚು ಉತ್ಸುಕರಾಗಿದ್ದಾರೆ. ಆದರೆ, ಹೆಚ್ಚಿನ ದರಗಳಿಂದಾಗಿ ಆರ್ಥಿಕವಾಗಿ ಹಿಂದುಳಿದವರು ಇನ್ನೂ ಈ ರೈಲಿನಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು 'ವಂದೇ ಸಾಧಾರಣ್' ರೈಲುಗಳನ್ನು ಪ್ರಾರಂಭಿಸಲು ಭಾರತೀಯ ರೈಲ್ವೆ ಮುಂದಾಗಿದೆ.
ವಂದೇ ಭಾರತ್ ಎಕ್ಸ್ಪ್ರೆಸ್ಗೆ ಪರ್ಯಾಯವಾಗಿ ಬಜೆಟ್ ಸ್ನೇಹಿ 'ವಂದೇ ಸಾಧಾರಣ್' ರೈಲುಗಳನ್ನು ಹೊರ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ರೈಲುಗಳು ಬಜೆಟ್ ಸ್ನೇಹಿಯಾಗಿವೆ. ಪ್ರಯಾಣಿಕರಿಗೆ ಸುಲಭ ಹಾಗೂ ಬಜೆಟ್ ಸ್ನೇಹಿ ಪ್ರಯಾಣವನ್ನು ಒದಗಿಸುವ ಗುರಿಯನ್ನು ಹೊಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ರೈಲುಗಳ ಹೆಸರಿನ ಬಗ್ಗೆ ಅಧಿಕೃತ ಮಾಹಿತಿ ಹೊರಬಂದಿಲ್ಲ. ಪ್ರಮುಖ ಮಾರ್ಗಗಳಲ್ಲಿ ವಂದೇ ಸಾಧಾರಣ್ ರೈಲುಗಳನ್ನು ಓಡಿಸಲು ಸಿದ್ಧತೆಗಳು ನಡೆಯುತ್ತಿವೆ. ವಲಸೆ ಕಾರ್ಮಿಕರು ರೈಲುಗಳಲ್ಲಿ ಹೆಚ್ಚು ಸಂಚರಿಸುತ್ತಾರೆ. ಈ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಭಾರೀ ಜನಸಂದಣಿ ಇರುತ್ತದೆ. ಇದಕ್ಕಾಗಿ ರೈಲ್ವೇ ಸಮೀಕ್ಷೆಯನ್ನೂ ನಡೆಸಿದೆ. ಈ ರೈಲಿನ ಸೌಲಭ್ಯಗಳ ತಿಳಿಯಬೇಕೆಂದರೆ ಈ ವರದಿ ಓದಿ.
ಒಟ್ಟು 24 ಕೋಚ್ಗಳು
ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ (ಐಸಿಎಫ್) ಈ ರೈಲನ್ನು ತಯಾರಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ರೈಲ್ವೆಯ ಅಧಿಕೃತ ಮೂಲಗಳು ತಿಳಿಸಿವೆ. ಇನ್ನು ಕೆಲವೇ ತಿಂಗಳುಗಳಲ್ಲಿ ಇದು ಸಿದ್ಧವಾಗಲಿದೆ. ಇದು ಎಲ್ಲಾ ಎರಡನೇ ದರ್ಜೆಯ ಕೋಚ್ಗಳನ್ನು ಹೊಂದಿರುತ್ತದೆ. ಆದ್ದರಿಂದ, ಅದರ ದರವೂ ಕಡಿಮೆ ಎಂದು ನಿರೀಕ್ಷಿಸಲಾಗಿದೆ. ಈ ರೈಲುಗಳಲ್ಲಿ ಒಟ್ಟು 24 ಎಲ್ಎಚ್ಬಿ ಕೋಚ್ಗಳಿದ್ದು, ಎರಡು ಎಂಜಿನ್ಗಳನ್ನು ಅಳವಡಿಸಲಾಗುವುದು ಎಂದು ತಿಳಿದುಬಂದಿದೆ.
ವಂದೇ ಭಾರತ್ ರೈಲುಗಳಂತಹ ಸೌಲಭ್ಯಗಳು
ರೈಲುಗಳು 24 ಎಲ್ಎಚ್ಬಿ ಕೋಚ್ಗಳನ್ನು ಹೊಂದಿದ್ದು, ಬಯೋ ವ್ಯಾಕ್ಯೂಮ್ ಟಾಯ್ಲೆಟ್ಗಳು ಇರಲಿವೆ. ಪ್ರಯಾಣಿಕರ ಮಾಹಿತಿ ವ್ಯವಸ್ಥೆ ಮತ್ತು ಚಾರ್ಜಿಂಗ್ ಪಾಯಿಂಟ್ಗಳಂತಹ ವೈಶಿಷ್ಟ್ಯಗಳೊಂದಿಗೆ ವಿನ್ಯಾಸಗೊಳಿಸಲಾಗುವುದು. ಜತೆಗೆ ಭದ್ರತೆಗಾಗಿ ಸಿಸಿಟಿವಿ ಕ್ಯಾಮೆರಾಗಳನ್ನೂ ಅಳವಡಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದಲ್ಲದೇ ಆಟೋಮ್ಯಾಟಿಕ್ ಡೋರ್ ಸಿಸ್ಟಂ ಕೂಡ ಇರಲಿದೆ. ಈ ರೈಲುಗಳ ದೊಡ್ಡ ವೈಶಿಷ್ಟ್ಯವೆಂದರೆ ಈ ರೈಲುಗಳ ವೇಗವು ಮೇಲ್ ಮತ್ತು ಎಕ್ಸ್ಪ್ರೆಸ್ಗಿಂತ ಹೆಚ್ಚಾಗಿರುತ್ತದೆ. ನಿಲುಗಡೆಗಳು ಸಹ ಕಡಿಮೆ ಇರುತ್ತದೆ. ವಂದೇ ಭಾರತ್ನಂತೆ, ಇದು ಸ್ವಯಂಚಾಲಿತ ಬಾಗಿಲುಗಳನ್ನು ಹೊಂದಿರುತ್ತದೆ.
ಬಡ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಈ ರೈಲುಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಇದರಿಂದಾಗಿ ಈ ರೈಲು ದರದ ದೃಷ್ಟಿಯಿಂದ ಅತ್ಯಂತ ಅಗ್ಗವಾಗಲಿದೆ. ಆದರೆ, ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಇಲ್ಲ. ಅಗ್ಗದ ದರದಲ್ಲಿ ಸಾಮಾನ್ಯ ಜನರ ಅಗತ್ಯಗಳನ್ನು ಪೂರೈಸಲು ರೈಲ್ವೆ ಹೊಸ ವಂದೇ ಭಾರತ್ ರೈಲುಗಳನ್ನು ವಿನ್ಯಾಸಗೊಳಿಸಿರುವುದು ಉತ್ತಮವೆಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.
-
Opinion - Kalyana Karnataka Train: ಕೇಂದ್ರ ಸಚಿವ ವಿ ಸೋಮಣ್ಣ ಅವರೇ ಕನ್ನಡಿಗರ ಸಂಕಷ್ಟ ಸ್ವಲ್ಪ ನೋಡಿ -
Gold Price Update: ಆಭರಣಪ್ರಿಯರೇ ಗಮನಿಸಿ, ಅಕ್ಷಯ ತೃತೀಯ ಮುನ್ನವೇ ಗಗನಕ್ಕೇರಿದ ಚಿನ್ನದ ದರ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications