ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ: ವಿರುದ್ಧವಾಗಿ ಮತ ಹಾಕಿದ ಇಬ್ಬರು ಸಂಸದರು ಇವರೇ ನೋಡಿ
ಲೋಕಸಭೆಯಲ್ಲಿ ಬಹು ನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಮಂಗಳವಾರ ಮತದಾನದ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು. 454 ಮತಗಳು ಮಸೂದೆಯ ಪರವಾಗಿ ಬಂದರೆ, ಎರಡು ಮತಗಳು ಮಾತ್ರ ಮಸೂದೆಗೆ ವಿರುದ್ಧವಾಗಿ ಬಂದವು.
2024ರ ಲೋಕಸಭಾ ಚುನಾವಣೆ ನಂತರ ಜನಗಣತಿ ಮತ್ತು ಡಿಲಿಮಿಟೇಶನ್ ನಡೆಯಲಿದ್ದು ಆ ನಂತರ ಮಸೂದೆಯನ್ನು ಜಾರಿ ಮಾಡಲಾಗುವುದು ಎಂದು ಸರ್ಕಾರ ಮಾಹಿತಿ ನೀಡಿದೆ. ಶೇ. 33ರಷ್ಟು ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆ ಇದಾಗಿದೆ.

ಮಹಿಳಾ ವಿಧೇಯಕದ ವಿರುದ್ಧ ಇಬ್ಬರು ಸಂಸದರು ಮಾತ್ರ ಮತ ಚಲಾಯಿಸಿದರು. ಇಬ್ಬರೂ ಕೂಡ ಎಐಎಂಐಎಂ ಪಕ್ಷದ ಸಂಸದರು ಎನ್ನುವುದು ಗಮನಾರ್ಹ. ಹೈದರಾಬಾದ್ ಲೋಕಸಭಾ ಕ್ಷೇತ್ರದ ಸಂಸದ ಅಸಾದುದ್ದೀನ್ ಓವೈಸಿ ಮತ್ತು ಔರಂಗಾಬಾದ್ ಲೋಕಸಭಾ ಕ್ಷೇತ್ರದ ಸಂಸದ ಇಮ್ತಿಯಾಜ್ ಜಲೀಲ್ ಸಯ್ಯದ್ ಮಹಿಳಾ ವಿಧೇಯಕದ ವಿರುದ್ಧ ಮತ ಚಲಾಯಿಸಿದ್ದಾರೆ.
ವಿರೋಧ ವ್ಯಕ್ತಪಡಿಸಿದ್ದ ಓವೈಸಿ
ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದರು. ಈಗ ಮಸೂದೆಗೆ ವಿರುದ್ಧವಾಗಿ ಮತ ಚಲಾಯಿಸುವ ಮೂಲಕ ತಮ್ಮ ವಿರೋಧವನ್ನು ತೋರಿಸಿದ್ದಾರೆ.
ಮಸೂದೆಯನ್ನು ವಿರೋಧಿಸಲು ಕಾರಣಗಳನ್ನು ನೀಡಿರುವ ಅವರು, ಮಹಿಳಾ ಮೀಸಲಾತಿ ಮಸೂದೆಯಲ್ಲಿ ಮುಸ್ಲಿಮರು ಮತ್ತು ಒಬಿಸಿ ಸಮುದಾಯಗಳಿಗೆ ಪ್ರಾತಿನಿಧ್ಯ ಇಲ್ಲದ ಕಾರಣ ವಿರುದ್ಧವಾಗಿ ಮತ ಚಲಾಯಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಂಗಳವಾರ ಮಸೂದೆ ಜಾರಿಗೆ ಮುನ್ನ ಎಎನ್ಐ ಜೊತೆ ಮಾತನಾಡಿದ್ದ ಅವರು, "ಸರ್ಕಾರ ಕಾನೂನನ್ನು ಮಾಡುತ್ತದೆ. ಭಾರತದಲ್ಲಿ ಈವರೆಗೆ 17 ಬಾರಿ ಲೋಕಸಭಾ ಚುನಾವಣೆ ನಡೆದಿವೆ. 8,990 ಸಂಸದರು ಇದುವರೆಗೂ ಆಯ್ಕೆಯಾಗಿದ್ದು, ಇದರಲ್ಲಿ ಕೇವಲ 520 ಸಂಸದರು ಮಾತ್ರ ಮುಸ್ಲಿಮರಾಗಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.
ಈ 520 ಮುಸ್ಲಿಂ ಸಂಸದರಲ್ಲಿ ಮಹಿಳಾ ಮುಸ್ಲಿಮರ ಸಂಖ್ಯೆ ಬೆರಳೆಣಿಕೆಯಷ್ಟೂ ಇಲ್ಲ. ಹಾಗಾದರೆ ಮಹಿಳೆಯರಿಗೆ ಪ್ರಾತಿನಿಧ್ಯ ಎಲ್ಲಿದೆ. ಈ ಮಸೂದೆಯಲ್ಲಿ ಮುಸ್ಲಿಂ ಮತ್ತು ಒಬಿಸಿ ಮಹಿಳೆಯರಿಗೆ ಯಾವುದೇ ಪ್ರಾತಿನಿಧ್ಯ ಇಲ್ಲ ಎಂದು ಅವರು ಆರೋಪಿಸಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications