Uttar Pradesh: ಕದಿಯಲು ಹೋಗಿ ನಿದ್ದೆಗೆ ಜಾರಿದ ಕಳ್ಳ: ಬೆಳಗ್ಗೆ ಎದ್ದಾಗ ಕಂಗಾಲು!
ಲಕ್ನೋ ಜೂನ್ 3: ಉತ್ತರಪ್ರದೇಶದ ರಾಜಧಾನಿ ಲಕ್ನೋದ ಇಂದಿರಾನಗರದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಕಳ್ಳತನ ಮಾಡಲು ಬಂದ ಕಳ್ಳನೊಬ್ಬ ನಿದ್ದೆಗೆ ಜಾರಿದ ಘಟನೆ ನಡೆದಿದೆ.
ಹೌದು... ಪಾನಮತ್ತ ಕಳ್ಳನೊಬ್ಬ ಕಳ್ಳತನ ಮಾಡುವ ಉದ್ದೇಶದಿಂದ ಬೀಗ ಹಾಕಿರುವ ಮನೆಗೆ ನುಗ್ಗಿ ಗೃಹೋಪಯೋಗಿ ವಸ್ತುಗಳನ್ನು ಸಂಗ್ರಹಿಸಿ ನಂತರ ಅಲ್ಲೇ ಮಲಗಿದ್ದಾನೆ. ಬೆಳಗ್ಗೆ ಎದ್ದಾಗ ಪೋಲೀಸರು ಎದುರು ನಿಂತಿರುವುದನ್ನು ಕಂಡು ಕಂಗಾಲಾಗಿದ್ದಾನೆ. ಕಪಿಲ್ ಕಶ್ಯಪ್ ಎಂಬ ಕಳ್ಳನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ವಾಸ್ತವವಾಗಿ ಈ ಘಟನೆ ಇಂದಿರಾ ನಗರ ಪ್ರದೇಶದಲ್ಲಿ ನಡೆದಿದೆ. ಶನಿವಾರ ರಾತ್ರಿ ಡಾ.ಸುನೀಲ್ ಪಾಂಡೆ ಅವರ ಮನೆಗೆ ಕಳ್ಳ ನುಗ್ಗಿದ್ದಾನೆ. ಈ ಮನೆಯಲ್ಲಿ ಡಾ.ಪಾಂಡೆ ಇರಲಿಲ್ಲ. ಇದರಿಂದಾಗಿ ಮನೆಗೆ ಬೀಗ ಹಾಕಲಾಗಿತ್ತು. ಶನಿವಾರ ಮಧ್ಯರಾತ್ರಿ ಕಳ್ಳ ಕಪಿಲ್ ಕಶ್ಯಪ್ ಕುಡಿದ ಅಮಲಿನಲ್ಲಿ ಬೀಗ ಮುರಿದು ಮನೆಗೆ ನುಗ್ಗಿದ್ದಾನೆ.
ಕಪಿಲ್ ಮನೆಯಲ್ಲಿಟ್ಟಿದ್ದ ಬೆಲೆಬಾಳುವ ವಸ್ತುಗಳನ್ನು ಸಂಗ್ರಹಿಸಿ ನಂತರ ಅಲ್ಲೇ ಮಲಗಿಬಿಟ್ಟಿದ್ದಾನೆ. ಬೆಳಗ್ಗೆ ಬೀಗ ಒಡೆದಿರುವುದನ್ನು ಕಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದಾಗ ಕಳ್ಳನಿಗೆ ಎಚ್ಚರವಾಗಿದೆ. ಆ ಕ್ಷಣದಲ್ಲಿಯೇ ಆತನನ್ನು ಬಂಧಿಸಲಾಗಿದೆ.
ಈಗಾಗಲೇ ಆರು ಕಳ್ಳತನ ಪ್ರಕರಣಗಳನ್ನು ಹೊಂದಿದ ಕಳ್ಳ
ಈ ಬಗ್ಗೆ ಮಾಹಿತಿ ಹಂಚಿಕೊಂಡ ಎಸಿಪಿ ಘಾಜಿಪುರ ವಿಕಾಸ್ ಜೈಸ್ವಾಲ್, ಆರೋಪಿ ಕಪಿಲ್ ವಿರುದ್ಧ ಈಗಾಗಲೇ ಆರು ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದಿರಾನಗರ ಬಿ ಬ್ಲಾಕ್ನಲ್ಲಿರುವ ಡಾ.ಸುನೀಲ್ ಪಾಂಡೆ ಎಂಬುವವರ ಬೀಗ ಹಾಕಿರುವ ಮನೆಗೆ ಕಳ್ಳನೊಬ್ಬ ಕಳ್ಳತನ ಮಾಡುವ ಉದ್ದೇಶದಿಂದ ನುಗ್ಗಿದ್ದನು.
ಕಳ್ಳತನ ಮಾಡಿದ ನಂತರ ಕಳ್ಳ ಅಲ್ಲೇ ಮಲಗಿದ್ದಾನೆ. ಭಾನುವಾರ ಬೆಳಗ್ಗೆ ನೆರೆಹೊರೆಯವರು ನೋಡಿದಾಗ ಮನೆಯ ಬಾಗಿಲು ತೆರೆದಿದ್ದು, ಬೀಗ ಮುರಿದಿರುವುದು ಕಂಡು ಬಂದಿದೆ. ಅವರು ಒಳಗೆ ಹೋದಾಗ ಒಬ್ಬ ಹುಡುಗ ಮಲಗಿದ್ದನ್ನು ನೋಡಿದ್ದಾರೆ. ಬಳಿಕ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಕಳ್ಳ ಕಪಿಲ್ನನ್ನು ಬಂಧಿಸಿದ್ದಾರೆ.
ಕಳ್ಳತನ ಮಾಡುವಾಗ ಪಾನಮತ್ತನಾಗಿದ್ದ ಕಳ್ಳ
ಎಸಿಪಿ ಪ್ರಕಾರ, ಸಮದಿಪುರ ಗ್ರಾಮದ ನಿವಾಸಿ ಕಪಿಲ್ ಕಶ್ಯಪ್ ಕಳ್ಳತನದ ಉದ್ದೇಶದಿಂದ ಪ್ರವೇಶಿಸಿದಾಗ ಕುಡಿದ ಅಮಲಿನಲ್ಲಿದ್ದ. ಕಳ್ಳತನ ಮಾಡಿ ಸ್ವಲ್ಪ ಹೊತ್ತು ನಿರಾಳವಾಗಿ ನಿದ್ದೆಗೆ ಜಾರಿದ್ದನು. ಮನೆಯ ವಸ್ತುಗಳನ್ನು ಕದಿಯಲು ಕಪಿಲ್ ಮನೆಯನ್ನು ಚೆಲ್ಲಾಪಿಲ್ಲಿ ಮಾಡಿದ್ದನು. ಕಳ್ಳತನದ ನಂತರ ಕಳ್ಳ ಮನೆಯಲ್ಲಿ ಮಲಗಿರುವ ಚಿತ್ರವೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications