ಬೀದಿಯಲ್ಲೇ ಹೆಂಡತಿಯನ್ನು ವಿವಸ್ತ್ರಗೊಳಿಸಿದ ಪತಿರಾಯǃ
ಹೈದ್ರಾಬಾದ್, ಅ. 23: ತನ್ನ ಕೃತ್ಯಗಳಿಗೆ ಸಹಕಾರ ನೀಡದ ಹೆಂಡತಿಯನ್ನು ವಿವಸ್ತ್ರಗೊಳಿಸಿದ ವಿಕೃತ ಪತಿಯೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಆಂಧ್ರ ಪ್ರದೇಶದ ತೆಲಂಗಾಣ ಜಿಲ್ಲೆಯಲ್ಲಿ ಇಂಥದ್ದೊಂದು ಅಮಾನವೀಯ ಘಟನೆ ನಡೆದಿದೆ.
ಕಳ್ಳತನವನ್ನೇ ಕಾಯಕ ಮಾಡಿಕೊಂಡಿದ್ದ ನಿಜಾಮಾಬಾದ್ ಜಿಲ್ಲೆಯ ನಾಗಾರಾಂನ ನರಸಿಂಹಲು ಮಚ್ಚು ತೋರಿಸಿ ಹೆಂಡತಿಯನ್ನು ಬೆದರಿಸಿ, ಆಕೆಯ ಬಟ್ಟೆ ಹರಿದು ಸುಮಾರು ಒಂದು ಕಿಮೀ ದೂರ ಎಳೆದುಕೊಂಡು ಹೋಗಿದ್ದಾನೆ. ತಾನು ಕದ್ದು ತಂದ ವಸ್ತುಗಳನ್ನು ಮಾರಾಟ ಮಾಡಲು ಹೆಂಡತಿ ಒಪ್ಪದಿದ್ದಕ್ಕೆ ಆಕೆಗೆ ಈ ಶಿಕ್ಷೆ ವಿಧಿಸಿದ್ದಾನೆ.[ಆರ್ಕಿಡ್ಸ್ ಶಾಲೆಯಲ್ಲಿ ಅತ್ಯಾಚಾರ, ಆರೋಪಿ ಎಲ್ಲಿ?]

ನರಸಿಂಹಲು ಕೃತ್ಯವನ್ನು ಕೆಲ ಯುವಕರು ತಡೆಯಲು ಮುಂದಾಗಿದ್ದಾರೆ. ಆದರೆ ತನ್ನ ಕೈಲಿದ್ದ ಮಚ್ಚಿನಿಂದ ಜನರನ್ನು ಹೆದರಿಸಿದ ಆತ ಹತ್ತಿರಕ್ಕೆ ಯಾರೂ ಬರದಂತೆ ನೋಡಿಕೊಂಡಿದ್ದಾನೆ. ಅವಮಾನ ತಾಳದ ಹೆಂಡತಿ ಲಕ್ಷ್ಮೀ ಕೆರೆಗೆ ಹಾರಿದ್ದಾಳೆ. ಆದರೂ ಬಿಡದ 'ಪತಿರಾಯ' ಹೆಂಡತಿಯನ್ನು ಅಲ್ಲಿಂದಲೂ ಎಳೆದು ತಂದಿದ್ದಾನೆ.
ಇತ್ತ ಪೊಲೀಸರಿಗೂ ಸುದ್ದಿ ಮಟ್ಟಿದ್ದು ಸ್ಥಳಕ್ಕೆ ಆಗಮಿಸುವುದರೊಳಗಾಗಿ ಸಾರ್ವಜನಿಕರು ನರಸಿಂಹಲುನನ್ನು ಹಿಡಿದು ಸರಿಯಾಗಿ ಧರ್ಮದೇಟು ನೀಡಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಕೊಲೆ ಪ್ರಯತ್ನದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.[ಆರ್ಕಿಡ್ಸ್ ಶಾಲೆ ಪ್ರಕರಣದ ಬಗ್ಗೆ ಎಂಎನ್ ರೆಡ್ಡಿ ಹೇಳಿದ್ದೇನು?]
ಕಳ್ಳತನ ಮಾಡಿದ ವಸ್ತುಗಳನ್ನು ಹೆಂಡತಿಯರ ಕೈಯಲ್ಲಿ ಮಾರಾಟ ಮಾಡಿಸುವುದು ಇದು ಹೊಸದೇನಲ್ಲ. ಈ ಭಾಗದ ಜನರ ಕಾಯಕವೇ ಕಳ್ಳತನ ಎಂಬಂತಾಗಿದೆ. ಮಾರಾಟ ಮಾಡಲು ವಿರೋಧಿಸಿದ್ದಕ್ಕೆ ಮಹಿಳೆ ಶಿಕ್ಷಗೆ ಒಳಗಾಗಿದ್ದಾಳೆ ಎಂದು ಯೆಲ್ಲಾರೆಡ್ಡಿ ಟೌನ್ ಪೊಲೀಸ್ ಇನ್ಸ್ ಪೆಕ್ಟರ್ ಹೇಳಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications