Tanker Fire: ಹೊತ್ತಿ ಉರಿದ ಇಂಧನ ಟ್ಯಾಂಕರ್! ವಂದೇ ಭಾರತ್ ಸೇರಿ 08 ರೈಲು ಸಂಚಾರ ರದ್ದು
Tanker Fire Incident: ಚೆನ್ನೈನಿಂದ ಬೆಂಗಳೂರಿಗೆ ಇಂಧನ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯು ಬೆಂಕಿಗೆ ಆಹುತಿಯಾದ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ. ಇದರಿಂದಾಗಿ ವಂದೇ ಭಾರತ್ ಸೇರಿದಂತೆ ವಿವಿಧ ರೈಲುಗಳ ಸಂಚಾರದಲ್ಲಿ ವಿಳಂಬವಾಯಿತು. ಸುಮಾರು ಎಂಟು ರೈಲುಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಿದೆ. ಅಸಲಿಗೆ ಆಗಿದ್ದೇನು, ಯಾವೆಲ್ಲ ರೈಲು ಸಂಚಾರದಲ್ಲಿ ತೊಂದರೆ ಆಯಿತು? ಎಂಬ ಮಾಹಿತಿ ಇಲ್ಲಿದೆ.
ಇಂಧನ ಹೊತ್ತು ಬರುತ್ತಿದ್ದ ಲಾರಿಯೊಂದು ತಮಿಳುನಾಡಿನ ಚೆನ್ನೈನಿಂದ ಬೆಂಗಳೂರಿಗೆ ರಸ್ತೆ ಮಾರ್ಗವಾಗಿ ಬರುತ್ತಿತ್ತು. ಈ ವೇಳೆ ತಿರುವಳ್ಳೂರು ರೈಲು ನಿಲ್ದಾಣದ ಬಳಿ ಬರುತ್ತಿದ್ದಂತೆ ಇಂದು ಬೆಳಗಿನ ಜಾವ ದಿಢೀರ್ ಬೆಂಕಿ ಕಾಣಿಸಿಕೊಂಡಿತು. ನೋಡ ನೋಡುತ್ತಿದ್ದಂತೆ ಆಕಾಶದೆತ್ತರಕ್ಕೆ ದಟ್ಟ ಹೊಗೆ ಆವರಿಸಿಕೊಂಡಿತ್ತು. ಇದರಿಂದ ಪಕ್ಕದಲ್ಲೇ ಇದ್ದ ರೈಲ್ವೆ ಹಳಿ ಸುತ್ತಮುತ್ತ ಹೊಗೆ ತುಂಬಿಕೊಂಡ ಕಾರಣ, ರೈಲು ಸಂಚಾರಕ್ಕೆ ತೊಂದರೆ ಉಂಟಾಯಿತು. ಸುತ್ತಮುತ್ತಲಿನ ವಾಹನಗಳ ಸವಾರರು ಹಾಗೂ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಉಂಟಾಯಿತು.

ಈ ಘಟನೆಯಿಂದ ಬೆಂಗಳೂರು ಮಾರ್ಗವಾಗಿ ಮೈಸೂರು ಮತ್ತು ಕೊಯಮತ್ತೂರಿಗೆ ತೆರಳುವ ಪ್ರೀಮಿಯಂ ವಂದೇ ಭಾರತ್ ಮತ್ತು ಶತಾಬ್ದಿ ಎಕ್ಸ್ಪ್ರೆಸ್ಗಳು ಸೇರಿದಂತೆ ಕನಿಷ್ಠ ಎಂಟು ರೈಲುಗಳ ಸಂಚಾರ ರದ್ದಾಗಿದೆ ಎಂದು ದಕ್ಷಿಣ ರೈಲ್ವೆ ವಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಟ್ಯಾಂಕರ್ ಲಾರಿ ಆಗಿದ್ದರಿಂದ ಸೂಕ್ತ ಅಗತ್ಯ ಎಚ್ಚರಿಕೆ ವಹಿಸಲಾಗಿದೆ. ಲಾರಿಯಲ್ಲಿ ಬೆಂಕಿ, ದಟ್ಟ ಹೊಗೆ ಕಾಣಿಸುತ್ತಿದ್ದಂತೆ ರೈಲ್ವೆ ಅಧಿಕಾರಿಗಳೊಂದಿಗೆ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳನ್ನು ತಕ್ಷಣವೇ ನಿಯೋಜಿಸಲಾಯಿತು. ಸ್ಥಳದಲ್ಲಿ ಪರಿಸ್ಥಿತಿಯನ್ನು ಸಕ್ರಿಯವಾಗಿ ನಿರ್ವಹಿಸಲಾಗುತ್ತಿದೆ. ರೈಲುಗಳ ಪುನಃಸ್ಥಾಪನೆ ಕಾರ್ಯ ಪ್ರಗತಿಯಲ್ಲಿದೆ, ಮತ್ತು ಸಾಮಾನ್ಯ ರೈಲು ಕಾರ್ಯಾಚರಣೆಗಳು ಆದಷ್ಟು ಬೇಗ ಪುನರಾರಂಭಗೊಳ್ಳುತ್ತವೆ ಎಂದು ದಕ್ಷಿಣ ರೈಲ್ವೆಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಯಾವ ಕಾರಣಕ್ಕೆ ಟ್ಯಾಂಕರ್ ಲಾರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿತು, ಅದಕ್ಕೆ ಕಾರಣವೇನು? ಎಂಬೆಲ್ಲ ಮಾಹಿತಿಗಳು ತಿಳಿಯಬೇಕಿದೆ. ಇನ್ನೂ ಈ ಘಟನೆಯಿಂದಾಗಿ ಎಂಟು ರೈಲುಗಳಲ್ಲಿ ಬರುತ್ತಿದ್ದ ಸಾವಿರಾರು ಪ್ರಯಾಣಿಕರಿಗೆ ಕೊಂಚ ಅಡಚಣೆ ಆಯಿತು. ರೈಲ್ವೆ ಅಧಿಕಾರಿಗಳ ಮಾಹಿತಿ ಮೇರೆಗೆ ಹಿಂದಿನ ರೈಲು ನಿಲ್ದಾಣ, ಮಾರ್ಗ ಮಧ್ಯದಲ್ಲೇ ರೈಲುಗಳು ಗಂಟೆಗಳ ಕಾಲ ಕಾಯಬೇಕಾಯಿತು. ಇಂದು ಮಧ್ಯಾಹ್ನದ ಹೊತ್ತಿಗೆ ರೈಲುಗಳ ಎಂದಿನಂತೆ ಸಂಚಾರ ನಿರೀಕ್ಷಿಸಬಹುದಾಗಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications