Maharashtra Assembly Election 2024: ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಈ ಕಾರಣಕ್ಕೆ ಸಿಕ್ತು ಬಿಗ್ಬೂಸ್ಟ್, ಕಾಂಗ್ರೆಸ್ಗೆ ಶಾಕ್
ಮುಂಬೈ, ಅಕ್ಟೋಬರ್ 11: ಮಹಾರಾಷ್ಟ್ರದಲ್ಲಿ ಇದೀಗ ಬಿಜೆಪಿ ಹಾಗೂ ಬಿಜೆಪಿ ಮಿತ್ರ ಪಕ್ಷಗಳು ಫುಲ್ ಆಕ್ಟಿವ್ ಆಗಿವೆ. ಅಷ್ಟೇ ಅಲ್ಲ ಬಿಜೆಪಿ ಸೇರಿದಂತೆ ಅದರ ಮಿತ್ರಪಕ್ಷಗಳು ಜಿಗಿಜಿಯುತ್ತಿವೆಯಂತೆ. ಮಹಾರಾಷ್ಟ್ರದಲ್ಲಿ ಇನ್ನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಅಲ್ಲದೇ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಬಿಗ್ ಫೈಟ್ ಕೊಡ್ತಿವೆ. ಇಷ್ಟಾದರೂ ಬಿಜೆಪಿ ಫುಲ್ ಕೂಲ್ ಕೂಲ್ ಮೂಡ್ನಲ್ಲಿ ಇದ್ಯಂತೆ ಇದಕ್ಕೆ ಕಾರಣವೇನು ಎನ್ನುವ ವಿವರ ಇಲ್ಲಿದೆ.
ಈಚೆಗೆ ನಡೆದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಕಾಡೆ ಮಲಗಿದೆ. ಬಿಜೆಪಿ ಮೂರನೇ ಬಾರಿ ಹರಿಯಾಣದಲ್ಲಿ ಅಧಿಕಾರದ ಗದ್ದುಗೆ ಹೇರಿದೆ. ಈ ಬಾರಿ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಅಧಿಕಾರಕ್ಕೆ ಹೇರುವ ಸಾಧ್ಯತೆ ಅತ್ಯಂತ ವಿರಳ ಎನ್ನಲಾಗಿತ್ತು. ಈ ಎಲ್ಲ ಲೆಕ್ಕಾಚಾರವೂ ತಲೆಕೆಳಗಾಗಿದೆ. ಈ ಬೆಳವಣಿಗೆ ಮಹಾರಾಷ್ಟ್ರದ ಮೈತ್ರಿಕೂಟ ಸರ್ಕಾರದಲ್ಲಿ ಹೊಸ ಹುಮ್ಮಸ್ಸು ಮೂಡಿಸಿದ್ದು, ಬಿಜೆಪಿ ಹಾಗೂ ಮೈತ್ರಿ ಪಕ್ಷಗಳು ಚಿಲ್ ಮೂಡ್ನಲ್ಲಿವೆಯಂತೆ.

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟವು ಅಧಿಕಾರ ನಡೆಸುತ್ತಿದೆ. ಬಿಜೆಪಿ ಪ್ರಧಾನ ಪಕ್ಷವಾಗಿದೆ. ಹೀಗಾಗಿ, ಹರಿಯಾಣದ ಚುನಾವಣೆ ಫಲಿತಾಂಶ ಮಹಾರಾಷ್ಟ್ರದ ಮೇಲೂ ಪರಿಣಾಮ ಬೀರಲಿದೆ ಎನ್ನುವ ಸಂತೋಷದಲ್ಲಿ ಬಿಜೆಪಿ ಬಣ ಇದೆ. ಹರಿಯಾಣದ ಹ್ಯಾಟ್ರಿಕ್ ಗೆಲುವಿನ ನಂತರ ಬಿಜೆಪಿಗೆ ಹೊಸ ಶಕ್ತಿ ಬಂದಂತಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ನಿರೀಕ್ಷಿತ ಪ್ರಮಾಣದ ಸೀಟುಗಳನ್ನು ಗೆದ್ದಿರಲಿಲ್ಲ. ಇದೀಗ ಹರಿಯಾಣದ ಗೆಲುವು ಬಿಜೆಪಿ ಪಾಳಯದಲ್ಲಿ ಹೊಸ ಚೈತನ್ಯವನ್ನೇ ಮೂಡಿಸಿದೆ. ಇದಕ್ಕೆ ಮಹಾರಾಷ್ಟ್ರದ ಬಿಜೆಪಿ ನಾಯಕರ ನೀಡುತ್ತಿರುವ ಹೇಳಿಕೆಗಳೇ ಸಾಕ್ಷಿ. ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನೇತೃತ್ವದಲ್ಲಿ ಉತ್ತಮ ಆಡಳಿತ ನೀಡಲಾಗಿದೆ. ನಕಲಿ ನಿರೂಪಣೆ ಹಾಗೂ ಅಪಪ್ರಚಾರ ವರ್ಕ್ಔಟ್ ಆಗಲ್ಲ ಎಂದು ಬಿಜೆಪಿ ಹಾಗೂ ಮಿತ್ರ ಪಕ್ಷಗಳು ಹೇಳಿವೆ.
ಇನ್ನು ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ಒಕ್ಕೂಟವು ಹರಿಯಾಣದ ಚುನಾವಣಾ ಫಲಿತಾಂಶವು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮೇಲೆ ಯಾವುದೇ ಪರಿಣಾಮವನ್ನು ಬೀರುವುದಿಲ್ಲ ಎಂದು ಪ್ರತಿಪಾದಿಸಿವೆ. ಈಗಾಗಲೇ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳ ಒಕ್ಕೂಟವು ಸೀಟು ಹಂಚಿಕೆ ವಿಷಯವನ್ನು ಒಂದು ಹಂತಕ್ಕೆ ತೆಗೆದುಕೊಂಡು ಹೋಗಿವೆ. ಮಹಾ ವಿಕಾಸ್ ಅಘಾಡಿ ಅಂತಿಮ ಸುತ್ತಿನ ಮಾತುಕತೆಯನ್ನು ಮುಂದುವರಿಸಿದೆ. ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರು ಚುನಾವಣೆಗೆ ಮುನ್ನವೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಬೇಕು (ಮೈತ್ರಿ ಪಕ್ಷದಿಂದ) ಎಂದು ಹೇಳಿದ್ದಾರೆ. ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶವು ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದ ಮೇಲೆ ಪರಿಣಾಮ ಬೀರಲಿದೆ ಎನ್ನುವ ವಾದವನ್ನು ಅವರು ತಳ್ಳಿ ಹಾಕಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಉತ್ತಮ ಪೈಪೋಟಿ: ಇನ್ನು ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಬಿಜೆಪಿ ಹಾಗೂ ಅದರ ಮೈತ್ರಿ ಪಕ್ಷಗಳಿಗೆ ಭಾರೀ ಪೈಪೋಟಿಯನ್ನೇ ನೀಡಿದ್ದವು. ಮಹಾರಾಷ್ಟ್ರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅಲ್ಪ ಪ್ರಮಾಣದ ಆಡಳಿತ ವಿರೋಧಿ ಅಲೆ ಇದೆ. ವಿವಿಧ ಸಮುದಾಯಗಳು ಮೀಸಲಾತಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆದಿವೆ. ಛತ್ರಪತಿ ಶಿವಾಜಿ ಪ್ರತಿಮೆ ಕುಸಿತವಾಗಿರುವುದು ಸಹ ಚುನಾವಣೆ ವಿಷಯವಾಗಿದೆ. ಬಿಜೆಪಿ - ಕಾಂಗ್ರೆಸ್ನ ಮೈತ್ರಿ ಪಕ್ಷಗಳಲ್ಲಿ ವೈಮನಸ್ಸು ಇದೆ. ಈ ಎಲ್ಲ ಕಾರಣಗಳಿಂದ ಮಹಾರಾಷ್ಟ್ರ ಚುನಾವಣೆ ಕುತೂಹಲ ಮೂಡಿಸಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications