ರಾಹುಲ್ ಅವರು ತಂತ್ರಜ್ಞಾನ ಅನಕ್ಷರಸ್ಥ : ಸಂಬಿತ್ ಪಾತ್ರ
ಬೆಂಗಳೂರು, ಮಾರ್ಚ್ 26 : ರಾಹುಲ್ ಗಾಂಧಿಯವರು ತಂತ್ರಜ್ಞಾನ ಅನಕ್ಷರಸ್ಥ. ಡೇಟಾ ಅನಾಲಿಸಿಸ್ ಎಂಬುದು ಬೇಹುಗಾರಿಕೆ ಅಲ್ಲ ಎಂಬುದು ಅವರಿಗೆ ಗೊತ್ತಿಲ್ಲ. ಈ ಹೊಸ ಜಮಾನಾದಲ್ಲಿ ರಾಹುಲ್ ಅವರಿಗೆ ಇದೆಲ್ಲ ಅರ್ಥವಾಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಅವರು ವ್ಯಂಗ್ಯವಾಡಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಪ್ರಧಾನಿ ನರೇಂದ್ರ ಮೋದಿ ಅವರು ಕೋಟ್ಯಂತರ ಜನರ ಖಾಸಗಿ ಮಾಹಿತಿಯನ್ನು ತಮ್ಮ ನಮೋ ಆಪ್ ಮೂಲಕ ಸಂಗ್ರಹಿಸಿ ಬೇಹುಗಾರಿಕೆ ನಡೆಸುತ್ತಿದ್ದಾರೆ. ಅವರು 13 ಲಕ್ಷ ಎನ್ಸಿಸಿ ವಿದ್ಯಾರ್ಥಿಗಳಿಂದಲೂ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಕ್ಕೆ ಪ್ರತಿಯಾಗಿ ಸಂಬಿತ್ ಅವರು ಮೇಲಿನಂತೆ ವ್ಯಾಖ್ಯಾನ ಮಾಡಿದ್ದಾರೆ.
ನಾಳೆ ರಾಹುಲ್ ಗಾಂಧಿಯವರು ಮತ್ತೊಂದು ಟ್ವೀಟ್ ಮಾಡುತ್ತಾರೆ ನೋಡುತ್ತಿರಿ. ನಮೋ ಆಪ್ ಅನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್(ಇವಿಎಂ)ಗೆ ಜೋಡಿಸಲಾಗಿದೆ, ಮತ್ತು ಈ ಮೂಲಕ ಇವಿಎಂ ಅನ್ನು ತಿರುಚಲಾಗುತ್ತದೆ ಎಂದು ಅವರು ಟ್ವೀಟ್ ಮಾಡುತ್ತಾರೆ ಎಂದು ಸಂಬಿತ್ ಪಾತ್ರ ಮಾತಿನ ಚಾಟಿ ಬೀಸಿದ್ದಾರೆ.

ನಮೋ ಆಪ್ ಎಂಬುದು ಸಂವಾದಿಸುವ ಒಂದು ಮಾಧ್ಯಮ. ನರೇಂದ್ರ ಮೋದಿಯವರು ಈ ಆಪ್ ಮೂಲಕ ಕಾರ್ಯಕರ್ತರು, ಬಿಜೆಪಿ ಬೆಂಬಲಿಗರೊಂದಿಗೆ ಸಂವಾದ ನಡೆಸುತ್ತಾರೆ. ಆದರೆ, ರಾಹುಲ್ ಅವರು ಹೇಳುತ್ತಾರೆ, ನಮೋ ಆಪ್ ಮೂಲಕ ಸಾರ್ವಜನಿಕರ ಮಾಹಿತಿಯನ್ನು ಸಂಗ್ರಹಿಸಿ ಅಮೆರಿಕಾದ ಕಂಪನಿಗೆ ಕಳುಹಿಸುತ್ತಾರಂತೆ. ಇದು ರಾಹುಲ್ ಅವರ ತಾಂತ್ರಿಕ ಅಜ್ಞಾನದ ಕ್ಲಾಸಿಕ್ ಕೇಸ್ ಎಂದು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಹುಲ್ ಗಾಂಧಿಯವರು ತಂತ್ರಜ್ಞಾನಕ್ಕೆ ಸಂಬಂಧಿಸಿದ ಯಾವ ವಿಷಯವನ್ನೂ ಅರ್ಥ ಮಾಡಿಕೊಳ್ಳುವುದಿಲ್ಲ. ಈ ರಾಹುಲ್ ಅವರೇ ವಿದೇಶಿ ನೆಲದಲ್ಲಿ, ದೇಶದ ಎಲ್ಲ ಎಂಆರ್ಐ ಮಷೀನುಗಳನ್ನು ಜೋಡಿಸಿದರೆ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಯನ್ನು ಎಬ್ಬಿಸಬಹುದು ಎಂದು ಹೇಳಿದ್ದರು. ಈ ರಾಹುಲ್ ಅವರೇ ಆಲೂಗಡ್ಡೆ ಮಷೀನಿನ ಬಗ್ಗೆ ಮಾತನಾಡಿದ್ದರು. ಅವರು ತಾಂತ್ರಿಕವಾಗಲಿ, ವೈಜ್ಞಾನಿಕವಾಗಲಿ ತುಂಬಾ ಹಿಂದಿದ್ದಾರೆ ಎಂದು ಸಂಬಿತ್ ಹೇಳಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications