ಗಾನಕೋಗಿಲೆಗೆ ಶಾರೂಖ್ ಖಾನ್ ಅಂತಿಮ ನಮನ ರೀತಿಗೆ ನೆಟ್ಟಿಗರು ಫಿದಾ
ನವದೆಹಲಿ, ಫೆಬ್ರವರಿ 7:ಗಾನ ಕೋಗಿಲೆ ಭಾರತರತ್ನ ಲತಾ ಮಂಗೇಶ್ಕರ್ ಅವರ ಅಂತಿಮ ಕ್ರಿಯೆಯಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟ ಶಾರೂಖ್ ಖಾನ್ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲತಾ ಮಂಗೇಶ್ಕರ್ ಅವರ ಪಾರ್ಥೀವ ಶರೀರದ ಮುಂದೆ ಶಾರೂಖ್ ಖಾನ್ ಹಾಗೂ ಅವರ ಮ್ಯಾನೇಜರ್ ಪೂಜಾ ದದ್ಲಾನಿ ಅವರು ನಮಿಸುತ್ತಿರುವ ಚಿತ್ರ ಈಗ ಸಾಕಷ್ಟು ಪ್ರಶಂಸೆಗೆ ಕಾರಣವಾಗಿದೆ.
ಈ ಚಿತ್ರವನ್ನು ನೋಡಿ ಇದು ನಿಜವಾದ ಭಾರತ ಈ ಮೂಲಕ ಶಾರೂಖ್ ಖಾನ್ ಸಾಕಷ್ಟು ಗೌರವ ಸಂಪಾದಿಸಿದ್ದಾರೆ, ಇನ್ನಷ್ಟು ಪ್ರೀತಿಗೆ ಪಾತ್ರರು ಎಂದು ನೆಟ್ಟಿಗರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

ಸಾವಿರಾರು ಮಂದಿ ಅವರ ಅಂತಿಮ ದರ್ಶನ ಪಡೆದಿದ್ದರು. ದೇಶದ ಪ್ರಧಾನಿ ಸೇರಿದಂತೆ ರಾಜಕೀಯ ಮುಖಂಡರು, ಚಿತ್ರರಂಗದ ಕಲಾವಿದರು, ಕ್ರಿಕೆಟ್ ದಿಗ್ಗಜರು, ಕ್ರೀಡಾಪಟುಗಳು ಹೀಗೆ ಹಲವರು ಶಿವಾಜಿ ಪಾರ್ಕ್ ಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದರು.
ತಮ್ಮ ಮ್ಯಾನೇಜರ್ ಪೂಜಾ ದದ್ಲಾನಿ ಜೊತೆ ಶಿವಾಜಿ ಪಾರ್ಕ್ ಗೆ ಬಂದ ಶಾರೂಕ್ ಖಾನ್ ಎಲ್ಲರಂತೆ ಪುಷ್ಪಗುಚ್ಛವಿರಿಸಿ ಎರಡೂ ಕೈಗಳನ್ನು ಮೇಲೆತ್ತಿ ದುವಾ ಮಾಡಿದ್ದರು(ಇಸ್ಲಾಂ ಧರ್ಮದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸುವ ರೀತಿ), ಅವರ ಮ್ಯಾನೇಜರ್ ಪೂಜಾ ದಾದ್ಲಾನಿ ಹಿಂದೂ ಸಂಪ್ರದಾಯದ ಪ್ರಕಾರ ಕೈಮುಗಿದಿದ್ದರು. ಇದು ಟ್ವಿಟ್ಟರ್, ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ.
ಲತಾ ಮಂಗೇಶ್ಕರ್ ಅವರು ಭಾನುವಾರ ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ನಿಧನ ಹೊಂದಿದರು. ಮುಂಬೈನ ಖಾಸಗಿ ಆಸ್ಪತ್ರೆ ವೈದ್ಯರು ಈ ವಿಚಾರವನ್ನು ಅಧಿಕೃತ ಮಾಡಿದರು. ಕೊವಿಡ್ ಹಾಗೂ ನ್ಯುಮೋನಿಯಾದಿಂದ ಅವರು ಬಳಲುತ್ತಿದ್ದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಹೀಗಾಗಿ, ಲತಾ ದೇಹ ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರು ನಿಧನ ಹೊಂದಿದರು.
ಆ ಬಳಿಕ ಲತಾ ಮಂಗೇಶ್ಕರ್ ದೇಹವನ್ನು ಮುಂಬೈನಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು. ಆ ಬಳಿಕ ವಿಶೇಷ ವಾಹನದಲ್ಲಿ ಲತಾ ಮಂಗೇಶ್ಕರ್ ಪಾರ್ಥಿವ ಶರೀರವನ್ನು ಶಿವಾಜಿ ಪಾರ್ಕ್ಗೆ ಕರೆತರಲಾಯಿತು. ದಾರಿಯುದ್ದಕ್ಕೂ ಲತಾ ಅವರ ಅಪಾರ ಅಭಿಮಾನಿಗಳು ವಾಹನವನ್ನು ಹಿಂಬಾಲಿಸಿದರು. ಇಡೀ ವಾಹನವನ್ನು ಹೂವಿನಿಂದ ಅಲಂಕರಿಸಲಾಗಿತ್ತು. ದಾರಿಯುದ್ದಕ್ಕೂ ಲತಾ ಅವರನ್ನು ಬೀಳ್ಕೊಡಲು ಅಪಾರ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದರು. ನೆಚ್ಚಿನ ಗಾಯಕಿಗೆ ದುಃಖದ ವಿದಾಯ ಹೇಳಿದರು.
8 ಅರ್ಚಕರು ಲತಾ ಮಂಗೇಶ್ಕರ್ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಲತಾ ಸಹೋದರ ಹೃದಯನಾಥ್ ಅವರ ಮಗ ವಿಧಿ ವಿಧಾನಗಳು ಪೂರ್ಣಗೊಳಿಸಿದರು. ಸಾಕಷ್ಟು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾದರು. ಎಲ್ಲರೂ ಲತಾಗೆ ದುಃಖದ ವಿದಾಯ ಹೇಳಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications