ಐಟಿ ನಿಯಮಗಳು ವಿಷಯವನ್ನು ಸಮರ್ಥಿಸಿಕೊಳ್ಳಲು ಯಾವುದೇ ಅವಕಾಶ ನೀಡುವುದಿಲ್ಲ: ಬಾಂಬೆ ಹೈಕೋರ್ಟ್
ಮುಂಬೈ, ಜುಲೈ. 13: ಸಾಮಾಜಿಕ ಮಾಧ್ಯಮದಲ್ಲಿ ನಕಲಿ, ಸುಳ್ಳು ಮತ್ತು ದಾರಿತಪ್ಪಿಸುವ ಮಾಹಿತಿಯ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಅಧಿಕಾರ ನೀಡುವ ಇತ್ತೀಚೆಗೆ ತಿದ್ದುಪಡಿ ಮಾಡಲಾದ ಮಾಹಿತಿ ತಂತ್ರಜ್ಞಾನ ನಿಯಮಗಳು "ಒಂದು ರೀತಿಯ ಆದೇಶ" ಎಂದು ಬಾಂಬೆ ಹೈಕೋರ್ಟ್ ಗುರುವಾರ ಹೇಳಿದೆ. ಈ ನಿಯಮಗಳು ವಿಷಯವನ್ನು ಸಮರ್ಥಿಸಲು ಅಥವಾ ವಿವರಿಸಲು ಅವಕಾಶವನ್ನು ನೀಡುವುದಿಲ್ಲ ಎಂದಿದೆ.
ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ನೀಲಾ ಗೋಖಲೆ ಅವರ ವಿಭಾಗೀಯ ಪೀಠವು, ಮಹಾರಾಷ್ಟ್ರದ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಉಲ್ಲೇಖಿಸಿ, ತಿದ್ದುಪಡಿ ಮಾಡಿದ ನಿಯಮಗಳ ಅಡಿಯಲ್ಲಿ ಸರ್ಕಾರಿ ವ್ಯವಹಾರ ಯಾವುದು ಎಂದು ತಿಳಿಯಲು ಪ್ರಯತ್ನಿಸಿದೆ.
ತಿದ್ದುಪಡಿ ಮಾಡಲಾದ ನಿಯಮಗಳ ಅಡಿಯಲ್ಲಿ, ಸರ್ಕಾರವು ಸರ್ಕಾರಿ ವ್ಯವಹಾರಕ್ಕೆ ಸಂಬಂಧಿಸಿದ ವಿಷಯಕ್ಕಾಗಿ ಮಾತ್ರ 'ಲೋಕೋ ಪೇರೆಂಟಿಸ್' (ಆಡಳಿತಾತ್ಮಕ ಪ್ರಾಧಿಕಾರದ ನಿಯಂತ್ರಣ ಅಥವಾ ಮೇಲ್ವಿಚಾರಣೆ) ಅನ್ನು ಏಕೆ ತೆಗೆದುಕೊಂಡಿದೆ. ಜೊತೆಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಪ್ರತಿಯೊಂದು ಮಾಹಿತಿ ಅಥವಾ ವಿಷಯಕ್ಕೆ ಏಕೆ ಅನ್ವಯಿಸುವುದಿಲ್ಲ ಎಂದು ಪೀಠವು ಪ್ರಶ್ನಿಸಿದೆ.

ತಿದ್ದುಪಡಿ ಮಾಡಿರುವ ಐಟಿ ನಿಯಮಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ, ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು ಅಸೋಸಿಯೇಷನ್ ಆಫ್ ಇಂಡಿಯನ್ ಮ್ಯಾಗಜೀನ್ಗಳು ನಿಯಮಗಳ ವಿರುದ್ಧ ಹೈಕೋರ್ಟ್ನಲ್ಲಿ ಅರ್ಜಿಗಳನ್ನು ಸಲ್ಲಿಸಿವೆ. ಜೊತೆಗೆ ಈ ನಿಯಮಗಳು ಅನಿಯಂತ್ರಿತ, ಅಸಂವಿಧಾನಿಕ ಮತ್ತು ಇವು ನಾಗರಿಕರ ಮೂಲಭೂತ ಹಕ್ಕುಗಳ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತವೆ ಎಂದು ಆರೋಪಿಸಿದ್ದಾರೆ.
ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಪರ ವಕೀಲ ಶದನ್ ಫರಾಸತ್ ಅವರು ವಾದ ಮಂಡಿಸಿದ ಪೀಠ, ನಿಯಮಗಳ ಅಡಿಯಲ್ಲಿ ಸರ್ಕಾರಿ ವ್ಯವಹಾರ ಎಂದರೇನು ಎಂದು ಕೇಳಿದೆ. "ಉದಾಹರಣೆಗೆ ಮಹಾರಾಷ್ಟ್ರದ ಪ್ರಸ್ತುತ ರಾಜಕೀಯ ವಾತಾವರಣವನ್ನು ತೆಗೆದುಕೊಳ್ಳಿ. ಒಂದು ಪಕ್ಷದ ಮೇಲೆ ಇನ್ನೊಂದು ಪಕ್ಷ ಹೋಗುತ್ತಿದೆ. ಇದು ಸರ್ಕಾರದ ವ್ಯವಹಾರವೇ..?" ಎಂದು ನ್ಯಾಯಮೂರ್ತಿ ಗೌತಮ್ ಪಟೇಲ್ ಪ್ರಶ್ನಿಸಿದ್ದಾರೆ.
ಹಗುರವಾದ ಧಾಟಿಯಲ್ಲಿ ಮಾತನಾಡಿ ನ್ಯಾಯಮೂರ್ತಿ ಗೌತಮ್ ಪಟೇಲ್, "ಸರ್ಕಾರವು ನಾಗರಿಕರ ಭದ್ರತೆಯನ್ನು ಒದಗಿಸುವ ಮೊಬೈಲ್ ಅಪ್ಲಿಕೇಶನ್ ಕವಚವನ್ನು ಹೊಂದಿದೆ. ತಿದ್ದುಪಡಿಗೊಂಡ ಐಟಿ ನಿಯಮಗಳು ನಿಮ್ಮ ಕವಚವನ್ನು (ರಕ್ಷಣಾತ್ಮಕ ಕವರ್) ತೆಗೆದುಹಾಕುತ್ತಿದೆ. ತಿದ್ದುಪಡಿ ಮಾಡಿದ ನಿಯಮಗಳು ಡಿಜಿಟಲ್ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳಿಗೆ ಸೀಮಿತವಾಗಿದೆಯೇ? ಮುದ್ರಣ ಮಾಧ್ಯಮಕ್ಕೆ ವಿಸ್ತರಿಸಲಿದೆಯೇ? ಎಂದು ನ್ಯಾಯಾಲಯವು ಪ್ರಶ್ನಿಸಿದೆ.

"ತಿದ್ದುಪಡಿಗೊಂಡ ನಿಯಮಗಳ ಅಡಿಯಲ್ಲಿ ಸ್ಥಾಪಿಸಲು ಸೂಚಿಸಲಾದ ಇಂತಹ ಸತ್ಯ ಪರಿಶೀಲನಾ ಘಟಕವು ಮುದ್ರಣ ಮಾಧ್ಯಮಕ್ಕೆ ಅಸ್ತಿತ್ವದಲ್ಲಿದೆಯೇ..? ಇದುವರೆಗೆ ಮುದ್ರಣ ಮಾಧ್ಯಮಕ್ಕೆ ಮಾಡದಿದ್ದರೆ, ಡಿಜಿಟಲ್ ಮಾಧ್ಯಮಕ್ಕೆ ಹೇಗೆ ಮಾಡಬಹುದು..? ಸರ್ಕಾರ ಸತ್ಯ ಪರಿಶೀಲನಾ ಘಟಕ ಮಾಡಲು ಉದ್ದೇಶಿಸಿದೆಯೇ?" ನ್ಯಾಯಮೂರ್ತಿ ಪಟೇಲ್ ಕೇಳಿದ್ದಾರೆ.
ಪತ್ರಿಕೆಯು ತನ್ನದೇ ಆದ ಡಿಜಿಟಲ್ ವೆಬ್ಸೈಟ್ ಹೊಂದಿದ್ದರೆ ಮತ್ತು ಮುದ್ರಣದಲ್ಲಿ ಬಳಸಲಾದ ವಿಷಯಗಳು ಅದರ ವೆಬ್ಸೈಟ್ನಲ್ಲಿ ಅಪ್ಲೋಡ್ ಆಗುವಂತೆಯೇ ಇದ್ದರೆ, ತಿದ್ದುಪಡಿ ಮಾಡಿದ ನಿಯಮಗಳು ಮುದ್ರಣ ಮಾಧ್ಯಮದಲ್ಲಿ ಮುದ್ರಿಸಲಾದ ವಿಷಯಕ್ಕೂ ಅನ್ವಯಿಸುತ್ತವೆ ಎಂದು ಪೀಠ ಹೇಳಿದೆ. ಈ ವಿಚಾರದಲ್ಲಿ ದ್ವಂದ್ವವಿದೆ ಎಂದು ಶದನ್ ಫರಾಸತ್ ನ್ಯಾಯಾಲಯಕ್ಕೆ ತಿಳಿಸಿದರು. ನ್ಯಾಯಾಲಯವು ಜುಲೈ 14 ರಂದು ವಿಚಾರಣೆಯನ್ನು ಮುಂದುವರೆಸಲಿದೆ.
ಈ ವರ್ಷದ ಏಪ್ರಿಲ್ 6 ರಂದು, ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು, 2021 ಗೆ ಕೆಲವು ತಿದ್ದುಪಡಿಗಳನ್ನು ಘೋಷಿಸಿದೆ. ಇದರಲ್ಲಿ ನಕಲಿ, ಸುಳ್ಳು ಅಥವಾ ತಪ್ಪುದಾರಿಗೆಳೆಯುವ ಆನ್ಲೈನ್ ವಿಷಯವನ್ನು ಪರಿಶೀಲಿಸಲು ಸತ್ಯ-ಪರಿಶೀಲನಾ ಘಟಕದ ನಿಬಂಧನೆಯೂ ಸೇರಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications